ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ

March 3, 2026
9:31 AM
ಮೈಸೂರು ವಿಭಾಗದ ತಂಬಾಕು ರೈತರು ಖರೀದಿ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದು, ಈ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತುರ್ತು ಸಭೆ ನಡೆಸಿದರು. ಇನ್ನೆರಡು ದಿನಗಳಲ್ಲಿ ಖರೀದಿ ಪ್ರಕ್ರಿಯೆ ಆರಂಭಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಮೈಸೂರು ವಿಭಾಗದ ತಂಬಾಕು ಬೆಳೆಗಾರರು ಎದುರಿಸುತ್ತಿರುವ ಖರೀದಿ ಸಂಕಷ್ಟಕ್ಕೆ ಇನ್ನೆರಡು ದಿನಗಳಲ್ಲಿ ಪರಿಹಾರ ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಮೈಸೂರಿನಲ್ಲಿ ನಡೆದ ಸಭೆಯಲ್ಲಿ ಮೈಸೂರು ವಿಭಾಗದ ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ಕೇಂದ್ರ ತಂಬಾಕು ಮಂಡಳಿ, ಐಟಿಸಿ ಕಂಪನಿಗಳ ಹಿರಿಯ ಅಧಿಕಾರಿಗಳು ಹಾಗೂ ಪಶುಸಂಗೋಪನಾ ಸಚಿವ ವೆಂಕಟೇಶ್‌  ಉಪಸ್ಥಿತರಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಮೈಸೂರು, ಹಾಸನ ಸೇರಿದಂತೆ ಇತರೆ ಭಾಗಗಳಲ್ಲಿ ರೈತರು ಬೆಳೆದ ತಂಬಾಕು ಖರೀದಿಯಾಗದೆ ಗೋದಾಮುಗಳಲ್ಲಿ ಉಳಿದಿದ್ದು, ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ತಂಬಾಕು ಮಂಡಳಿ ಮತ್ತು ಐಟಿಸಿ ಕಂಪನಿಗಳಿಗೆ ತುರ್ತಾಗಿ ಖರೀದಿ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಲಾಗಿದೆ. ಅಧಿಕಾರಿಗಳು ಸಹ ಈ ಬಗ್ಗೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ಬೇಗನೆ ಕ್ರಮ ಕೈಗೊಳ್ಳಲಾಗುವುದು. ಖರೀದಿ ಪ್ರಕ್ರಿಯೆ ವೇಗಗೊಳ್ಳುವ ವಿಶ್ವಾಸವಿದೆ. ಇನ್ನೆರಡು ದಿನಗಳಲ್ಲಿ ಸ್ಪಷ್ಟ ಪರಿಹಾರ ಸಿಗಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು. ರೈತರ ಪರವಾಗಿ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದ್ದು, ಯಾವುದೇ ರೈತನು ನಷ್ಟಪಡುವಂತಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಅವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Union Minister H.D. Kumaraswamy held an urgent meeting in Mysuru with Tobacco Board and ITC officials regarding procurement issues faced by tobacco farmers in the Mysuru region. He assured that the issue of unsold tobacco stocks would be resolved within two days and directed authorities to expedite the purchase process.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror