ಇಂದು ರೈತ ದಿನಾಚರಣೆ | ನಾವು ರೈತರು ನಮಗೆ “ನಾವೇ” ಶುಭಾಶಯ ಕೋರಿಕೊಳ್ಳಬೇಕಾಗಿದೆ…!

December 23, 2023
11:20 AM

ಇವತ್ತು ರೈತರ ದಿನಾಚರಣೆ(Farmers day) ಅಂತೆ. ಕೃಷಿ ಗುಂಪುಗಳಲ್ಲಿ ಇತರೆ ಜಾಲತಾಣದಲ್ಲಿ(Social Media)”ರೆಡಿಮೇಡ್”(Ready-made) ಶುಭಾಶಯಗಳ(greetings) ಹಂಚಿಕೆಯಾಗುತ್ತಿದೆ. ದುರಂತ(tragedy) ಎಂದರೆ ಬೇರೆಲ್ಲಾ ದಿನಾಚರಣೆಗಳನ್ನು ಆಚರಿಸಲು(celebration ) ಸಮಾಜಕ್ಕೆ(Social) ಮತ್ತು ನಮ್ಮ ರಾಜಕೀಯ ವ್ಯವಸ್ಥೆಗಿರುವ(Political system) ಖುಷಿ “ರೈತ ದಿನಾಚರಣೆ” ಆಚರಣೆಗಿಲ್ಲ..!? ನಾವು ರೈತರು(Farmers) ನಮಗೆ “ನಾವೇ” ಶುಭಾಶಯಗಳನ್ನ‌” ಕೋರಿಕೊಳ್ಳಬೇಕಾಗಿದೆ”…

Advertisement
Advertisement

ಬದಲಾದ ಋತುಮಾನ, ಯಾವುದೇ ಔಷಧಕ್ಕೂ ಬಗ್ಗದ ಕೃಷಿ ರೋಗಗಳು, ಉತ್ಪಾದನಾ ವೆಚ್ಚಕ್ಕೂ ಮಾರುಕಟ್ಟೆ ಬೆಲೆಗೂ ತಾಳೆಯಾಗದ ಕೃಷಿ ಉತ್ಪನ್ನದ ಬೆಲೆಗಳೂ, ಕೃಷಿ ಬದುಕನ್ನ ಮಾಡಲು ಬರದ ಮೂರು ನಾಲ್ಕನೇ ತಲೆಮಾರಿನ ಪೀಳಿಗೆ… ಕೃಷಿಯಲ್ಲೀಗ ವೃದ್ದ ಕೃಷಿಕರು ಮತ್ತು ಕೂಲಿ ಕಾರ್ಮಿಕರು… ಸರ್ಕಸ್ ಕಂಪೆನಿಯವರು ಊರ ಬಯಲಿನಲ್ಲಿ ಪ್ರದರ್ಶನ ಹಾಕಿ ಒಂದು ದಿನ ಪ್ರದರ್ಶನ ‌ಮುಗಿಸಿ ಟೆಂಟು ಕಿತ್ತು ತಮ್ಮ ಸಾಮಾನು ಸರಂಜಾಮಿನ ಸಹಿತ ಇನ್ನೊಂದು ಊರಿಗೆ ಹೋಗುವಂತೆ ಕೃಷಿ ಬದುಕೂ ಟೆಂಟ್ ಕಿತ್ತು ಇನ್ನೊಂದು ಬದುಕಿನತ್ತ ಹೋಗುವ ಬದಲಾವಣೆ ಆಗುವ “ಆಟ” ದಂತೆ ಎನಿಸುತ್ತಿದೆ.

ಈ ಅಸ್ಥಿರ ಅಭದ್ರ ಯಾರಿಗೂ ಬೇಡವಾದ ಅನ್ನ ಆಹಾರ ಕೊಡುವ ರಂಗದ ” ಕಿಸಾನ”ರಿಗೆ ಶುಭಾಶಯ ಹೇಳುವುದೋ  “ಶುಭ ವಿದಾಯ” ಹೇಳುವುದೋ ಅರಿವಾಗದಾಗಿದೆ..‌‌.!! ಸದ್ಯಕ್ಕೆ ನಮಗೆ ನಾವೇ ಜಯ್ ಎನ್ನೋಣ…. “ಜಯ್ ಕಿಸಾನ್ “… ರೈತ ಬಂಧುಗಳೇ ಪರಸ್ಪರ ಶುಭಾಶಯಗಳು…

Today is Farmers Day. “Ready-made” greetings are being shared among farming groups and other websites. The tragedy is that there is no celebration of “Farmer’s Day” for the society and our political system to celebrate all the other days..!? We farmers have to “wish” for “ourselves”…

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

ಇದನ್ನೂ ಓದಿ

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror