Advertisement
Uncategorized

ಇಂದು ರಾಷ್ಟ್ರೀಯ ಪಕ್ಷಿ ದಿನ ಹಾಗೂ ಪಕ್ಷಿತಜ್ಞ ಸಲೀಂ ಅಲಿ ಯವರ ಜನ್ಮದಿನ

Share

ಡಾ. ಸಲೀಂ ಅಲಿ(Salim Ali) ವಿಶ್ವಪ್ರಸಿದ್ಧ ಪಕ್ಷಿತಜ್ಞ(, ವಿಜ್ಞಾನಿ, ಪರಿಸರವಾದಿ ಹಾಗೂ ಛಾಯಾಗ್ರಾಹಕರು. ಅವರು ‘ಭಾರತದ ಪಕ್ಷಿ ಮನುಷ್ಯ (Bird man of India) ಎಂದೇ ಚಿರಪರಿಚಿತರು. ಪಕ್ಷಿಗಳ(Bird) ಬಗೆಗೆ ಅವರು ನಡೆಸಿದ ವೈಜ್ಞಾನಿಕ ಚಿಂತನೆಗಳು ವಿಶ್ವದೆಲ್ಲೆಡೆ ಗಮನ ಸೆಳೆದಿದ್ದು, ಪಕ್ಷಿಗಳ ಸಂಕುಲ ಮತ್ತು ನಿಸರ್ಗವನ್ನು ಅರ್ಥೈಸುವಲ್ಲಿ ಅವರ ಚಿಂತನೆ ಮತ್ತು ಬರಹಗಳು ಬಹಳ ಸಹಾಯಕಾರಿಯಾಗಿವೆ.

‘ಫಿನ್ ಬಯಾ’ ಎಂಬ ಪಕ್ಷಿಯ ಹೆಸರನ್ನು ಹೆಚ್ಚು ಮಂದಿ ಕೇಳಿರಲಿಲ್ಲ. ಏಕೆಂದರೆ ಇದು ಅತ್ಯಂತ ಅಪರೂಪದ ಪಕ್ಷಿ. ಸುಮಾರು ನೂರು ವರ್ಷಗಳಿಂದ ಪ್ರಾಣಿ ಶಾಸ್ತ್ರಜ್ಞರುಗಳು ಈ ಪಕ್ಷಿ ನಿರ್ವಂಶವಾಗಿ ಹೋಗಿದೆಯೆಂದೇ ಭಾವಿಸಿದ್ದರು. ಆದರೆ ಕುಮಾವೋ ಬೆಟ್ಟಗಳಲ್ಲಿ ಆ ಪಕ್ಷಿ ಅಸ್ತಿತ್ವದಲ್ಲಿದ್ದುದನ್ನು ಗುರುತಿಸಿದ ಪಕ್ಷಿ ಶಾಸ್ತ್ರಜ್ಞ ಸಲೀಂ ಅಲಿ ಪಕ್ಷಿಪ್ರಿಯರನ್ನು ವಿಸ್ಮಯಗೊಳಿಸಿದರು.

