Advertisement
Opinion

ಇಂದು ರೈತ ದಿನಾಚರಣೆ | ನಾವು ರೈತರು ನಮಗೆ “ನಾವೇ” ಶುಭಾಶಯ ಕೋರಿಕೊಳ್ಳಬೇಕಾಗಿದೆ…!

Share

ಇವತ್ತು ರೈತರ ದಿನಾಚರಣೆ(Farmers day) ಅಂತೆ. ಕೃಷಿ ಗುಂಪುಗಳಲ್ಲಿ ಇತರೆ ಜಾಲತಾಣದಲ್ಲಿ(Social Media)”ರೆಡಿಮೇಡ್”(Ready-made) ಶುಭಾಶಯಗಳ(greetings) ಹಂಚಿಕೆಯಾಗುತ್ತಿದೆ. ದುರಂತ(tragedy) ಎಂದರೆ ಬೇರೆಲ್ಲಾ ದಿನಾಚರಣೆಗಳನ್ನು ಆಚರಿಸಲು(celebration ) ಸಮಾಜಕ್ಕೆ(Social) ಮತ್ತು ನಮ್ಮ ರಾಜಕೀಯ ವ್ಯವಸ್ಥೆಗಿರುವ(Political system) ಖುಷಿ “ರೈತ ದಿನಾಚರಣೆ” ಆಚರಣೆಗಿಲ್ಲ..!? ನಾವು ರೈತರು(Farmers) ನಮಗೆ “ನಾವೇ” ಶುಭಾಶಯಗಳನ್ನ‌” ಕೋರಿಕೊಳ್ಳಬೇಕಾಗಿದೆ”…

ಬದಲಾದ ಋತುಮಾನ, ಯಾವುದೇ ಔಷಧಕ್ಕೂ ಬಗ್ಗದ ಕೃಷಿ ರೋಗಗಳು, ಉತ್ಪಾದನಾ ವೆಚ್ಚಕ್ಕೂ ಮಾರುಕಟ್ಟೆ ಬೆಲೆಗೂ ತಾಳೆಯಾಗದ ಕೃಷಿ ಉತ್ಪನ್ನದ ಬೆಲೆಗಳೂ, ಕೃಷಿ ಬದುಕನ್ನ ಮಾಡಲು ಬರದ ಮೂರು ನಾಲ್ಕನೇ ತಲೆಮಾರಿನ ಪೀಳಿಗೆ… ಕೃಷಿಯಲ್ಲೀಗ ವೃದ್ದ ಕೃಷಿಕರು ಮತ್ತು ಕೂಲಿ ಕಾರ್ಮಿಕರು… ಸರ್ಕಸ್ ಕಂಪೆನಿಯವರು ಊರ ಬಯಲಿನಲ್ಲಿ ಪ್ರದರ್ಶನ ಹಾಕಿ ಒಂದು ದಿನ ಪ್ರದರ್ಶನ ‌ಮುಗಿಸಿ ಟೆಂಟು ಕಿತ್ತು ತಮ್ಮ ಸಾಮಾನು ಸರಂಜಾಮಿನ ಸಹಿತ ಇನ್ನೊಂದು ಊರಿಗೆ ಹೋಗುವಂತೆ ಕೃಷಿ ಬದುಕೂ ಟೆಂಟ್ ಕಿತ್ತು ಇನ್ನೊಂದು ಬದುಕಿನತ್ತ ಹೋಗುವ ಬದಲಾವಣೆ ಆಗುವ “ಆಟ” ದಂತೆ ಎನಿಸುತ್ತಿದೆ.

ಈ ಅಸ್ಥಿರ ಅಭದ್ರ ಯಾರಿಗೂ ಬೇಡವಾದ ಅನ್ನ ಆಹಾರ ಕೊಡುವ ರಂಗದ ” ಕಿಸಾನ”ರಿಗೆ ಶುಭಾಶಯ ಹೇಳುವುದೋ  “ಶುಭ ವಿದಾಯ” ಹೇಳುವುದೋ ಅರಿವಾಗದಾಗಿದೆ..‌‌.!! ಸದ್ಯಕ್ಕೆ ನಮಗೆ ನಾವೇ ಜಯ್ ಎನ್ನೋಣ…. “ಜಯ್ ಕಿಸಾನ್ “… ರೈತ ಬಂಧುಗಳೇ ಪರಸ್ಪರ ಶುಭಾಶಯಗಳು…

Today is Farmers Day. “Ready-made” greetings are being shared among farming groups and other websites. The tragedy is that there is no celebration of “Farmer’s Day” for the society and our political system to celebrate all the other days..!? We farmers have to “wish” for “ourselves”…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

41 minutes ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

2 hours ago

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

23 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

1 day ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

1 day ago