Advertisement
MIRROR FOCUS

ಸಕಾಲಿಕ ಮಳೆಯು ಕೃಷಿ ಹಾಗೂ ಗ್ರಾಮೀಣ ಬೇಡಿಕೆ ಈಡೇರಿಸುತ್ತದೆ | ಸಕಾಲಿಕವಾದ ಕೃಷಿ ಮೂಲಕ ಆದಾಯವೂ ಹೆಚ್ಚಿಸಬಹುದು | ಕ್ರೆಸಿಲ್‌ ವರದಿ |

Share

ನೈರುತ್ಯ ಮಾನ್ಸೂನ್ ಕೇರಳ ಮತ್ತು ಈಶಾನ್ಯದಲ್ಲಿ ಪ್ರವೇಶ ಮಾಡುತ್ತಿದ್ದಂತೆ, ಈ ವರ್ಷದ ಮಳೆಗಾಲದ ಸುತ್ತಲಿನ ನಿರೀಕ್ಷೆ ಮತ್ತು ಆತಂಕ ಎರಡೂ ಸೃಷ್ಟಿಯಾಗುತ್ತದೆ. ಉತ್ತಮ ಮಳೆಯಾದರೆ  ಕೃಷಿ ಆದಾಯವನ್ನು ಪುನರುಜ್ಜೀವನಗೊಳಿಸಲು ಮತ್ತು ಹಣದುಬ್ಬರವನ್ನು ನಿಯಂತ್ರಿಸಲು  ನೆರವಾದರೆ, ಕಡಿಮೆ ಮಳೆಯು ಇನ್ನಷ್ಟು ಆತಂಕಕ್ಕೆ ಕಾರಣವಾಗುತ್ತದೆ. ಹೀಗಾಗಿ ಉತ್ತಮ ಮತ್ತು ಸಕಾಲಿಕ ಮಳೆಯು ದೇಶವನ್ನು ಸಮಗ್ರ ಸ್ಥಿತಿಯತ್ತ ಕೊಂಡೊಯ್ಯುತ್ತದೆ.

ಈ ಬಗ್ಗೆ ಕ್ರಿಸಿಲ್ ವರದಿಯೊಂದನ್ನು ತಯಾರಿಸಿದೆ (Credit Rating Information Services of India Limited), ಅದರ ಪ್ರಕಾರ, ಉತ್ತಮ ಮಳೆಯು ಗ್ರಾಮೀಣ ಬೇಡಿಕೆಯನ್ನು ಪೂರೈಸುತ್ತದೆ. ಆದರೆ  ಹಿಂದಿನ ಆರ್ಥಿಕ ವರ್ಷದಲ್ಲಿ ಉಂಟಾದ ಹವಾಮಾನದ ಪರಿಣಾಮ ಸಂಕಷ್ಟ ಉಂಟಾಗಿತ್ತು, ಇದೀಗ ಈ ಬಾರಿಯ ಮಳೆ  ಪುನರುಜ್ಜೀವನದ ಲಕ್ಷಣಗಳನ್ನು ಆರಂಭದಲ್ಲಿ ತೋರಿಸಿದೆ.ಮಳೆ ಉತ್ತಮವಾದರೆ ಬೆಳೆ ಉತ್ಪಾದನೆಯು ಉತ್ತಮವಾಗಿ ಆಹಾರದ ಮೂಲಕ ಉಂಟಾಗುವ ಹಣದುಬ್ಬರವನ್ನು ಕಡಿಮೆಗೊಳಿಸಬಹುದು.ಭಾರತ ಹವಾಮಾನ ಇಲಾಖೆ  ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ನೈರುತ್ಯ ಮಾನ್ಸೂನ್‌ನ ಮುನ್ಸೂಚನೆಯನ್ನು ದೃಢಪಡಿಸಿದೆ, ಜೂನ್ ಮತ್ತು ಸೆಪ್ಟೆಂಬರ್ ನಡುವಿನ ಸರಾಸರಿ 106 ಪ್ರತಿಶತದಷ್ಟು ಮಳೆಯಾಗುತ್ತದೆ ಎಂದು ಹೇಳಿದೆ. ಹೀಗಾಗಿ ಈ ಬಾರಿಯ ಮಳೆಗಾಲ ನಿರೀಕ್ಷೆ ಉಂಟು ಮಾಡಿದೆ.

