Advertisement
MIRROR FOCUS

ತಿರುಪತಿಯಲ್ಲಿ ಭೀಕರ ಮಳೆ | ತಿರುಮಲ ಘಾಟ್‌ ರಸ್ತೆ ಬಂದ್ | ನೀರಿನಲ್ಲಿ ಕೊಚ್ಚಿ ಹೋದ ವಾಹನಗಳು..! |

Share

ವಾಯುಭಾರ ಕುಸಿತದ ಕಾರಣದಿಂದ ಭಾರೀ ಮಳೆಯ ಪ್ರಭಾವ ಆಂಧ್ರ ಪ್ರದೇಶದ ಮೇಲೂ ಬೀರಿದ್ದು ತಿರುಪತಿ ಹಾಗೂ ನೆಲ್ಲೂರು ನಗರದಲ್ಲಿ ವಿಪರೀತ ಮಳೆಯಾಗಿದೆ. ಭಾರೀ ಮಳೆಯ ಕಾರಣದಿಂದ ಭಾರೀ ಮಳೆಯಿಂದಾಗಿ ತಿರುಮಲ ಬೆಟ್ಟ ಘಾಟಿ ರಸ್ತೆ ಬಂದ್ ಮಾಡಲಾಗಿದೆ. 

 

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಿರುಪತಿ ಮತ್ತು ಚಿತ್ತೂರಿನಲ್ಲಿ ಭಾರೀ ಮಳೆಯಾಗಿದೆ. ತಿರುಪತಿ-ಕಡಪ ಹೆದ್ದಾರಿಯಲ್ಲಿ ವ್ಯಕ್ತಿಯೊಬ್ಬರು ಪ್ರವಾಹದಲ್ಲಿ ಕೊಚ್ಚಿಹೋಗುತ್ತಿದ್ದ ದೃಶ್ಯ ಇದೀಗ ಕಂಡುಬಂದಿದೆ.  ಈ ನಡುವೆ ತಿರುಪತಿ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ನೀರು ಉಕ್ಕಿ ಹರಿದು  ವಾಹನಗಳು, ಹಸುಗಳು ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಕಂಡುಬಂದಿದೆ. ಬಹುತೇಕ ಎಲ್ಲ ಪ್ರದೇಶಗಳು ಜಲಾವೃತವಾಗಿರುವುದಷ್ಟೇ ಅಲ್ಲದೆ, ನಗರದ ರಸ್ತೆಗಳಲ್ಲಿ ಕೃತಕ ಹೊಳೆಗಳು ಸೃಷ್ಟಿಯಾಗಿವೆ.

ಆಂಧ್ರ ಪ್ರದೇಶದದ ಕರಾವಳಿ ಹಾಗೂ ಇತರ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಸುತ್ತ ಮುತ್ತಲ ಜಿಲ್ಲೆಗಳಲ್ಲೂ ಮಳೆ ಆರ್ಭಟ ಜೋರಾಗಿಯೇ ಇದೆ.  ತಿರುಪತಿ ಭಾಗಶಃ ಮುಳುಗಿದೆ.ತಿರುಪತಿಯಲ್ಲಿ ವಾಸಿಸುತ್ತಿದ್ದ ಜನರು 1996 ರಿಂದ ಈ ದೊಡ್ಡ ಪ್ರವಾಹವನ್ನು ನೋಡಿಲ್ಲ ಎಂದು ಹೇಳಿಕೊಂಡಿದ್ದಾರೆ.  ಅಕ್ಷರಶಃ ನಗರದ ಪ್ರತಿಯೊಂದು ರಸ್ತೆಗಳು ಜಲಾವೃತವಾಗಿವೆ. ಇಂದು ರಾತ್ರಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ, ಈಗಾಗಲೇ ಹಲವು ಕಡೆ ಭೂಕುಸಿತ ಕೂಡಾ ಸಂಭವಿಸಿದೆ.

 

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಿರುಪತಿ ಸಮೀಪದ ತಿರುಮಲದಲ್ಲಿರುವ ಪುರಾತನ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಘಾಟ್ ರಸ್ತೆಗಳನ್ನು ಗುರುವಾರ ಸಂಜೆಯಿಂದ ಅನಿರ್ದಿಷ್ಟಾವಧಿಗೆ ವಾಹನ ಸಂಚಾರಕ್ಕೆ ಮುಚ್ಚಲಾಗಿದೆ ಹಾಗೂ ಬೆಟ್ಟ-ದೇವಾಲಯಕ್ಕೆ ಹೋಗುವ ಮೆಟ್ಟಿಲನ್ನು ಸಹ ಮುಚ್ಚಲಾಗಿದೆ ಎಂದು ದೇಗುಲದ ಅಧಿಕಾರಿ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

1 hour ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

2 hours ago

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

6 hours ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

7 hours ago

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

1 day ago