ತಿರುಮಲ ವೆಂಕಟೇಶ್ವರ ದೇವಸ್ಥಾನ ಅಕ್ಟೋಬರ್ 25 ಮತ್ತು ನವೆಂಬರ್ 8 ರಂದು ಮುಂಜಾನೆಯಿಂದ ಸಂಜೆವರೆಗೆ ಬಾಗಿಲು ತೆರೆಯುವುದಿಲ್ಲ. ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಂ) ಅಧಿಕಾರಿ ತಿಳಿಸಿದ್ದಾಗಿ ಪಿಟಿಐ ವರದಿ ಮಾಡಿದೆ.
ಈ ಎರಡೂ ದಿನ ಗ್ರಹಣ ಇರುವ ಕಾರಣಕ್ಕೆ ದೇವಸ್ಥಾನದಲ್ಲಿ ಬೆಳಗ್ಗೆಯಿಂದ ದೇವರ ದರ್ಶನ, ಪೂಜೆಗೆ ಅವಕಾಶ ಇಲ್ಲ. ಅಕ್ಟೋಬರ್ 25ರಂದು ಸೂರ್ಯಗ್ರಹಣ ಇರುವ ಹಿನ್ನೆಲೆ ಬೆಳಗ್ಗೆ 8.11ರಿಂದ ಸಂಜೆ 7.30ರವರೆಗೆ ದೇಗುಲದ ಬಾಗಿಲು ಮುಚ್ಚಿರುತ್ತದೆ. 7.30ರ ನಂತರ ಭಕ್ತರು ಪ್ರಾರ್ಥನೆ ಸಲ್ಲಿಸಲು ದೇವಾಲಯಕ್ಕೆ ಬರಬಹುದಾಗಿದೆ.
ಹಾಗೇ, ನವೆಂಬರ್ 8ರಂದು ಚಂದ್ರಗ್ರಹಣ ಇರುವ ಕಾರಣ ಬೆಳಗ್ಗೆ 8.40ರಿಂದ ಸಂಜೆ 7.20ರವರೆಗೆ ತಿರುಪತಿ ದೇವಸ್ಥಾನದ ಬಾಗಿಲು ಮುಚ್ಚಿರುತ್ತದೆ.
300 ರೂಪಾಯಿಯ ವಿಶೇಷ ಪ್ರವೇಶ ದರ್ಶನಂ, ಅರ್ಜಿತಾ ಸೇವೆ, ಬ್ರಹ್ಮೋತ್ಸವ, ಕಲ್ಯಾಣೋತ್ಸವ, ಸಹಸ್ರ ದೀಪಾಲಂಕಾರ, ಉಂಜಲ್ ಸೇವೆ ಸೇರಿ ಯಾವುದೇ ರೀತಿಯ ಪೂಜೆ, ಸೇವೆಗಳೂ ನಡೆಯುವುದಿಲ್ಲ ಎಂದೂ ಅಧಿಕಾರಿ ಹೇಳಿದ್ದಾಗಿ ವರದಿಯಾಗಿದೆ.
ಈಗಿನಂತೆ ಮಾರ್ಚ್ 4 ಅಥವಾ 5 ರಿಂದ ಮೋಡದ ವಾತಾವರಣ ಹೆಚ್ಚಿರುವ ಸಾಧ್ಯತೆಗಳಿದ್ದು,…
ಅಭಿವೃದ್ಧಿ ಸವಾಲುಗಳ ನಡುವೆಯೂ ದೇಶದ ಎಲ್ಲ ತೈಲ ಉತ್ಪಾದನಾ ಕಂಪನಿಗಳು 2045ರ ವೇಳೆಗೆ…
ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ…
ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ…
ದಕ್ಷಿಣ ಕನ್ನಡದ ಸುಳ್ಯದಲ್ಲಿ 40.4 ಡಿಗ್ರಿ ಸೆಲ್ಸಿಯಸ್, ಉಪ್ಪಿನಂಗಡಿಯಲ್ಲಿ 39.6, ಪಾಣೆ ಮಂಗಳೂರಿನಲ್ಲಿ …
ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ ಸಮುದಾಯ ಮಾರುಕಟ್ಟೆ…