ವೆದರ್ ಮಿರರ್

ಹವಾಮಾನ ವರದಿ | ಕರಾವಳಿಗೆ ಹೀಟ್‌ವೇವ್ ಎಚ್ಚರಿಕೆ‌ | ವಾತಾವರಣದ ಉಷ್ಣತೆ ಎಷ್ಟು ಏರಿಕೆಯಾಗುವ ಸಾಧ್ಯತೆ ಇದೆ ? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹವಾಮಾನ ಬದಲಾವಣೆಯಾಗುತ್ತಿದೆ. ವಾತಾವರಣದ ಉಷ್ಣತೆ ಏರಿಕೆಯಾಗುತ್ತಿದ್ದು ಮುಂದಿನ ಒಂದೆರಡು ದಿನಗಳಲ್ಲಿ ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಬಿಸಿ ಗಾಳಿ ಉಂಟಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Advertisement
Advertisement

ಮುಂದಿನ 48 ಗಂಟೆಗಳ ಅವಧಿಯಲ್ಲಿ ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ಕಾರಣದಿಂದ  48 ಗೆಂಟೆಗಳಲ್ಲಿ ಕರಾವಳಿಯ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಬಿಸಿ ಗಾಳಿ ಉಂಟಾಗುವ ಸಾಧ್ಯತೆಗಳಿದೆ ಎಂದು ಇಲಾಖೆ ಎಚ್ಚರಿಸಿದೆ.

ಕರ್ನಾಟಕದಲ್ಲಿ ದಿನೇ ದಿನೇ ಬಿಸಿಲಿನ ಕಾವು ಹೆಚ್ಚುತ್ತಿದೆ. ಈ ಬಾರಿ ಅತ್ಯಧಿಕ ಉ‍ಷ್ಣಾಂಶದ ದಾಖಲಾಗುವ ಬಗ್ಗೆ ಮುನ್ಸೂಚನೆಯನ್ನು  ಭಾರತೀಯ ಹವಾಮಾನ ಇಲಾಖೆ  ನೀಡಿದೆ. ಮಾರ್ಚ್, ಏಪ್ರೀಲ್ ಹಾಗೂ ಮೇ ಈ ಮೂರು ತಿಂಗಳಲ್ಲಿ ಸಾಮಾನ್ಯವಾಗಿ ಬೇಸಿಗೆ ಕಾಲವಾಗಿದೆ. ಈ ಭಾರಿ ಅತ್ಯಧಿಕ ಬಿಸಿಲಾಗಲಿದೆ.  ಕಳೆದ ಫೆಬ್ರವರಿಯಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಬಿಸಿಲು ಕ್ರಮೇಣ ಏರತೊಡಗಿತು. ಆದರೆ ದಕ್ಷಿಣ ಒಳನಾಡಿನಲ್ಲಿ ಅಷ್ಟಾಗಿ ಹೆಚ್ಚಾಗಿರಲಿಲ್ಲ. ಆದರೆ ಮುಂದಿನ 90 ದಿನ ಕರ್ನಾಟಕ ಅತ್ಯಧಿಕ ಬಿಸಲಿಗೆ ಸಾಕ್ಷಿಯಾಗಲಿದೆ ಎಂದು ಕರ್ನಾಟಕ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ವಿಜ್ಞಾನ ಮತ್ತು ಹವಾಮಾನ ತಜ್ಞ ಡಾ.ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.

ಹವಾಮಾನ ಇಲಾಖೆಯ ಮಾಹಿತಿಗೆ ಪೂರಕವಾಗಿ ಈಗ ಕರಾವಳಿ ಭಾಗಗಳಲ್ಲಿ ಬೆಳಗಿನ ವೇಳೆ ಚಳಿಯ ವಾತಾವರಣ ಇದ್ದು, ಆ ಬಳಿಕ ಉಷ್ಣತೆ ಏರ ತೊಡಗುತ್ತದೆ. ಮಧ್ಯಾಹ್ನ ವಿಪರೀತವಾದ ಬಿಸಿಲು ಹಾಗೂ ಉಷ್ಣತೆ ಕಂಡುಬರುತ್ತಿದೆ. ಹೀಗಾಗಿ ಈ ಬಾರಿ ಮಳೆ ಸಾಧ್ಯತೆ ಕಡಿಮೆ ಇದ್ದು ಬಿಸಿಲಿನ ಝಳ ಹೆಚ್ಚಾಗುತ್ತಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

10 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

20 hours ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

21 hours ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

21 hours ago

ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್

ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು  ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…

1 day ago

ಮತ್ತದೇ ಬೇಸರ ಕಳೆಯಲು ಈ ಹಿತವಾದ ಮಳೆ | ಹಾಡಷ್ಟೇ ಅಲ್ಲ, ಈ ಅಭಿನಯ ನೋಡಲೇಬೇಕು…

ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು…

1 day ago