ಇನ್ನು ಹಿರಿಯ ನಾಗರಿಕರಿಗೆ ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಸುಲಭ

November 24, 2022
9:35 PM

ಹಿರಿಯ ನಾಗರಿಕರಿಗೆ ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಇನ್ನು ಸುಲಭವಾಗಲಿದೆ. ಹಿರಿಯ ನಾಗರಿಕರಿಗಾಗಿಯೇ ಎರಡು ಸ್ಲಾಟ್‌ಗಳನ್ನು ಟಿಟಿಡಿ ಮೀಸಲಿಟ್ಟಿದೆ. ಪ್ರತಿ ದಿನ ಬೆಳಗ್ಗೆ 10 ಗಂಟೆ, ಮಧ್ಯಾಹ್ನ 3 ಗಂಟೆ ಸ್ಲಾಟ್‌ನಲ್ಲಿ ವಿಶೇಷವಾಗಿ ಹಿರಿಯ ನಾಗರಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.ಇದಕ್ಕಾಗಿ ವಯಸ್ಸು ನಮೂದಿಸಿರುವ ಪೋಟೋ ಇರುವ ಗುರುತಿನ ಪತ್ರ(ಆಧಾರ್‌)ವನ್ನು ಕೌಂಟರ್‌ನಲ್ಲಿ ಅವರು ತೋರಿಸಬೇಕಾಗುವುದು ಕಡ್ಡಾಯ.

Advertisement
Advertisement

ದರ್ಶನ ಉಚಿತವಾಗಿದೆ. ಜೊತೆಗೆ ಒಬ್ಬರಿಗೆ ಎರಡು ಲಾಡು ಪ್ರಸಾದಕ್ಕೆ 20 ರೂ. ಹಾಗೂ ಹೆಚ್ಚುವರಿ ಪ್ರತಿ ಲಾಡುಗೆ 25 ರೂ. ನೀಡಬೇಕಾಗುತ್ತದೆ. ಹಿರಿಯ ನಾಗರಿಕರಿಗಾಗಿ ವಿಶೇಷ ಪಥ ನಿರ್ಮಿಸಲಾಗಿದೆ. ಅವರು ಮೆಟ್ಟಿಲು ಹತ್ತಬೇಕಾಗಿಲ್ಲ. ದರ್ಶನದ ವೇಳೆ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಕಾರ್‌ ಪಾರ್ಕಿಂಗ್‌ನಿಂದ ದೇಗುಲ ಬಾಗಿಲಿಗೆ ಕರೆತರಲು ಬ್ಯಾಟರಿ ಕಾರ್‌ ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಾಗರಿಕರ ಸ್ಲಾಟ್‌ 30 ನಿಮಿಷಗಳು ಇದ್ದು, ಅಲ್ಲಿಯವರೆಗೆ ಇತರರ ದರ್ಶನ ಸ್ಥಗಿತಗೊಳಿಸಲಾಗುವುದು ಎಂದು ಟಿಟಿಡಿ ತಿಳಿಸಿದೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?
April 25, 2024
11:48 PM
by: The Rural Mirror ಸುದ್ದಿಜಾಲ
ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |
April 25, 2024
3:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror