Advertisement
MIRROR FOCUS

ದೇಶದಲ್ಲಿ ಕೊರೋನಾ ನಿಯಂತ್ರಣಕ್ಕೆ ಪ್ರಧಾನಿಗಳು ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಮಾಡಬೇಕು…..!! | ಜ್ಯೋತಿಷಿ ಪ್ರಕಾಶ್‌ ಅಮ್ಮಣ್ಣಾಯ ಭವಿಷ್ಯ |

Share
ದೇಶದಲ್ಲಿ  ಕೊರೋನಾ ಎರಡನೇ ಅಲೆ ವ್ಯಾಪಕವಾಗುತ್ತಿದೆ. ಕೊರೋನಾ ನಿಯಂತ್ರಣಕ್ಕೆ ದೇಶದಲ್ಲಿ ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಕೊರೋನಾ ವ್ಯಾಕ್ಸಿನೇಶನ್‌ ಒಂದು ಕಡೆ ನಡೆಯುತ್ತಿದ್ದರೆ ಮತ್ತೊಂದು ಕಡೆ ಮಾಸ್ಕ್ ಧರಿಸುವುದು ,ಸಾಮಾಜಿಕ ಅಂತರ  ಮೊದಲಾದ ಕಟ್ಟುನಿಟ್ಟಿನ ಕ್ರಮಗಳನ್ನು, ದಂಡ ಪ್ರಯೋಗಗಳೂ ನಡೆಯುತ್ತಿದೆ. ಆದರೆ ಆಧ್ಯಾತ್ಮಿಕ ದೇಶ ಭಾರತದಲ್ಲಿ  ಈಗೇನು ಮಾಡಬೇಕು ಎಂಬ ಬಗ್ಗೆ ಚರ್ಚೆ ಆರಂಭವಾಗಿದ್ದು ಜ್ಯೋತಿಷಿ ಪ್ರಕಾಶ್‌ ಅಮ್ಮಣ್ಣಾಯ ಜ್ಯೋತಿರ್ವಿಜ್ಞಾನಂ ಹೇಳುತ್ತಾರೆ, ದೇಶದ ಪ್ರಧಾನ ಮಂತ್ರಿ ಕುಕ್ಕೇ ಸುಬ್ರಹ್ಮಣ್ಯನ ದರ್ಶನ ಮಾಡಬೇಕು ಎಂದು.
ಆಧ್ಯಾತ್ಮಿಕ ದೇಶ ಭಾರತದಲ್ಲಿ  ಪ್ರಧಾನಿಗಳೂ ಪ್ರಮುಖವಾಗುತ್ತಾರೆ. ಈಗಾಗಲೇ ವಿವಿಧ ತೀರ್ಥ ಕ್ಷೇತ್ರಗಳ ದರ್ಶನ ಮಾಡಿರುವ ಪ್ರಧಾನಿಗಳು ಕುಕ್ಕೆ ಸುಬ್ರಹ್ಮಣ್ಯ ದೇವರನ್ನೂ ಭೇಟಿ ಮಾಡಬೇಕಂತೆ. ಕಳೆದ ವರ್ಷವೇ ಈ ಬಗ್ಗೆ ಬಿಜೆಪಿ ಮುಖಂಡರಿಗೆ ಈ ಬಗ್ಗೆ ಹೇಳಿದ್ದರಂತೆ. ಈ ಬಾರಿ ಮತ್ತೆ ನೆನಪಿಸಿದ್ದಾರೆ. ಪೂರ್ವ ಪ್ರತೀತಿ ಆಧಾರದಲ್ಲಿಯೇ ಈ ಮಾಹಿತಿ ನೀಡಿದ್ದಾಗಿ ಹೇಳುವ ಪ್ರಕಾಶ್‌ ಅಮ್ಮಣ್ಣಾಯರು, ರೋಗ ನಿರೋಧಕ ಶಕ್ತಿ ಇರುವುದು ಈ ಸೇನಾನಿಗೆ ಅಂದರೆ ಸುಬ್ರಹ್ಮಣ್ಯನಿಗೆ ಮಾತ್ರವೇ. ಯಾವುದೋ ಲಾಭ,ಕಾಟಾಚಾರಕ್ಕೆ ಅಲ್ಲಿ ಸುಬ್ರಹ್ಮಣ್ಯನ ಸಾನ್ನಿಧ್ಯ ಸೃಷ್ಟಿ ಆಗಲಿಲ್ಲ ಎಂದು ಪ್ರಕಾಶ್‌ ಅಮ್ಮಣ್ಣಾಯ ಹೇಳುತ್ತಾರೆ. ಈ ಬಗ್ಗೆ ತಮ್ಮ ಪೇಸ್‌ ಬುಕ್‌ ನಲ್ಲಿ ಕೂಡಾ ಅವರು ಬರೆದುಕೊಂಡಿದ್ದಾರೆ.
ಕಳೆದ ವರ್ಷವೇ ಈ ಬಗ್ಗೆ ಬಿಜೆಪಿ ಪಕ್ಷದ ಪಕ್ಷದ ವರಿಷ್ಟರಿಗೆ ಆಗಾಗ ಹೇಳಿದ್ದೆ, ದೇಶದ ಪ್ರಧಾನ ಮಂತ್ರಿ ಕುಕ್ಕೇ ಸುಬ್ರಹ್ಮಣ್ಯನ ದರ್ಶನ ಮಾಡಬೇಕು ಎಂದು. ಹಾಗಿದ್ದರೂ ಕಡೆಗಣಿಸಿದರು. ಇವರೆಲ್ಲ ಲಾಬಿ ಮಾಡಲು ಪ್ರಧಾನ ಮಂತ್ರಿಯವರ ಭೇಟಿ ಮಾಡುತ್ತಾರೆಯೇ ವಿನಃ ಇಂತಹ ಭಾವನಾತ್ಮಕ,ಪಾರಮಾರ್ಥಿಕ ವಿಚಾರದಲ್ಲಿ ಭೇಟಿ ಮಾಡುತ್ತಿಲ್ಲ. ದೇಶದ ಸ್ವಾಸ್ಥ್ಯಕ್ಕಾಗಿ ಹೇಳಿದ್ದೆ ಎಂದು ಪ್ರಕಾಶ್‌ ಅಮ್ಮಣ್ಣಾಯ ಹೇಳಿಕೊಂಡಿದ್ದಾರೆ.
ಪ್ರಕಾಶ್‌ ಅಮ್ಮಣ್ಣಾಯ ಅವರು ಈ ಹಿಂದೆ ರಾಜಕೀಯವಾಗಿ ಹಲವು ಭವಿಷ್ಯ ಹೇಳಿದ್ದು ಹೇಳಿದ್ದು ನಿಜವಾಗಿತ್ತು. ಹೀಗಾಗಿ ಇದೀಗ ಅವರು ಹೇಳಿರುವ ಭವಿಷ್ಯದ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಇದೀಗ ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಈ ಸಂದರ್ಭ ಪ್ರಧಾನಿಗಳು ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಮಾಡುತ್ತಾರಾ ? ಎಂಬ ಪ್ರಶ್ನೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

6 hours ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

6 hours ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

15 hours ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

19 hours ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

20 hours ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

20 hours ago