Advertisement
MIRROR FOCUS

ದೇಶದಲ್ಲಿ ಕೊರೋನಾ ನಿಯಂತ್ರಣಕ್ಕೆ ಪ್ರಧಾನಿಗಳು ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಮಾಡಬೇಕು…..!! | ಜ್ಯೋತಿಷಿ ಪ್ರಕಾಶ್‌ ಅಮ್ಮಣ್ಣಾಯ ಭವಿಷ್ಯ |

Share
ದೇಶದಲ್ಲಿ  ಕೊರೋನಾ ಎರಡನೇ ಅಲೆ ವ್ಯಾಪಕವಾಗುತ್ತಿದೆ. ಕೊರೋನಾ ನಿಯಂತ್ರಣಕ್ಕೆ ದೇಶದಲ್ಲಿ ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಕೊರೋನಾ ವ್ಯಾಕ್ಸಿನೇಶನ್‌ ಒಂದು ಕಡೆ ನಡೆಯುತ್ತಿದ್ದರೆ ಮತ್ತೊಂದು ಕಡೆ ಮಾಸ್ಕ್ ಧರಿಸುವುದು ,ಸಾಮಾಜಿಕ ಅಂತರ  ಮೊದಲಾದ ಕಟ್ಟುನಿಟ್ಟಿನ ಕ್ರಮಗಳನ್ನು, ದಂಡ ಪ್ರಯೋಗಗಳೂ ನಡೆಯುತ್ತಿದೆ. ಆದರೆ ಆಧ್ಯಾತ್ಮಿಕ ದೇಶ ಭಾರತದಲ್ಲಿ  ಈಗೇನು ಮಾಡಬೇಕು ಎಂಬ ಬಗ್ಗೆ ಚರ್ಚೆ ಆರಂಭವಾಗಿದ್ದು ಜ್ಯೋತಿಷಿ ಪ್ರಕಾಶ್‌ ಅಮ್ಮಣ್ಣಾಯ ಜ್ಯೋತಿರ್ವಿಜ್ಞಾನಂ ಹೇಳುತ್ತಾರೆ, ದೇಶದ ಪ್ರಧಾನ ಮಂತ್ರಿ ಕುಕ್ಕೇ ಸುಬ್ರಹ್ಮಣ್ಯನ ದರ್ಶನ ಮಾಡಬೇಕು ಎಂದು.
ಆಧ್ಯಾತ್ಮಿಕ ದೇಶ ಭಾರತದಲ್ಲಿ  ಪ್ರಧಾನಿಗಳೂ ಪ್ರಮುಖವಾಗುತ್ತಾರೆ. ಈಗಾಗಲೇ ವಿವಿಧ ತೀರ್ಥ ಕ್ಷೇತ್ರಗಳ ದರ್ಶನ ಮಾಡಿರುವ ಪ್ರಧಾನಿಗಳು ಕುಕ್ಕೆ ಸುಬ್ರಹ್ಮಣ್ಯ ದೇವರನ್ನೂ ಭೇಟಿ ಮಾಡಬೇಕಂತೆ. ಕಳೆದ ವರ್ಷವೇ ಈ ಬಗ್ಗೆ ಬಿಜೆಪಿ ಮುಖಂಡರಿಗೆ ಈ ಬಗ್ಗೆ ಹೇಳಿದ್ದರಂತೆ. ಈ ಬಾರಿ ಮತ್ತೆ ನೆನಪಿಸಿದ್ದಾರೆ. ಪೂರ್ವ ಪ್ರತೀತಿ ಆಧಾರದಲ್ಲಿಯೇ ಈ ಮಾಹಿತಿ ನೀಡಿದ್ದಾಗಿ ಹೇಳುವ ಪ್ರಕಾಶ್‌ ಅಮ್ಮಣ್ಣಾಯರು, ರೋಗ ನಿರೋಧಕ ಶಕ್ತಿ ಇರುವುದು ಈ ಸೇನಾನಿಗೆ ಅಂದರೆ ಸುಬ್ರಹ್ಮಣ್ಯನಿಗೆ ಮಾತ್ರವೇ. ಯಾವುದೋ ಲಾಭ,ಕಾಟಾಚಾರಕ್ಕೆ ಅಲ್ಲಿ ಸುಬ್ರಹ್ಮಣ್ಯನ ಸಾನ್ನಿಧ್ಯ ಸೃಷ್ಟಿ ಆಗಲಿಲ್ಲ ಎಂದು ಪ್ರಕಾಶ್‌ ಅಮ್ಮಣ್ಣಾಯ ಹೇಳುತ್ತಾರೆ. ಈ ಬಗ್ಗೆ ತಮ್ಮ ಪೇಸ್‌ ಬುಕ್‌ ನಲ್ಲಿ ಕೂಡಾ ಅವರು ಬರೆದುಕೊಂಡಿದ್ದಾರೆ.
ಕಳೆದ ವರ್ಷವೇ ಈ ಬಗ್ಗೆ ಬಿಜೆಪಿ ಪಕ್ಷದ ಪಕ್ಷದ ವರಿಷ್ಟರಿಗೆ ಆಗಾಗ ಹೇಳಿದ್ದೆ, ದೇಶದ ಪ್ರಧಾನ ಮಂತ್ರಿ ಕುಕ್ಕೇ ಸುಬ್ರಹ್ಮಣ್ಯನ ದರ್ಶನ ಮಾಡಬೇಕು ಎಂದು. ಹಾಗಿದ್ದರೂ ಕಡೆಗಣಿಸಿದರು. ಇವರೆಲ್ಲ ಲಾಬಿ ಮಾಡಲು ಪ್ರಧಾನ ಮಂತ್ರಿಯವರ ಭೇಟಿ ಮಾಡುತ್ತಾರೆಯೇ ವಿನಃ ಇಂತಹ ಭಾವನಾತ್ಮಕ,ಪಾರಮಾರ್ಥಿಕ ವಿಚಾರದಲ್ಲಿ ಭೇಟಿ ಮಾಡುತ್ತಿಲ್ಲ. ದೇಶದ ಸ್ವಾಸ್ಥ್ಯಕ್ಕಾಗಿ ಹೇಳಿದ್ದೆ ಎಂದು ಪ್ರಕಾಶ್‌ ಅಮ್ಮಣ್ಣಾಯ ಹೇಳಿಕೊಂಡಿದ್ದಾರೆ.
ಪ್ರಕಾಶ್‌ ಅಮ್ಮಣ್ಣಾಯ ಅವರು ಈ ಹಿಂದೆ ರಾಜಕೀಯವಾಗಿ ಹಲವು ಭವಿಷ್ಯ ಹೇಳಿದ್ದು ಹೇಳಿದ್ದು ನಿಜವಾಗಿತ್ತು. ಹೀಗಾಗಿ ಇದೀಗ ಅವರು ಹೇಳಿರುವ ಭವಿಷ್ಯದ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಇದೀಗ ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಈ ಸಂದರ್ಭ ಪ್ರಧಾನಿಗಳು ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಮಾಡುತ್ತಾರಾ ? ಎಂಬ ಪ್ರಶ್ನೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

2 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

3 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

4 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

5 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

18 hours ago