ಇನ್ನು ಹಿರಿಯ ನಾಗರಿಕರಿಗೆ ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಸುಲಭ

November 24, 2022
9:35 PM

ಹಿರಿಯ ನಾಗರಿಕರಿಗೆ ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಇನ್ನು ಸುಲಭವಾಗಲಿದೆ. ಹಿರಿಯ ನಾಗರಿಕರಿಗಾಗಿಯೇ ಎರಡು ಸ್ಲಾಟ್‌ಗಳನ್ನು ಟಿಟಿಡಿ ಮೀಸಲಿಟ್ಟಿದೆ. ಪ್ರತಿ ದಿನ ಬೆಳಗ್ಗೆ 10 ಗಂಟೆ, ಮಧ್ಯಾಹ್ನ 3 ಗಂಟೆ ಸ್ಲಾಟ್‌ನಲ್ಲಿ ವಿಶೇಷವಾಗಿ ಹಿರಿಯ ನಾಗರಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.ಇದಕ್ಕಾಗಿ ವಯಸ್ಸು ನಮೂದಿಸಿರುವ ಪೋಟೋ ಇರುವ ಗುರುತಿನ ಪತ್ರ(ಆಧಾರ್‌)ವನ್ನು ಕೌಂಟರ್‌ನಲ್ಲಿ ಅವರು ತೋರಿಸಬೇಕಾಗುವುದು ಕಡ್ಡಾಯ.

ದರ್ಶನ ಉಚಿತವಾಗಿದೆ. ಜೊತೆಗೆ ಒಬ್ಬರಿಗೆ ಎರಡು ಲಾಡು ಪ್ರಸಾದಕ್ಕೆ 20 ರೂ. ಹಾಗೂ ಹೆಚ್ಚುವರಿ ಪ್ರತಿ ಲಾಡುಗೆ 25 ರೂ. ನೀಡಬೇಕಾಗುತ್ತದೆ. ಹಿರಿಯ ನಾಗರಿಕರಿಗಾಗಿ ವಿಶೇಷ ಪಥ ನಿರ್ಮಿಸಲಾಗಿದೆ. ಅವರು ಮೆಟ್ಟಿಲು ಹತ್ತಬೇಕಾಗಿಲ್ಲ. ದರ್ಶನದ ವೇಳೆ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಕಾರ್‌ ಪಾರ್ಕಿಂಗ್‌ನಿಂದ ದೇಗುಲ ಬಾಗಿಲಿಗೆ ಕರೆತರಲು ಬ್ಯಾಟರಿ ಕಾರ್‌ ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಾಗರಿಕರ ಸ್ಲಾಟ್‌ 30 ನಿಮಿಷಗಳು ಇದ್ದು, ಅಲ್ಲಿಯವರೆಗೆ ಇತರರ ದರ್ಶನ ಸ್ಥಗಿತಗೊಳಿಸಲಾಗುವುದು ಎಂದು ಟಿಟಿಡಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror