ತಿರುಮಲ ವೆಂಕಟೇಶ್ವರ ದೇವಸ್ಥಾನ ಅಕ್ಟೋಬರ್ 25 ಮತ್ತು ನವೆಂಬರ್ 8 ರಂದು ಮುಂಜಾನೆಯಿಂದ ಸಂಜೆವರೆಗೆ ಬಾಗಿಲು ತೆರೆಯುವುದಿಲ್ಲ. ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಂ) ಅಧಿಕಾರಿ ತಿಳಿಸಿದ್ದಾಗಿ ಪಿಟಿಐ ವರದಿ ಮಾಡಿದೆ.
ಈ ಎರಡೂ ದಿನ ಗ್ರಹಣ ಇರುವ ಕಾರಣಕ್ಕೆ ದೇವಸ್ಥಾನದಲ್ಲಿ ಬೆಳಗ್ಗೆಯಿಂದ ದೇವರ ದರ್ಶನ, ಪೂಜೆಗೆ ಅವಕಾಶ ಇಲ್ಲ. ಅಕ್ಟೋಬರ್ 25ರಂದು ಸೂರ್ಯಗ್ರಹಣ ಇರುವ ಹಿನ್ನೆಲೆ ಬೆಳಗ್ಗೆ 8.11ರಿಂದ ಸಂಜೆ 7.30ರವರೆಗೆ ದೇಗುಲದ ಬಾಗಿಲು ಮುಚ್ಚಿರುತ್ತದೆ. 7.30ರ ನಂತರ ಭಕ್ತರು ಪ್ರಾರ್ಥನೆ ಸಲ್ಲಿಸಲು ದೇವಾಲಯಕ್ಕೆ ಬರಬಹುದಾಗಿದೆ.
ಹಾಗೇ, ನವೆಂಬರ್ 8ರಂದು ಚಂದ್ರಗ್ರಹಣ ಇರುವ ಕಾರಣ ಬೆಳಗ್ಗೆ 8.40ರಿಂದ ಸಂಜೆ 7.20ರವರೆಗೆ ತಿರುಪತಿ ದೇವಸ್ಥಾನದ ಬಾಗಿಲು ಮುಚ್ಚಿರುತ್ತದೆ.
300 ರೂಪಾಯಿಯ ವಿಶೇಷ ಪ್ರವೇಶ ದರ್ಶನಂ, ಅರ್ಜಿತಾ ಸೇವೆ, ಬ್ರಹ್ಮೋತ್ಸವ, ಕಲ್ಯಾಣೋತ್ಸವ, ಸಹಸ್ರ ದೀಪಾಲಂಕಾರ, ಉಂಜಲ್ ಸೇವೆ ಸೇರಿ ಯಾವುದೇ ರೀತಿಯ ಪೂಜೆ, ಸೇವೆಗಳೂ ನಡೆಯುವುದಿಲ್ಲ ಎಂದೂ ಅಧಿಕಾರಿ ಹೇಳಿದ್ದಾಗಿ ವರದಿಯಾಗಿದೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…