ವಾಯುಭಾರ ಕುಸಿತದ ಕಾರಣದಿಂದ ಭಾರೀ ಮಳೆಯ ಪ್ರಭಾವ ಆಂಧ್ರ ಪ್ರದೇಶದ ಮೇಲೂ ಬೀರಿದ್ದು ತಿರುಪತಿ ಹಾಗೂ ನೆಲ್ಲೂರು ನಗರದಲ್ಲಿ ವಿಪರೀತ ಮಳೆಯಾಗಿದೆ. ಭಾರೀ ಮಳೆಯ ಕಾರಣದಿಂದ ಭಾರೀ ಮಳೆಯಿಂದಾಗಿ ತಿರುಮಲ ಬೆಟ್ಟ ಘಾಟಿ ರಸ್ತೆ ಬಂದ್ ಮಾಡಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಿರುಪತಿ ಮತ್ತು ಚಿತ್ತೂರಿನಲ್ಲಿ ಭಾರೀ ಮಳೆಯಾಗಿದೆ. ತಿರುಪತಿ-ಕಡಪ ಹೆದ್ದಾರಿಯಲ್ಲಿ ವ್ಯಕ್ತಿಯೊಬ್ಬರು ಪ್ರವಾಹದಲ್ಲಿ ಕೊಚ್ಚಿಹೋಗುತ್ತಿದ್ದ ದೃಶ್ಯ ಇದೀಗ ಕಂಡುಬಂದಿದೆ. ಈ ನಡುವೆ ತಿರುಪತಿ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ನೀರು ಉಕ್ಕಿ ಹರಿದು ವಾಹನಗಳು, ಹಸುಗಳು ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಕಂಡುಬಂದಿದೆ. ಬಹುತೇಕ ಎಲ್ಲ ಪ್ರದೇಶಗಳು ಜಲಾವೃತವಾಗಿರುವುದಷ್ಟೇ ಅಲ್ಲದೆ, ನಗರದ ರಸ್ತೆಗಳಲ್ಲಿ ಕೃತಕ ಹೊಳೆಗಳು ಸೃಷ್ಟಿಯಾಗಿವೆ.
ಆಂಧ್ರ ಪ್ರದೇಶದದ ಕರಾವಳಿ ಹಾಗೂ ಇತರ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಸುತ್ತ ಮುತ್ತಲ ಜಿಲ್ಲೆಗಳಲ್ಲೂ ಮಳೆ ಆರ್ಭಟ ಜೋರಾಗಿಯೇ ಇದೆ. ತಿರುಪತಿ ಭಾಗಶಃ ಮುಳುಗಿದೆ.ತಿರುಪತಿಯಲ್ಲಿ ವಾಸಿಸುತ್ತಿದ್ದ ಜನರು 1996 ರಿಂದ ಈ ದೊಡ್ಡ ಪ್ರವಾಹವನ್ನು ನೋಡಿಲ್ಲ ಎಂದು ಹೇಳಿಕೊಂಡಿದ್ದಾರೆ. ಅಕ್ಷರಶಃ ನಗರದ ಪ್ರತಿಯೊಂದು ರಸ್ತೆಗಳು ಜಲಾವೃತವಾಗಿವೆ. ಇಂದು ರಾತ್ರಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ, ಈಗಾಗಲೇ ಹಲವು ಕಡೆ ಭೂಕುಸಿತ ಕೂಡಾ ಸಂಭವಿಸಿದೆ.
ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಿರುಪತಿ ಸಮೀಪದ ತಿರುಮಲದಲ್ಲಿರುವ ಪುರಾತನ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಘಾಟ್ ರಸ್ತೆಗಳನ್ನು ಗುರುವಾರ ಸಂಜೆಯಿಂದ ಅನಿರ್ದಿಷ್ಟಾವಧಿಗೆ ವಾಹನ ಸಂಚಾರಕ್ಕೆ ಮುಚ್ಚಲಾಗಿದೆ ಹಾಗೂ ಬೆಟ್ಟ-ದೇವಾಲಯಕ್ಕೆ ಹೋಗುವ ಮೆಟ್ಟಿಲನ್ನು ಸಹ ಮುಚ್ಚಲಾಗಿದೆ ಎಂದು ದೇಗುಲದ ಅಧಿಕಾರಿ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…