ತಿರುಮಲ ವೆಂಕಟೇಶ್ವರ ದೇವಸ್ಥಾನ ಅಕ್ಟೋಬರ್ 25 ಮತ್ತು ನವೆಂಬರ್ 8 ರಂದು ಮುಂಜಾನೆಯಿಂದ ಸಂಜೆವರೆಗೆ ಬಾಗಿಲು ತೆರೆಯುವುದಿಲ್ಲ. ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಂ) ಅಧಿಕಾರಿ ತಿಳಿಸಿದ್ದಾಗಿ ಪಿಟಿಐ ವರದಿ ಮಾಡಿದೆ.
ಈ ಎರಡೂ ದಿನ ಗ್ರಹಣ ಇರುವ ಕಾರಣಕ್ಕೆ ದೇವಸ್ಥಾನದಲ್ಲಿ ಬೆಳಗ್ಗೆಯಿಂದ ದೇವರ ದರ್ಶನ, ಪೂಜೆಗೆ ಅವಕಾಶ ಇಲ್ಲ. ಅಕ್ಟೋಬರ್ 25ರಂದು ಸೂರ್ಯಗ್ರಹಣ ಇರುವ ಹಿನ್ನೆಲೆ ಬೆಳಗ್ಗೆ 8.11ರಿಂದ ಸಂಜೆ 7.30ರವರೆಗೆ ದೇಗುಲದ ಬಾಗಿಲು ಮುಚ್ಚಿರುತ್ತದೆ. 7.30ರ ನಂತರ ಭಕ್ತರು ಪ್ರಾರ್ಥನೆ ಸಲ್ಲಿಸಲು ದೇವಾಲಯಕ್ಕೆ ಬರಬಹುದಾಗಿದೆ.
ಹಾಗೇ, ನವೆಂಬರ್ 8ರಂದು ಚಂದ್ರಗ್ರಹಣ ಇರುವ ಕಾರಣ ಬೆಳಗ್ಗೆ 8.40ರಿಂದ ಸಂಜೆ 7.20ರವರೆಗೆ ತಿರುಪತಿ ದೇವಸ್ಥಾನದ ಬಾಗಿಲು ಮುಚ್ಚಿರುತ್ತದೆ.
300 ರೂಪಾಯಿಯ ವಿಶೇಷ ಪ್ರವೇಶ ದರ್ಶನಂ, ಅರ್ಜಿತಾ ಸೇವೆ, ಬ್ರಹ್ಮೋತ್ಸವ, ಕಲ್ಯಾಣೋತ್ಸವ, ಸಹಸ್ರ ದೀಪಾಲಂಕಾರ, ಉಂಜಲ್ ಸೇವೆ ಸೇರಿ ಯಾವುದೇ ರೀತಿಯ ಪೂಜೆ, ಸೇವೆಗಳೂ ನಡೆಯುವುದಿಲ್ಲ ಎಂದೂ ಅಧಿಕಾರಿ ಹೇಳಿದ್ದಾಗಿ ವರದಿಯಾಗಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…