Advertisement
MIRROR FOCUS

ತಿರುಪತಿಯಲ್ಲಿ ಭೀಕರ ಮಳೆ | ತಿರುಮಲ ಘಾಟ್‌ ರಸ್ತೆ ಬಂದ್ | ನೀರಿನಲ್ಲಿ ಕೊಚ್ಚಿ ಹೋದ ವಾಹನಗಳು..! |

Share

ವಾಯುಭಾರ ಕುಸಿತದ ಕಾರಣದಿಂದ ಭಾರೀ ಮಳೆಯ ಪ್ರಭಾವ ಆಂಧ್ರ ಪ್ರದೇಶದ ಮೇಲೂ ಬೀರಿದ್ದು ತಿರುಪತಿ ಹಾಗೂ ನೆಲ್ಲೂರು ನಗರದಲ್ಲಿ ವಿಪರೀತ ಮಳೆಯಾಗಿದೆ. ಭಾರೀ ಮಳೆಯ ಕಾರಣದಿಂದ ಭಾರೀ ಮಳೆಯಿಂದಾಗಿ ತಿರುಮಲ ಬೆಟ್ಟ ಘಾಟಿ ರಸ್ತೆ ಬಂದ್ ಮಾಡಲಾಗಿದೆ. 

Advertisement
Advertisement
Advertisement

 

Advertisement

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಿರುಪತಿ ಮತ್ತು ಚಿತ್ತೂರಿನಲ್ಲಿ ಭಾರೀ ಮಳೆಯಾಗಿದೆ. ತಿರುಪತಿ-ಕಡಪ ಹೆದ್ದಾರಿಯಲ್ಲಿ ವ್ಯಕ್ತಿಯೊಬ್ಬರು ಪ್ರವಾಹದಲ್ಲಿ ಕೊಚ್ಚಿಹೋಗುತ್ತಿದ್ದ ದೃಶ್ಯ ಇದೀಗ ಕಂಡುಬಂದಿದೆ.  ಈ ನಡುವೆ ತಿರುಪತಿ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ನೀರು ಉಕ್ಕಿ ಹರಿದು  ವಾಹನಗಳು, ಹಸುಗಳು ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಕಂಡುಬಂದಿದೆ. ಬಹುತೇಕ ಎಲ್ಲ ಪ್ರದೇಶಗಳು ಜಲಾವೃತವಾಗಿರುವುದಷ್ಟೇ ಅಲ್ಲದೆ, ನಗರದ ರಸ್ತೆಗಳಲ್ಲಿ ಕೃತಕ ಹೊಳೆಗಳು ಸೃಷ್ಟಿಯಾಗಿವೆ.

Advertisement

ಆಂಧ್ರ ಪ್ರದೇಶದದ ಕರಾವಳಿ ಹಾಗೂ ಇತರ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಸುತ್ತ ಮುತ್ತಲ ಜಿಲ್ಲೆಗಳಲ್ಲೂ ಮಳೆ ಆರ್ಭಟ ಜೋರಾಗಿಯೇ ಇದೆ.  ತಿರುಪತಿ ಭಾಗಶಃ ಮುಳುಗಿದೆ.ತಿರುಪತಿಯಲ್ಲಿ ವಾಸಿಸುತ್ತಿದ್ದ ಜನರು 1996 ರಿಂದ ಈ ದೊಡ್ಡ ಪ್ರವಾಹವನ್ನು ನೋಡಿಲ್ಲ ಎಂದು ಹೇಳಿಕೊಂಡಿದ್ದಾರೆ.  ಅಕ್ಷರಶಃ ನಗರದ ಪ್ರತಿಯೊಂದು ರಸ್ತೆಗಳು ಜಲಾವೃತವಾಗಿವೆ. ಇಂದು ರಾತ್ರಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ, ಈಗಾಗಲೇ ಹಲವು ಕಡೆ ಭೂಕುಸಿತ ಕೂಡಾ ಸಂಭವಿಸಿದೆ.

Advertisement

 

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಿರುಪತಿ ಸಮೀಪದ ತಿರುಮಲದಲ್ಲಿರುವ ಪುರಾತನ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಘಾಟ್ ರಸ್ತೆಗಳನ್ನು ಗುರುವಾರ ಸಂಜೆಯಿಂದ ಅನಿರ್ದಿಷ್ಟಾವಧಿಗೆ ವಾಹನ ಸಂಚಾರಕ್ಕೆ ಮುಚ್ಚಲಾಗಿದೆ ಹಾಗೂ ಬೆಟ್ಟ-ದೇವಾಲಯಕ್ಕೆ ಹೋಗುವ ಮೆಟ್ಟಿಲನ್ನು ಸಹ ಮುಚ್ಚಲಾಗಿದೆ ಎಂದು ದೇಗುಲದ ಅಧಿಕಾರಿ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

12 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

12 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

12 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

13 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

15 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

17 hours ago