ತಿರುಪತಿ ದೇವಾಲಯದಲ್ಲಿ ಅ.25 ಮತ್ತು ನ.8 ರಂದು ಬಾಗಿಲು ತೆರೆಯುವುದಿಲ್ಲ| ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ

October 12, 2022
2:54 PM

ತಿರುಮಲ ವೆಂಕಟೇಶ್ವರ ದೇವಸ್ಥಾನ ಅಕ್ಟೋಬರ್​ 25 ಮತ್ತು ನವೆಂಬರ್​ 8 ರಂದು ಮುಂಜಾನೆಯಿಂದ ಸಂಜೆವರೆಗೆ ಬಾಗಿಲು ತೆರೆಯುವುದಿಲ್ಲ. ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಂ) ಅಧಿಕಾರಿ ತಿಳಿಸಿದ್ದಾಗಿ ಪಿಟಿಐ ವರದಿ ಮಾಡಿದೆ.

ಈ ಎರಡೂ ದಿನ ಗ್ರಹಣ ಇರುವ ಕಾರಣಕ್ಕೆ ದೇವಸ್ಥಾನದಲ್ಲಿ ಬೆಳಗ್ಗೆಯಿಂದ ದೇವರ ದರ್ಶನ, ಪೂಜೆಗೆ ಅವಕಾಶ ಇಲ್ಲ. ಅಕ್ಟೋಬರ್​ 25ರಂದು ಸೂರ್ಯಗ್ರಹಣ ಇರುವ ಹಿನ್ನೆಲೆ ಬೆಳಗ್ಗೆ 8.11ರಿಂದ ಸಂಜೆ 7.30ರವರೆಗೆ ದೇಗುಲದ ಬಾಗಿಲು ಮುಚ್ಚಿರುತ್ತದೆ. 7.30ರ ನಂತರ ಭಕ್ತರು ಪ್ರಾರ್ಥನೆ ಸಲ್ಲಿಸಲು ದೇವಾಲಯಕ್ಕೆ ಬರಬಹುದಾಗಿದೆ.

ಹಾಗೇ, ನವೆಂಬರ್​ 8ರಂದು ಚಂದ್ರಗ್ರಹಣ ಇರುವ ಕಾರಣ ಬೆಳಗ್ಗೆ 8.40ರಿಂದ ಸಂಜೆ 7.20ರವರೆಗೆ ತಿರುಪತಿ ದೇವಸ್ಥಾನದ ಬಾಗಿಲು ಮುಚ್ಚಿರುತ್ತದೆ.

300 ರೂಪಾಯಿಯ ವಿಶೇಷ ಪ್ರವೇಶ ದರ್ಶನಂ, ಅರ್ಜಿತಾ ಸೇವೆ, ಬ್ರಹ್ಮೋತ್ಸವ, ಕಲ್ಯಾಣೋತ್ಸವ, ಸಹಸ್ರ ದೀಪಾಲಂಕಾರ, ಉಂಜಲ್​ ಸೇವೆ ಸೇರಿ ಯಾವುದೇ ರೀತಿಯ ಪೂಜೆ, ಸೇವೆಗಳೂ ನಡೆಯುವುದಿಲ್ಲ ಎಂದೂ ಅಧಿಕಾರಿ ಹೇಳಿದ್ದಾಗಿ ವರದಿಯಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ
August 30, 2026
10:18 PM
by: ದ ರೂರಲ್ ಮಿರರ್.ಕಾಂ
ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ
August 30, 2026
10:09 PM
by: ದ ರೂರಲ್ ಮಿರರ್.ಕಾಂ
ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?
August 30, 2026
11:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror