ಕೇಂದ್ರ ಸರ್ಕಾರದ ದಾಳಿಂಬೆ ಕ್ಲಸ್ಟರ್ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ಮುಂದಿನ ಐದು ವರ್ಷಗಳಲ್ಲಿ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಮತ್ತು ಕೂಡ್ಲಿಗಿ ತಾಲೂಕುಗಳಲ್ಲಿ 3 ಸಾವಿರ ಎಕರೆ ಪ್ರದೇಶದಲ್ಲಿ ದಾಳಿಂಬೆಯನ್ನು ಬೆಳೆಯುವ ಗುರಿ ಹೊಂದಲಾಗಿದೆ ಎಂದು ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಪಿ.ಜಿ ಚಿದಾನಂದಪ್ಪ ಹೇಳಿದ್ದಾರೆ. ಹೊಸಪೇಟೆಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ವಿವಿಧ ತೋಟಗಾರಿಕಾ ಬೆಳೆಗಳಿಗಾಗಿ 12 ಕ್ಲಸ್ಟರ್ ಗಳನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸುತ್ತಿದ್ದು, ಕರ್ನಾಟಕದಲ್ಲಿ ತುಮಕೂರು ಚಿತ್ರದುರ್ಗ ವಿಜಯನಗರ ಜಿಲ್ಲೆಗಳ ಒಟ್ಟು ಒಂಬತ್ತು ತಾಲೂಕುಗಳನ್ನು ಈ ಯೋಜನೆಗಾಗಿ ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement


