ವಾಯುಭಾರ ಕುಸಿತದ ಕಾರಣದಿಂದ ಭಾರೀ ಮಳೆಯ ಪ್ರಭಾವ ಆಂಧ್ರ ಪ್ರದೇಶದ ಮೇಲೂ ಬೀರಿದ್ದು ತಿರುಪತಿ ಹಾಗೂ ನೆಲ್ಲೂರು ನಗರದಲ್ಲಿ ವಿಪರೀತ ಮಳೆಯಾಗಿದೆ. ಭಾರೀ ಮಳೆಯ ಕಾರಣದಿಂದ ಭಾರೀ ಮಳೆಯಿಂದಾಗಿ ತಿರುಮಲ ಬೆಟ್ಟ ಘಾಟಿ ರಸ್ತೆ ಬಂದ್ ಮಾಡಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಿರುಪತಿ ಮತ್ತು ಚಿತ್ತೂರಿನಲ್ಲಿ ಭಾರೀ ಮಳೆಯಾಗಿದೆ. ತಿರುಪತಿ-ಕಡಪ ಹೆದ್ದಾರಿಯಲ್ಲಿ ವ್ಯಕ್ತಿಯೊಬ್ಬರು ಪ್ರವಾಹದಲ್ಲಿ ಕೊಚ್ಚಿಹೋಗುತ್ತಿದ್ದ ದೃಶ್ಯ ಇದೀಗ ಕಂಡುಬಂದಿದೆ. ಈ ನಡುವೆ ತಿರುಪತಿ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ನೀರು ಉಕ್ಕಿ ಹರಿದು ವಾಹನಗಳು, ಹಸುಗಳು ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಕಂಡುಬಂದಿದೆ. ಬಹುತೇಕ ಎಲ್ಲ ಪ್ರದೇಶಗಳು ಜಲಾವೃತವಾಗಿರುವುದಷ್ಟೇ ಅಲ್ಲದೆ, ನಗರದ ರಸ್ತೆಗಳಲ್ಲಿ ಕೃತಕ ಹೊಳೆಗಳು ಸೃಷ್ಟಿಯಾಗಿವೆ.
ಆಂಧ್ರ ಪ್ರದೇಶದದ ಕರಾವಳಿ ಹಾಗೂ ಇತರ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಸುತ್ತ ಮುತ್ತಲ ಜಿಲ್ಲೆಗಳಲ್ಲೂ ಮಳೆ ಆರ್ಭಟ ಜೋರಾಗಿಯೇ ಇದೆ. ತಿರುಪತಿ ಭಾಗಶಃ ಮುಳುಗಿದೆ.ತಿರುಪತಿಯಲ್ಲಿ ವಾಸಿಸುತ್ತಿದ್ದ ಜನರು 1996 ರಿಂದ ಈ ದೊಡ್ಡ ಪ್ರವಾಹವನ್ನು ನೋಡಿಲ್ಲ ಎಂದು ಹೇಳಿಕೊಂಡಿದ್ದಾರೆ. ಅಕ್ಷರಶಃ ನಗರದ ಪ್ರತಿಯೊಂದು ರಸ್ತೆಗಳು ಜಲಾವೃತವಾಗಿವೆ. ಇಂದು ರಾತ್ರಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ, ಈಗಾಗಲೇ ಹಲವು ಕಡೆ ಭೂಕುಸಿತ ಕೂಡಾ ಸಂಭವಿಸಿದೆ.
ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಿರುಪತಿ ಸಮೀಪದ ತಿರುಮಲದಲ್ಲಿರುವ ಪುರಾತನ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಘಾಟ್ ರಸ್ತೆಗಳನ್ನು ಗುರುವಾರ ಸಂಜೆಯಿಂದ ಅನಿರ್ದಿಷ್ಟಾವಧಿಗೆ ವಾಹನ ಸಂಚಾರಕ್ಕೆ ಮುಚ್ಚಲಾಗಿದೆ ಹಾಗೂ ಬೆಟ್ಟ-ದೇವಾಲಯಕ್ಕೆ ಹೋಗುವ ಮೆಟ್ಟಿಲನ್ನು ಸಹ ಮುಚ್ಚಲಾಗಿದೆ ಎಂದು ದೇಗುಲದ ಅಧಿಕಾರಿ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…