ತಿರುಪತಿಯಲ್ಲಿ ಭೀಕರ ಮಳೆ | ತಿರುಮಲ ಘಾಟ್‌ ರಸ್ತೆ ಬಂದ್ | ನೀರಿನಲ್ಲಿ ಕೊಚ್ಚಿ ಹೋದ ವಾಹನಗಳು..! |

November 18, 2021
11:47 PM

ವಾಯುಭಾರ ಕುಸಿತದ ಕಾರಣದಿಂದ ಭಾರೀ ಮಳೆಯ ಪ್ರಭಾವ ಆಂಧ್ರ ಪ್ರದೇಶದ ಮೇಲೂ ಬೀರಿದ್ದು ತಿರುಪತಿ ಹಾಗೂ ನೆಲ್ಲೂರು ನಗರದಲ್ಲಿ ವಿಪರೀತ ಮಳೆಯಾಗಿದೆ. ಭಾರೀ ಮಳೆಯ ಕಾರಣದಿಂದ ಭಾರೀ ಮಳೆಯಿಂದಾಗಿ ತಿರುಮಲ ಬೆಟ್ಟ ಘಾಟಿ ರಸ್ತೆ ಬಂದ್ ಮಾಡಲಾಗಿದೆ. 

Advertisement
Advertisement

 

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಿರುಪತಿ ಮತ್ತು ಚಿತ್ತೂರಿನಲ್ಲಿ ಭಾರೀ ಮಳೆಯಾಗಿದೆ. ತಿರುಪತಿ-ಕಡಪ ಹೆದ್ದಾರಿಯಲ್ಲಿ ವ್ಯಕ್ತಿಯೊಬ್ಬರು ಪ್ರವಾಹದಲ್ಲಿ ಕೊಚ್ಚಿಹೋಗುತ್ತಿದ್ದ ದೃಶ್ಯ ಇದೀಗ ಕಂಡುಬಂದಿದೆ.  ಈ ನಡುವೆ ತಿರುಪತಿ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ನೀರು ಉಕ್ಕಿ ಹರಿದು  ವಾಹನಗಳು, ಹಸುಗಳು ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಕಂಡುಬಂದಿದೆ. ಬಹುತೇಕ ಎಲ್ಲ ಪ್ರದೇಶಗಳು ಜಲಾವೃತವಾಗಿರುವುದಷ್ಟೇ ಅಲ್ಲದೆ, ನಗರದ ರಸ್ತೆಗಳಲ್ಲಿ ಕೃತಕ ಹೊಳೆಗಳು ಸೃಷ್ಟಿಯಾಗಿವೆ.

ಆಂಧ್ರ ಪ್ರದೇಶದದ ಕರಾವಳಿ ಹಾಗೂ ಇತರ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಸುತ್ತ ಮುತ್ತಲ ಜಿಲ್ಲೆಗಳಲ್ಲೂ ಮಳೆ ಆರ್ಭಟ ಜೋರಾಗಿಯೇ ಇದೆ.  ತಿರುಪತಿ ಭಾಗಶಃ ಮುಳುಗಿದೆ.ತಿರುಪತಿಯಲ್ಲಿ ವಾಸಿಸುತ್ತಿದ್ದ ಜನರು 1996 ರಿಂದ ಈ ದೊಡ್ಡ ಪ್ರವಾಹವನ್ನು ನೋಡಿಲ್ಲ ಎಂದು ಹೇಳಿಕೊಂಡಿದ್ದಾರೆ.  ಅಕ್ಷರಶಃ ನಗರದ ಪ್ರತಿಯೊಂದು ರಸ್ತೆಗಳು ಜಲಾವೃತವಾಗಿವೆ. ಇಂದು ರಾತ್ರಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ, ಈಗಾಗಲೇ ಹಲವು ಕಡೆ ಭೂಕುಸಿತ ಕೂಡಾ ಸಂಭವಿಸಿದೆ.

Advertisement

 

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಿರುಪತಿ ಸಮೀಪದ ತಿರುಮಲದಲ್ಲಿರುವ ಪುರಾತನ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಘಾಟ್ ರಸ್ತೆಗಳನ್ನು ಗುರುವಾರ ಸಂಜೆಯಿಂದ ಅನಿರ್ದಿಷ್ಟಾವಧಿಗೆ ವಾಹನ ಸಂಚಾರಕ್ಕೆ ಮುಚ್ಚಲಾಗಿದೆ ಹಾಗೂ ಬೆಟ್ಟ-ದೇವಾಲಯಕ್ಕೆ ಹೋಗುವ ಮೆಟ್ಟಿಲನ್ನು ಸಹ ಮುಚ್ಚಲಾಗಿದೆ ಎಂದು ದೇಗುಲದ ಅಧಿಕಾರಿ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ
May 29, 2025
2:42 PM
by: ಸಾಯಿಶೇಖರ್ ಕರಿಕಳ
ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ
May 29, 2025
7:40 AM
by: The Rural Mirror ಸುದ್ದಿಜಾಲ
ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|
May 29, 2025
7:37 AM
by: ದ ರೂರಲ್ ಮಿರರ್.ಕಾಂ
ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
May 29, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group