ಸಲೀಂ ಮೊಯುಜುದ್ದೀನ್ ಅಬ್ದುಲ್ ಅಲಿ 1896 ರ ನವೆಂಬರ್ 12 ರಂದು ಜನಿಸಿದರು. ಅವರು ವಿಶ್ವವಿದ್ಯಾಲಯದ ಯಾವ ಪದವಿಯನ್ನೂ ತೆಗೆದುಕೊಳ್ಳಲಿಲ್ಲ, ಪ್ರಕ್ರತಿಯೇ ಅವರಿಗೆ ಪಾಠಶಾಲೆಯಾಯಿತು. ಸಲೀಂ ಅಲಿ ಅವರಿಗೆ ಬಾಲ್ಯದಿಂದಲೇ ಪಕ್ಷಿಗಳ ಬಗ್ಗೆ ವಿಶೇಷ ಆಸಕ್ತಿ ಪ್ರೀತಿಗಳು ಮೊಳೆತವು. ಅವರು ಹತ್ತು ವರ್ಷದವರಾಗಿದ್ದಾಗ ಗುಬ್ಬಚ್ಚಿಯೊಂದನ್ನು ಹಿಡಿದಿದ್ದರು. ಅದರ ಕೊರಳಲ್ಲಿ ಹಳದಿ ಬಣ್ಣದ ಗುರುತಿತ್ತು. ಬೇರೆ ಗುಬ್ಬಚ್ಚಿಗಳಿಗೆ ಇಲ್ಲದ್ದು ಇದಕ್ಕೇಕಿದೆ ಎಂದು ಅವರಿಗೆ ತೋಚಲಿಲ್ಲ. ಬೇಟೆಯ ನಿಪುಣನಾಗಿದ್ದ ತನ್ನ ಮಾಮನಿಗೆ ಕೇಳಿದರು. ಆತನಿಗೂ ಅದರ ಗುರುತು ಸಿಕ್ಕಲಿಲ್ಲ. ಆತ ಸಲೀಮನನ್ನು ಮುಂಬೈಯಲ್ಲಿದ್ದ  ನ್ಯಾಚುರಲ್ ಹಿಸ್ಟರಿ ಸೊಸೈಟಿಯ ಗೌರವ ಕಾರ್ಯದರ್ಶಿ ಡಬ್ಲ್ಯೂ.ಎಸ್. ಮಿಲ್ಲಾರ್ಡ್ ಅವರ ಕಚೇರಿಗೆ ಕರೆದುಕೊಂಡು ಹೋದರು. ಪಕ್ಷಿಗಳ ವಿಷಯ ತಿಳಿಯುವಲ್ಲಿ ಹುಡುಗನ ಉತ್ಸುಕತೆಯನ್ನು ಕಂಡ ಅವರು ತಮ್ಮ ಬಳಿ ಇದ್ದ ಅಂಥ ಗುಬ್ಬಚ್ಚಿಯ ಮಾದರಿಯೊಂದನ್ನು ಆತನಿಗೆ ತೋರಿಸಿದರು. ಅಲ್ಲದೆ ಆತನಿಗೆ ಪ್ರೋತ್ಸಾಹವನ್ನೂ ನೀಡಿದರು.

ಬರ್ಮಾದಲ್ಲಿ ಕೆಲಸದಲ್ಲಿದ್ದ ತನ್ನ ಸೋದರನಿಗೆ ಸಹಾಯವಾಗಲೆಂದು ಅಲ್ಲಿಗೆ ಹೋದ ಸಲೀಂ ಅಲಿ, ಸುತ್ತಾಡಿದ್ದೆಲ್ಲಾ ಅಲ್ಲಿನ ಕಾಡುಮೇಡುಗಳಲ್ಲಿ. ಅಲ್ಲಿನ ಹಕ್ಕಿಗಳ ಚಿಲಿಪಿಲಿ ಗಾನ ಕೇಳುತ್ತಾ ಅವುಗಳ ಬಣ್ಣ, ಹಾರಾಟ ನೋಡುತ್ತಾ ಅವರಿಗೆ ಸಮಯ ಹೋಗಿದ್ದೇ ತಿಳಿಯುತ್ತಿರಲಿಲ್ಲವಂತೆ. ಬರ್ಮಾದಿಂದ ಹಿಂತಿರುಗಿದ ಬಳಿಕ ಸಲೀಂ ಅಲಿ ಪ್ರಾಣಿಶಾಸ್ತ್ರವನ್ನಭ್ಯಸಿಸಿ ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿಯಲ್ಲಿ ಗೈಡ್ ಆಗಿ ಕೆಲಸಕ್ಕೆ ಸೇರಿದರು. ಹೆಚ್ಚಿನ ತರಬೇತಿ ಪಡೆಯಲು ಜರ್ಮನಿಗೆ ಹೋಗಿ ಬಂದರು. ಆದರೆ ಭಾರತಕ್ಕೆ ಮರಳಿದಾಗ ಅವರಿಗಿದ್ದ ಕೆಲಸ ಕೈ ಬಿಟ್ಟು ಹೋಗಿತ್ತು. ಅವರಿಗೆ ಹೆಂಡತಿಯ ಸಂಪಾದನೆಯೇ ಜೀವನಾಧಾರವಾಗಿತ್ತು.
ಮೊದಲಿನಿಂದಲೂ ಪಕ್ಷಿಗಳ ಬಗ್ಗೆ ಅರಿವು ಮೂಡಿಸಿಕೊಂಡಿದ್ದ ಅಲಿಯವರು ಗೀಜಗ ಹಕ್ಕಿಯ ಬಗ್ಗೆ ಅಧ್ಯಯನ ನಡೆಸಿ ವಿಶ್ವದಾದ್ಯಂತ ಹೆಸರಾದರು. ಪಕ್ಷಿಗಳ ವಿಷಯವಾಗಿ ಅಧ್ಯಯನ ಮಾಡಲು ದೇಶಾದ್ಯಂತ ತಿರುಗಾಡಿದ ಸಲೀಂ ಅಲಿ ‘ದಿ ಬುಕ್ ಆಫ್ ಇಂಡಿಯನ್ ಬರ್ಡ್ಸ್’ ಎಂಬ ಉತ್ಕೃಷ್ಟವಾದ ಸಚಿತ್ರ ಪುಸ್ತಕವನ್ನು ಬರೆದಿದ್ದಾರೆ. ಈ ಕೃತಿಯ ಮೂಲಕ ಪಕ್ಷಿಗಳ ಜೀವನದ ಬಗೆಗಿನ ಅನೇಕ ರೋಚಕ ಅಂಶಗಳನ್ನು ಬೆಳಕಿಗೆ ತಂದಿದ್ದಾರೆ.

