ವಾಯುಭಾರ ಕುಸಿತದ ಕಾರಣದಿಂದ ಭಾರೀ ಮಳೆಯ ಪ್ರಭಾವ ಆಂಧ್ರ ಪ್ರದೇಶದ ಮೇಲೂ ಬೀರಿದ್ದು ತಿರುಪತಿ ಹಾಗೂ ನೆಲ್ಲೂರು ನಗರದಲ್ಲಿ ವಿಪರೀತ ಮಳೆಯಾಗಿದೆ. ಭಾರೀ ಮಳೆಯ ಕಾರಣದಿಂದ ಭಾರೀ ಮಳೆಯಿಂದಾಗಿ ತಿರುಮಲ ಬೆಟ್ಟ ಘಾಟಿ ರಸ್ತೆ ಬಂದ್ ಮಾಡಲಾಗಿದೆ.
#rain #tirupatirains #ತಿರುಪತಿ ಯಲ್ಲಿ ಭಾರೀ ಮಳೆ
Advertisement– The Rural Mirror (@ruralmirror) 18 Nov 2021
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಿರುಪತಿ ಮತ್ತು ಚಿತ್ತೂರಿನಲ್ಲಿ ಭಾರೀ ಮಳೆಯಾಗಿದೆ. ತಿರುಪತಿ-ಕಡಪ ಹೆದ್ದಾರಿಯಲ್ಲಿ ವ್ಯಕ್ತಿಯೊಬ್ಬರು ಪ್ರವಾಹದಲ್ಲಿ ಕೊಚ್ಚಿಹೋಗುತ್ತಿದ್ದ ದೃಶ್ಯ ಇದೀಗ ಕಂಡುಬಂದಿದೆ. ಈ ನಡುವೆ ತಿರುಪತಿ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ನೀರು ಉಕ್ಕಿ ಹರಿದು ವಾಹನಗಳು, ಹಸುಗಳು ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಕಂಡುಬಂದಿದೆ. ಬಹುತೇಕ ಎಲ್ಲ ಪ್ರದೇಶಗಳು ಜಲಾವೃತವಾಗಿರುವುದಷ್ಟೇ ಅಲ್ಲದೆ, ನಗರದ ರಸ್ತೆಗಳಲ್ಲಿ ಕೃತಕ ಹೊಳೆಗಳು ಸೃಷ್ಟಿಯಾಗಿವೆ.
ಆಂಧ್ರ ಪ್ರದೇಶದದ ಕರಾವಳಿ ಹಾಗೂ ಇತರ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಸುತ್ತ ಮುತ್ತಲ ಜಿಲ್ಲೆಗಳಲ್ಲೂ ಮಳೆ ಆರ್ಭಟ ಜೋರಾಗಿಯೇ ಇದೆ. ತಿರುಪತಿ ಭಾಗಶಃ ಮುಳುಗಿದೆ.ತಿರುಪತಿಯಲ್ಲಿ ವಾಸಿಸುತ್ತಿದ್ದ ಜನರು 1996 ರಿಂದ ಈ ದೊಡ್ಡ ಪ್ರವಾಹವನ್ನು ನೋಡಿಲ್ಲ ಎಂದು ಹೇಳಿಕೊಂಡಿದ್ದಾರೆ. ಅಕ್ಷರಶಃ ನಗರದ ಪ್ರತಿಯೊಂದು ರಸ್ತೆಗಳು ಜಲಾವೃತವಾಗಿವೆ. ಇಂದು ರಾತ್ರಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ, ಈಗಾಗಲೇ ಹಲವು ಕಡೆ ಭೂಕುಸಿತ ಕೂಡಾ ಸಂಭವಿಸಿದೆ.
ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಿರುಪತಿ ಸಮೀಪದ ತಿರುಮಲದಲ್ಲಿರುವ ಪುರಾತನ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಘಾಟ್ ರಸ್ತೆಗಳನ್ನು ಗುರುವಾರ ಸಂಜೆಯಿಂದ ಅನಿರ್ದಿಷ್ಟಾವಧಿಗೆ ವಾಹನ ಸಂಚಾರಕ್ಕೆ ಮುಚ್ಚಲಾಗಿದೆ ಹಾಗೂ ಬೆಟ್ಟ-ದೇವಾಲಯಕ್ಕೆ ಹೋಗುವ ಮೆಟ್ಟಿಲನ್ನು ಸಹ ಮುಚ್ಚಲಾಗಿದೆ ಎಂದು ದೇಗುಲದ ಅಧಿಕಾರಿ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ವಿಧಾನ ಪರಿಷತ್ ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…
ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಮಾರ್ಗವನ್ನು ಮತ್ತಷ್ಟು…
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…