Advertisement
ವೆದರ್ ಮಿರರ್

ಹವಾಮಾನ ವರದಿ | ಕರಾವಳಿಗೆ ಹೀಟ್‌ವೇವ್ ಎಚ್ಚರಿಕೆ‌ | ವಾತಾವರಣದ ಉಷ್ಣತೆ ಎಷ್ಟು ಏರಿಕೆಯಾಗುವ ಸಾಧ್ಯತೆ ಇದೆ ? |

Share

ಹವಾಮಾನ ಬದಲಾವಣೆಯಾಗುತ್ತಿದೆ. ವಾತಾವರಣದ ಉಷ್ಣತೆ ಏರಿಕೆಯಾಗುತ್ತಿದ್ದು ಮುಂದಿನ ಒಂದೆರಡು ದಿನಗಳಲ್ಲಿ ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಬಿಸಿ ಗಾಳಿ ಉಂಟಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ 48 ಗಂಟೆಗಳ ಅವಧಿಯಲ್ಲಿ ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ಕಾರಣದಿಂದ  48 ಗೆಂಟೆಗಳಲ್ಲಿ ಕರಾವಳಿಯ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಬಿಸಿ ಗಾಳಿ ಉಂಟಾಗುವ ಸಾಧ್ಯತೆಗಳಿದೆ ಎಂದು ಇಲಾಖೆ ಎಚ್ಚರಿಸಿದೆ.

ಕರ್ನಾಟಕದಲ್ಲಿ ದಿನೇ ದಿನೇ ಬಿಸಿಲಿನ ಕಾವು ಹೆಚ್ಚುತ್ತಿದೆ. ಈ ಬಾರಿ ಅತ್ಯಧಿಕ ಉ‍ಷ್ಣಾಂಶದ ದಾಖಲಾಗುವ ಬಗ್ಗೆ ಮುನ್ಸೂಚನೆಯನ್ನು  ಭಾರತೀಯ ಹವಾಮಾನ ಇಲಾಖೆ  ನೀಡಿದೆ. ಮಾರ್ಚ್, ಏಪ್ರೀಲ್ ಹಾಗೂ ಮೇ ಈ ಮೂರು ತಿಂಗಳಲ್ಲಿ ಸಾಮಾನ್ಯವಾಗಿ ಬೇಸಿಗೆ ಕಾಲವಾಗಿದೆ. ಈ ಭಾರಿ ಅತ್ಯಧಿಕ ಬಿಸಿಲಾಗಲಿದೆ.  ಕಳೆದ ಫೆಬ್ರವರಿಯಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಬಿಸಿಲು ಕ್ರಮೇಣ ಏರತೊಡಗಿತು. ಆದರೆ ದಕ್ಷಿಣ ಒಳನಾಡಿನಲ್ಲಿ ಅಷ್ಟಾಗಿ ಹೆಚ್ಚಾಗಿರಲಿಲ್ಲ. ಆದರೆ ಮುಂದಿನ 90 ದಿನ ಕರ್ನಾಟಕ ಅತ್ಯಧಿಕ ಬಿಸಲಿಗೆ ಸಾಕ್ಷಿಯಾಗಲಿದೆ ಎಂದು ಕರ್ನಾಟಕ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ವಿಜ್ಞಾನ ಮತ್ತು ಹವಾಮಾನ ತಜ್ಞ ಡಾ.ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.

ಹವಾಮಾನ ಇಲಾಖೆಯ ಮಾಹಿತಿಗೆ ಪೂರಕವಾಗಿ ಈಗ ಕರಾವಳಿ ಭಾಗಗಳಲ್ಲಿ ಬೆಳಗಿನ ವೇಳೆ ಚಳಿಯ ವಾತಾವರಣ ಇದ್ದು, ಆ ಬಳಿಕ ಉಷ್ಣತೆ ಏರ ತೊಡಗುತ್ತದೆ. ಮಧ್ಯಾಹ್ನ ವಿಪರೀತವಾದ ಬಿಸಿಲು ಹಾಗೂ ಉಷ್ಣತೆ ಕಂಡುಬರುತ್ತಿದೆ. ಹೀಗಾಗಿ ಈ ಬಾರಿ ಮಳೆ ಸಾಧ್ಯತೆ ಕಡಿಮೆ ಇದ್ದು ಬಿಸಿಲಿನ ಝಳ ಹೆಚ್ಚಾಗುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

1 hour ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

13 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

14 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

21 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago