ವಾಯುಭಾರ ಕುಸಿತದ ಕಾರಣದಿಂದ ಭಾರೀ ಮಳೆಯ ಪ್ರಭಾವ ಆಂಧ್ರ ಪ್ರದೇಶದ ಮೇಲೂ ಬೀರಿದ್ದು ತಿರುಪತಿ ಹಾಗೂ ನೆಲ್ಲೂರು ನಗರದಲ್ಲಿ ವಿಪರೀತ ಮಳೆಯಾಗಿದೆ. ಭಾರೀ ಮಳೆಯ ಕಾರಣದಿಂದ ಭಾರೀ ಮಳೆಯಿಂದಾಗಿ ತಿರುಮಲ ಬೆಟ್ಟ ಘಾಟಿ ರಸ್ತೆ ಬಂದ್ ಮಾಡಲಾಗಿದೆ.
#rain #tirupatirains #ತಿರುಪತಿ ಯಲ್ಲಿ ಭಾರೀ ಮಳೆ
Advertisement– The Rural Mirror (@ruralmirror) 18 Nov 2021
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಿರುಪತಿ ಮತ್ತು ಚಿತ್ತೂರಿನಲ್ಲಿ ಭಾರೀ ಮಳೆಯಾಗಿದೆ. ತಿರುಪತಿ-ಕಡಪ ಹೆದ್ದಾರಿಯಲ್ಲಿ ವ್ಯಕ್ತಿಯೊಬ್ಬರು ಪ್ರವಾಹದಲ್ಲಿ ಕೊಚ್ಚಿಹೋಗುತ್ತಿದ್ದ ದೃಶ್ಯ ಇದೀಗ ಕಂಡುಬಂದಿದೆ. ಈ ನಡುವೆ ತಿರುಪತಿ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ನೀರು ಉಕ್ಕಿ ಹರಿದು ವಾಹನಗಳು, ಹಸುಗಳು ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಕಂಡುಬಂದಿದೆ. ಬಹುತೇಕ ಎಲ್ಲ ಪ್ರದೇಶಗಳು ಜಲಾವೃತವಾಗಿರುವುದಷ್ಟೇ ಅಲ್ಲದೆ, ನಗರದ ರಸ್ತೆಗಳಲ್ಲಿ ಕೃತಕ ಹೊಳೆಗಳು ಸೃಷ್ಟಿಯಾಗಿವೆ.
ಆಂಧ್ರ ಪ್ರದೇಶದದ ಕರಾವಳಿ ಹಾಗೂ ಇತರ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಸುತ್ತ ಮುತ್ತಲ ಜಿಲ್ಲೆಗಳಲ್ಲೂ ಮಳೆ ಆರ್ಭಟ ಜೋರಾಗಿಯೇ ಇದೆ. ತಿರುಪತಿ ಭಾಗಶಃ ಮುಳುಗಿದೆ.ತಿರುಪತಿಯಲ್ಲಿ ವಾಸಿಸುತ್ತಿದ್ದ ಜನರು 1996 ರಿಂದ ಈ ದೊಡ್ಡ ಪ್ರವಾಹವನ್ನು ನೋಡಿಲ್ಲ ಎಂದು ಹೇಳಿಕೊಂಡಿದ್ದಾರೆ. ಅಕ್ಷರಶಃ ನಗರದ ಪ್ರತಿಯೊಂದು ರಸ್ತೆಗಳು ಜಲಾವೃತವಾಗಿವೆ. ಇಂದು ರಾತ್ರಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ, ಈಗಾಗಲೇ ಹಲವು ಕಡೆ ಭೂಕುಸಿತ ಕೂಡಾ ಸಂಭವಿಸಿದೆ.
ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಿರುಪತಿ ಸಮೀಪದ ತಿರುಮಲದಲ್ಲಿರುವ ಪುರಾತನ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಘಾಟ್ ರಸ್ತೆಗಳನ್ನು ಗುರುವಾರ ಸಂಜೆಯಿಂದ ಅನಿರ್ದಿಷ್ಟಾವಧಿಗೆ ವಾಹನ ಸಂಚಾರಕ್ಕೆ ಮುಚ್ಚಲಾಗಿದೆ ಹಾಗೂ ಬೆಟ್ಟ-ದೇವಾಲಯಕ್ಕೆ ಹೋಗುವ ಮೆಟ್ಟಿಲನ್ನು ಸಹ ಮುಚ್ಚಲಾಗಿದೆ ಎಂದು ದೇಗುಲದ ಅಧಿಕಾರಿ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…
ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…
ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…
ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…