Advertisement
MIRROR FOCUS

ತಿರುಪತಿಯಲ್ಲಿ ಭೀಕರ ಮಳೆ | ತಿರುಮಲ ಘಾಟ್‌ ರಸ್ತೆ ಬಂದ್ | ನೀರಿನಲ್ಲಿ ಕೊಚ್ಚಿ ಹೋದ ವಾಹನಗಳು..! |

Share

ವಾಯುಭಾರ ಕುಸಿತದ ಕಾರಣದಿಂದ ಭಾರೀ ಮಳೆಯ ಪ್ರಭಾವ ಆಂಧ್ರ ಪ್ರದೇಶದ ಮೇಲೂ ಬೀರಿದ್ದು ತಿರುಪತಿ ಹಾಗೂ ನೆಲ್ಲೂರು ನಗರದಲ್ಲಿ ವಿಪರೀತ ಮಳೆಯಾಗಿದೆ. ಭಾರೀ ಮಳೆಯ ಕಾರಣದಿಂದ ಭಾರೀ ಮಳೆಯಿಂದಾಗಿ ತಿರುಮಲ ಬೆಟ್ಟ ಘಾಟಿ ರಸ್ತೆ ಬಂದ್ ಮಾಡಲಾಗಿದೆ. 

 

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಿರುಪತಿ ಮತ್ತು ಚಿತ್ತೂರಿನಲ್ಲಿ ಭಾರೀ ಮಳೆಯಾಗಿದೆ. ತಿರುಪತಿ-ಕಡಪ ಹೆದ್ದಾರಿಯಲ್ಲಿ ವ್ಯಕ್ತಿಯೊಬ್ಬರು ಪ್ರವಾಹದಲ್ಲಿ ಕೊಚ್ಚಿಹೋಗುತ್ತಿದ್ದ ದೃಶ್ಯ ಇದೀಗ ಕಂಡುಬಂದಿದೆ.  ಈ ನಡುವೆ ತಿರುಪತಿ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ನೀರು ಉಕ್ಕಿ ಹರಿದು  ವಾಹನಗಳು, ಹಸುಗಳು ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಕಂಡುಬಂದಿದೆ. ಬಹುತೇಕ ಎಲ್ಲ ಪ್ರದೇಶಗಳು ಜಲಾವೃತವಾಗಿರುವುದಷ್ಟೇ ಅಲ್ಲದೆ, ನಗರದ ರಸ್ತೆಗಳಲ್ಲಿ ಕೃತಕ ಹೊಳೆಗಳು ಸೃಷ್ಟಿಯಾಗಿವೆ.

ಆಂಧ್ರ ಪ್ರದೇಶದದ ಕರಾವಳಿ ಹಾಗೂ ಇತರ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಸುತ್ತ ಮುತ್ತಲ ಜಿಲ್ಲೆಗಳಲ್ಲೂ ಮಳೆ ಆರ್ಭಟ ಜೋರಾಗಿಯೇ ಇದೆ.  ತಿರುಪತಿ ಭಾಗಶಃ ಮುಳುಗಿದೆ.ತಿರುಪತಿಯಲ್ಲಿ ವಾಸಿಸುತ್ತಿದ್ದ ಜನರು 1996 ರಿಂದ ಈ ದೊಡ್ಡ ಪ್ರವಾಹವನ್ನು ನೋಡಿಲ್ಲ ಎಂದು ಹೇಳಿಕೊಂಡಿದ್ದಾರೆ.  ಅಕ್ಷರಶಃ ನಗರದ ಪ್ರತಿಯೊಂದು ರಸ್ತೆಗಳು ಜಲಾವೃತವಾಗಿವೆ. ಇಂದು ರಾತ್ರಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ, ಈಗಾಗಲೇ ಹಲವು ಕಡೆ ಭೂಕುಸಿತ ಕೂಡಾ ಸಂಭವಿಸಿದೆ.

 

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಿರುಪತಿ ಸಮೀಪದ ತಿರುಮಲದಲ್ಲಿರುವ ಪುರಾತನ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಘಾಟ್ ರಸ್ತೆಗಳನ್ನು ಗುರುವಾರ ಸಂಜೆಯಿಂದ ಅನಿರ್ದಿಷ್ಟಾವಧಿಗೆ ವಾಹನ ಸಂಚಾರಕ್ಕೆ ಮುಚ್ಚಲಾಗಿದೆ ಹಾಗೂ ಬೆಟ್ಟ-ದೇವಾಲಯಕ್ಕೆ ಹೋಗುವ ಮೆಟ್ಟಿಲನ್ನು ಸಹ ಮುಚ್ಚಲಾಗಿದೆ ಎಂದು ದೇಗುಲದ ಅಧಿಕಾರಿ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

6 minutes ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

5 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

5 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

5 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

20 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

21 hours ago