ಸುದ್ದಿಗಳು

ತಿರುಪತಿ ದೇವಾಲಯದಲ್ಲಿ ಅ.25 ಮತ್ತು ನ.8 ರಂದು ಬಾಗಿಲು ತೆರೆಯುವುದಿಲ್ಲ| ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತಿರುಮಲ ವೆಂಕಟೇಶ್ವರ ದೇವಸ್ಥಾನ ಅಕ್ಟೋಬರ್​ 25 ಮತ್ತು ನವೆಂಬರ್​ 8 ರಂದು ಮುಂಜಾನೆಯಿಂದ ಸಂಜೆವರೆಗೆ ಬಾಗಿಲು ತೆರೆಯುವುದಿಲ್ಲ. ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಂ) ಅಧಿಕಾರಿ ತಿಳಿಸಿದ್ದಾಗಿ ಪಿಟಿಐ ವರದಿ ಮಾಡಿದೆ.

Advertisement
Advertisement

ಈ ಎರಡೂ ದಿನ ಗ್ರಹಣ ಇರುವ ಕಾರಣಕ್ಕೆ ದೇವಸ್ಥಾನದಲ್ಲಿ ಬೆಳಗ್ಗೆಯಿಂದ ದೇವರ ದರ್ಶನ, ಪೂಜೆಗೆ ಅವಕಾಶ ಇಲ್ಲ. ಅಕ್ಟೋಬರ್​ 25ರಂದು ಸೂರ್ಯಗ್ರಹಣ ಇರುವ ಹಿನ್ನೆಲೆ ಬೆಳಗ್ಗೆ 8.11ರಿಂದ ಸಂಜೆ 7.30ರವರೆಗೆ ದೇಗುಲದ ಬಾಗಿಲು ಮುಚ್ಚಿರುತ್ತದೆ. 7.30ರ ನಂತರ ಭಕ್ತರು ಪ್ರಾರ್ಥನೆ ಸಲ್ಲಿಸಲು ದೇವಾಲಯಕ್ಕೆ ಬರಬಹುದಾಗಿದೆ.

ಹಾಗೇ, ನವೆಂಬರ್​ 8ರಂದು ಚಂದ್ರಗ್ರಹಣ ಇರುವ ಕಾರಣ ಬೆಳಗ್ಗೆ 8.40ರಿಂದ ಸಂಜೆ 7.20ರವರೆಗೆ ತಿರುಪತಿ ದೇವಸ್ಥಾನದ ಬಾಗಿಲು ಮುಚ್ಚಿರುತ್ತದೆ.

300 ರೂಪಾಯಿಯ ವಿಶೇಷ ಪ್ರವೇಶ ದರ್ಶನಂ, ಅರ್ಜಿತಾ ಸೇವೆ, ಬ್ರಹ್ಮೋತ್ಸವ, ಕಲ್ಯಾಣೋತ್ಸವ, ಸಹಸ್ರ ದೀಪಾಲಂಕಾರ, ಉಂಜಲ್​ ಸೇವೆ ಸೇರಿ ಯಾವುದೇ ರೀತಿಯ ಪೂಜೆ, ಸೇವೆಗಳೂ ನಡೆಯುವುದಿಲ್ಲ ಎಂದೂ ಅಧಿಕಾರಿ ಹೇಳಿದ್ದಾಗಿ ವರದಿಯಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

6 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

7 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

7 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

7 hours ago

ಇದೆಲ್ಲಾ ಹೇಗಾಗ್ತದೆ? ಇದು ನಮ್ಗೆಲ್ಲಿ ಗೊತ್ತಾಗ್ತದೆ!?

ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…

7 hours ago