1948 ರಲ್ಲಿ ಅಲಿ ಅಂತರಾಷ್ತ್ರೀಯ ಮನ್ನಣೆ ಗಳಿಸಿದ ಮತ್ತೊಬ್ಬ ಪಕ್ಷಿ ವಿಜ್ಞಾನಿ ಎಸ್. ದಿಲಾನಿ ರಿಪ್ಲೆಯವರೊಂದಿಗೆ ಜೊತೆಗೂಡಿ ಹತ್ತು ಸಂಪುಟಗಳಲ್ಲಿ ‘ಹ್ಯಾಂಡ್ ಬುಕ್ ಆಫ್ ದ ಬರ್ಡ್ಸ್ ಆಫ್ ಇಂಡಿಯಾ ಆಂಡ್ ಪಾಕಿಸ್ತಾನ್’ ಎಂಬ ವಿಶಿಷ್ಟ ಗ್ರಂಥವನ್ನು ಹೊರತಂದರು. ಸಲೀಂ ಅಲಿ ತಮ್ಮ ಇಳಿವಯಸ್ಸಿನಲ್ಲೂ ಪಕ್ಷಿಗಳಿಗಾಗಿ ಹಂಬಲಿಸುತ್ತಿದ್ದ ಪರಿ ಎಂಥವರನ್ನು ಬೆರಗುಗೊಳಿಸುತ್ತಿತ್ತು. ಸಲೀಂ ಅಲಿ ಅವರ ಪಕ್ಷಿ ಕಾಳಜಿಗಳಿಂದಾಗಿ ಭರತ್ಪುರ ಪಕ್ಷಿಧಾಮ ನಿರ್ಮಾಣಗೊಂಡಿತು. ಸೈಲೆಂಟ್ ವ್ಯಾಲಿ ರಾಷ್ಟೀಯ ಉದ್ಯಾನವನವು ವಿನಾಶದ ಹಾದಿಯಿಂದ ಪುನರ್ಜನ್ಮ ಪಡೆಯಿತು.

ಅಲಿಯವರಿಗೆ ಪದ್ಮಭೂಷಣ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಗೌರವಗಳು ಸಂದವು. ಭಾರತ ಸರ್ಕಾರವು ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿಯೂ ನೇಮಿಸಿ ಗೌರವಿಸಿತ್ತು. ತಾವು ಪಕ್ಷಿಗಳ ಮಡಿಲಿನಲ್ಲಿ ಕಳೆದ ಜೀವನದ ಆತ್ಮಕಥೆಯನ್ನು ಅಲಿಯವರು ‘ಫಾಲ್ ಆಫ್ ಎ ಸ್ಪ್ಯಾರೋ’ ಎಂಬ ಕೃತಿಯಾಗಿ ಮೂಡಿಸಿದ್ದಾರೆ. ಸಲೀಂ ಅಲಿಯವರು 1987 ರ ವರ್ಷದಲ್ಲಿ ಮುಂಬೈಯಲ್ಲಿ ನಿಧನರಾದಾಗ ಪಕ್ಷಿಲೋಕದ ಅದ್ಬುತ ಇಂಚರವೊಂದು ಅಸ್ತಮಿಸಿದಂತಾಯಿತು.

– ವಾಟ್ಸ್ ಅಪಗ ಸಂಗ್ರಹ

Dr. Salim Ali is a world-renowned ornithologist, scientist, environmentalist and photographer. He is known as the 'Bird man of India'. His scientific thoughts on birds have attracted worldwide attention, and his thinking in understanding the nature and community of birds. And the writings are very helpful.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

13 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

14 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

17 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago