ತಿರುಮಲ ವೆಂಕಟೇಶ್ವರ ದೇವಸ್ಥಾನ ಅಕ್ಟೋಬರ್ 25 ಮತ್ತು ನವೆಂಬರ್ 8 ರಂದು ಮುಂಜಾನೆಯಿಂದ ಸಂಜೆವರೆಗೆ ಬಾಗಿಲು ತೆರೆಯುವುದಿಲ್ಲ. ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಂ) ಅಧಿಕಾರಿ ತಿಳಿಸಿದ್ದಾಗಿ ಪಿಟಿಐ ವರದಿ ಮಾಡಿದೆ.
ಈ ಎರಡೂ ದಿನ ಗ್ರಹಣ ಇರುವ ಕಾರಣಕ್ಕೆ ದೇವಸ್ಥಾನದಲ್ಲಿ ಬೆಳಗ್ಗೆಯಿಂದ ದೇವರ ದರ್ಶನ, ಪೂಜೆಗೆ ಅವಕಾಶ ಇಲ್ಲ. ಅಕ್ಟೋಬರ್ 25ರಂದು ಸೂರ್ಯಗ್ರಹಣ ಇರುವ ಹಿನ್ನೆಲೆ ಬೆಳಗ್ಗೆ 8.11ರಿಂದ ಸಂಜೆ 7.30ರವರೆಗೆ ದೇಗುಲದ ಬಾಗಿಲು ಮುಚ್ಚಿರುತ್ತದೆ. 7.30ರ ನಂತರ ಭಕ್ತರು ಪ್ರಾರ್ಥನೆ ಸಲ್ಲಿಸಲು ದೇವಾಲಯಕ್ಕೆ ಬರಬಹುದಾಗಿದೆ.
ಹಾಗೇ, ನವೆಂಬರ್ 8ರಂದು ಚಂದ್ರಗ್ರಹಣ ಇರುವ ಕಾರಣ ಬೆಳಗ್ಗೆ 8.40ರಿಂದ ಸಂಜೆ 7.20ರವರೆಗೆ ತಿರುಪತಿ ದೇವಸ್ಥಾನದ ಬಾಗಿಲು ಮುಚ್ಚಿರುತ್ತದೆ.
300 ರೂಪಾಯಿಯ ವಿಶೇಷ ಪ್ರವೇಶ ದರ್ಶನಂ, ಅರ್ಜಿತಾ ಸೇವೆ, ಬ್ರಹ್ಮೋತ್ಸವ, ಕಲ್ಯಾಣೋತ್ಸವ, ಸಹಸ್ರ ದೀಪಾಲಂಕಾರ, ಉಂಜಲ್ ಸೇವೆ ಸೇರಿ ಯಾವುದೇ ರೀತಿಯ ಪೂಜೆ, ಸೇವೆಗಳೂ ನಡೆಯುವುದಿಲ್ಲ ಎಂದೂ ಅಧಿಕಾರಿ ಹೇಳಿದ್ದಾಗಿ ವರದಿಯಾಗಿದೆ.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…