ಮೈಸೂರು ವಿಭಾಗದ ತಂಬಾಕು ಬೆಳೆಗಾರರು ಎದುರಿಸುತ್ತಿರುವ ಖರೀದಿ ಸಂಕಷ್ಟಕ್ಕೆ ಇನ್ನೆರಡು ದಿನಗಳಲ್ಲಿ ಪರಿಹಾರ ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ಮೈಸೂರಿನಲ್ಲಿ ನಡೆದ ಸಭೆಯಲ್ಲಿ ಮೈಸೂರು ವಿಭಾಗದ ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ಕೇಂದ್ರ ತಂಬಾಕು ಮಂಡಳಿ, ಐಟಿಸಿ ಕಂಪನಿಗಳ ಹಿರಿಯ ಅಧಿಕಾರಿಗಳು ಹಾಗೂ ಪಶುಸಂಗೋಪನಾ ಸಚಿವ ವೆಂಕಟೇಶ್ ಉಪಸ್ಥಿತರಿದ್ದರು.
ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಮೈಸೂರು, ಹಾಸನ ಸೇರಿದಂತೆ ಇತರೆ ಭಾಗಗಳಲ್ಲಿ ರೈತರು ಬೆಳೆದ ತಂಬಾಕು ಖರೀದಿಯಾಗದೆ ಗೋದಾಮುಗಳಲ್ಲಿ ಉಳಿದಿದ್ದು, ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ತಂಬಾಕು ಮಂಡಳಿ ಮತ್ತು ಐಟಿಸಿ ಕಂಪನಿಗಳಿಗೆ ತುರ್ತಾಗಿ ಖರೀದಿ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಲಾಗಿದೆ. ಅಧಿಕಾರಿಗಳು ಸಹ ಈ ಬಗ್ಗೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ಬೇಗನೆ ಕ್ರಮ ಕೈಗೊಳ್ಳಲಾಗುವುದು. ಖರೀದಿ ಪ್ರಕ್ರಿಯೆ ವೇಗಗೊಳ್ಳುವ ವಿಶ್ವಾಸವಿದೆ. ಇನ್ನೆರಡು ದಿನಗಳಲ್ಲಿ ಸ್ಪಷ್ಟ ಪರಿಹಾರ ಸಿಗಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು. ರೈತರ ಪರವಾಗಿ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದ್ದು, ಯಾವುದೇ ರೈತನು ನಷ್ಟಪಡುವಂತಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಅವರು ಹೇಳಿದರು.
Union Minister H.D. Kumaraswamy held an urgent meeting in Mysuru with Tobacco Board and ITC officials regarding procurement issues faced by tobacco farmers in the Mysuru region. He assured that the issue of unsold tobacco stocks would be resolved within two days and directed authorities to expedite the purchase process.

