ಹಿರಿಯ ನಾಗರಿಕರಿಗೆ ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಇನ್ನು ಸುಲಭವಾಗಲಿದೆ. ಹಿರಿಯ ನಾಗರಿಕರಿಗಾಗಿಯೇ ಎರಡು ಸ್ಲಾಟ್ಗಳನ್ನು ಟಿಟಿಡಿ ಮೀಸಲಿಟ್ಟಿದೆ. ಪ್ರತಿ ದಿನ ಬೆಳಗ್ಗೆ 10 ಗಂಟೆ, ಮಧ್ಯಾಹ್ನ 3 ಗಂಟೆ ಸ್ಲಾಟ್ನಲ್ಲಿ ವಿಶೇಷವಾಗಿ ಹಿರಿಯ ನಾಗರಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.ಇದಕ್ಕಾಗಿ ವಯಸ್ಸು ನಮೂದಿಸಿರುವ ಪೋಟೋ ಇರುವ ಗುರುತಿನ ಪತ್ರ(ಆಧಾರ್)ವನ್ನು ಕೌಂಟರ್ನಲ್ಲಿ ಅವರು ತೋರಿಸಬೇಕಾಗುವುದು ಕಡ್ಡಾಯ.
ದರ್ಶನ ಉಚಿತವಾಗಿದೆ. ಜೊತೆಗೆ ಒಬ್ಬರಿಗೆ ಎರಡು ಲಾಡು ಪ್ರಸಾದಕ್ಕೆ 20 ರೂ. ಹಾಗೂ ಹೆಚ್ಚುವರಿ ಪ್ರತಿ ಲಾಡುಗೆ 25 ರೂ. ನೀಡಬೇಕಾಗುತ್ತದೆ. ಹಿರಿಯ ನಾಗರಿಕರಿಗಾಗಿ ವಿಶೇಷ ಪಥ ನಿರ್ಮಿಸಲಾಗಿದೆ. ಅವರು ಮೆಟ್ಟಿಲು ಹತ್ತಬೇಕಾಗಿಲ್ಲ. ದರ್ಶನದ ವೇಳೆ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಕಾರ್ ಪಾರ್ಕಿಂಗ್ನಿಂದ ದೇಗುಲ ಬಾಗಿಲಿಗೆ ಕರೆತರಲು ಬ್ಯಾಟರಿ ಕಾರ್ ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಾಗರಿಕರ ಸ್ಲಾಟ್ 30 ನಿಮಿಷಗಳು ಇದ್ದು, ಅಲ್ಲಿಯವರೆಗೆ ಇತರರ ದರ್ಶನ ಸ್ಥಗಿತಗೊಳಿಸಲಾಗುವುದು ಎಂದು ಟಿಟಿಡಿ ತಿಳಿಸಿದೆ.
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…