ಉಳುಮೆ ಮತ್ತು ಬಿತ್ತನೆಗೆ ಜೂನ್‌ನ ಸಾಮಾನ್ಯ ಮಳೆಯು ಕಾರಣವಾಗುತ್ತದೆ. ಆದರೆ ವಾಯುವ್ಯ ಮತ್ತು ಮಧ್ಯ ಭಾರತದಲ್ಲಿ  ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವು ಸವಾಲುಗಳನ್ನು ಉಂಟುಮಾಡುತ್ತದೆ. ಹೆಚ್ಚಿನ ತಾಪಮಾನವು ಕಾರ್ಮಿಕರ ಲಭ್ಯತೆ ಮತ್ತು ಜಲಾಶಯದ ನೀರಿನ ಮಟ್ಟದ ಮೇಲೆ ಪರಿಣಾಮ ಬೀರಬಹುದು. ಹೀಗಾಗಿ ಜೂನ್‌ ತಿಂಗಳ ಮಳೆಯು ಉಳುಮೆ ಹಾಗೂ ಬಿತ್ತನೆಯ ಮೇಲೆ ಪರಿಣಾಮ ಬೀರುತ್ತದೆ. ಮಳೆಯಾದರೆ ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಯಾಗುತ್ತದೆ, ಬಿತ್ತನೆಯೂ ನಡೆಯುತ್ತದೆ.

ಜುಲೈ ಮತ್ತು ಆಗಸ್ಟ್ ಮಳೆ ಬಿತ್ತನೆ ಚಟುವಟಿಕೆಯ ನಂತರ ಕೆಲಸಗಳಿಗೆ ಪ್ರಮುಖವಾಗಿದೆ. ಇಲ್ಲಿನ ಮಳೆಯ ಸಂಕಷ್ಟಗಳು ಬೆಳೆ ಇಳುವರಿ ಮೇಲೆ ಪರಿಣಾಮ ಬೀರಬಹುದು, ವಿಶೇಷವಾಗಿ ಕಳೆದ ವರ್ಷ ಮಳೆ ಕೊರತೆಯನ್ನು ಎದುರಿಸಿದ ಪ್ರದೇಶಗಳಲ್ಲಿ, ಉದಾಹರಣೆಗೆ ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ ಮತ್ತು ಒಡಿಶಾ ಮೊದಲಾದ ಕಡೆ ಇಳುವರಿಯಲ್ಲಿ ಕೊರತೆಯಾಗಿತ್ತು. ಹೀಗಾಗಿ ಮಳೆ ಹಂಚಿಕೆಯಲ್ಲಿ ಕೂಡಾ ಬದಲಾವಣೆಯಾದರೆ ಬಿತ್ತನೆ ಹಾಗೂ ಆ ನಂತರ ಎಲ್ಲಾ ಕಡೆಯೂ ಸಂಕಷ್ಟವಾಗುತ್ತದೆ. ಕಳೆದ ವರ್ಷ ಅಸಮರ್ಪಕ ಮಾನ್ಸೂನ್‌  ಅನೇಕ ಬೆಳೆಗಳ ಮೇಲೆ ಪರಿಣಾಮ ಬೀರಿತು. ಸತತ ಎರಡನೇ ವರ್ಷ ಮಳೆ ಕೊರತೆಯನ್ನು ಎದುರಿಸುತ್ತಿರುವ ಪ್ರದೇಶಗಳು ಈ ಬಾರಿಯೂ ಸಂಕಷ್ಟ ಎದುರಿಸಬಹುದು.

ಏಪ್ರಿಲ್ ಮತ್ತು ಮೇ ಈಗಾಗಲೇ ಸಾಮಾನ್ಯಕ್ಕಿಂತ ಹೆಚ್ಚಿನ ಹೀಟ್‌ ವೇವ್ ಅನುಭವಿಸಿದೆ, ಜೂನ್‌ ತಿಂಗಳು ಅದನ್ನು ಮಳೆಯಿಂದ ಸರಿಗಟ್ಟುವ ನಿರೀಕ್ಷೆ ಇತ್ತು. ಆದರೆ ಮಳೆಯಾದರೂ ಹಲವು ಕಡೆ ತಾಪಮಾನ ಕಡಿಮೆಯಾಗಿಲ್ಲ.ಹೀಟ್‌ ವೇವ್ ಕಾರಣದಿಂದ  ಪ್ರಮುಖ ಬೆಳೆಗಳು , ಬೇಸಿಗೆಯ ತರಕಾರಿಗಳ ಮೇಲೆ ಪರಿಣಾಮ ಬೀರಿದೆ. ಹೀಗಾಗಿ ಈಗ ರೈತರು ಕೂಡಾ ಹವಾಮಾನಕ್ಕೆ ಸರಿ ಹೊಂದುವ ಬೆಳೆಯ ಕಡೆಗೆ ಗಮನಹರಿಸುವ ಮೂಲಕ ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳಬೇಕಾಗಿದೆ. ರೈತರಿಗೆ ಸರಿಯಾದ ಸಮಯದಲ್ಲಿ ಮಳೆ ಸಿಕ್ಕಿದರೆ ಗ್ರಾಮೀಣ ಉದ್ಯೋಗವೂ, ಗ್ರಾಮೀಣ ಬೇಡಿಕೆಯೂ ಈಡೇರುತ್ತದೆ. ಹೀಗಾಗಿ ಮಳೆ, ಹವಾಮಾನವೇ ಪ್ರಮುಖವಾದ ವಿಷಯ ಈಗ.

Data Source: IANS

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago