The Rural Mirror ವಾರದ ವಿಶೇಷ

ಇಂದು ರಾಷ್ಟ್ರೀಯ ರೈತ ದಿನ | ರಾಷ್ಟ್ರ ನಿರ್ಮಾಣದಲ್ಲಿ ರೈತರ ಪಾತ್ರವೇ ದೊಡ್ಡದು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇಂದು ರಾಷ್ಟ್ರೀಯ ರೈತ ದಿನ. ರೈತರಿಗಾಗಿ ಒಂದು ದಿನ. ಆದರೆ ವಾಸ್ತವದಲ್ಲಿ ರೈತರಿಗೆ ಒಂದು ದಿನವಲ್ಲ, ವರ್ಷವಿಡೀ ರೈತರದ್ದೇ ದಿನ. ರೈತ ಈ ನಾಡಿನಲ್ಲಿ ನೆಮ್ಮದಿಯಾಗಿದ್ದರೆ ದೇಶವೂ ನೆಮ್ಮದಿಯಾಗಿರಲು ಸಾಧ್ಯವಾದೀತು. ಇಂದಿನ ಹವಾಮಾನ ಬದಲಾವಣೆಯ ಕಾರಣದಿಂದ ರೈತ ಅಸ್ಥಿರವಾಗುತ್ತಿದ್ದಾನೆ, ಈ ಕಾರಣದಿಂದ ದೇಶದ ಹಲವು ವ್ಯವಸ್ಥೆಗಳೂ ಅಸ್ಥಿರವಾಗುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ರೈತರಿಗಾಗಿ ವಿವಿಧ ಯೋಜನೆ ರೂಪಿಸಿ ರೈತರನ್ನು ಸಶಕ್ತರನ್ನಾಗಿಸುವ ಕೆಲಸ ನಡೆಸುತ್ತಿದೆ.…..ಮುಂದೆ ಓದಿ….

Advertisement
Advertisement

ರೈತರು, ಈ  ದೇಶದ ಜೀವನಾಡಿ ಮತ್ತು ಅನ್ನದಾತರು ಎಂದು ಪೂಜಿಸಲ್ಪಡುತ್ತಾರೆ. ಅವರು ಭಾರತದ ಸಮೃದ್ಧಿಯ ಅಡಿಪಾಯ. ಅವರ ನಿರಂತರ ಶ್ರಮವು ರಾಷ್ಟ್ರವನ್ನು ಪೋಷಿಸುತ್ತದೆ, ಗ್ರಾಮೀಣ ಆರ್ಥಿಕತೆಯನ್ನು ಉಳಿಸಿಕೊಳ್ಳುತ್ತದೆ ಹಾಗೂ ಬೆಳೆಸುತ್ತದೆ. ರಾಷ್ಟ್ರೀಯ ರೈತರ ದಿನವನ್ನು ಡಿಸೆಂಬರ್ 23 ರಂದು ಆಚರಿಸಲಾಗುತ್ತದೆ, ಅದೇ ದಿನ ಭಾರತದ ಐದನೇ ಪ್ರಧಾನ ಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನವಾಗಿಯೂ ಗುರುತಿಸಿಕೊಂಡಿದೆ.

ದೇಶದಲ್ಲಿ ರೈತರ  ಪಾತ್ರವನ್ನು ಗುರುತಿಸಿ, ಭಾರತ ಸರ್ಕಾರವು ರೈತರ ಸಾಮಾಜಿಕ-ಆರ್ಥಿಕ ಉನ್ನತಿಯನ್ನು ಬೆಂಬಲಿಸಲು ಮತ್ತು ಸುಸ್ಥಿರ ಕೃಷಿ ಬೆಳವಣಿಗೆಗಾಗಿ ಹಲವು ಕ್ರಮಗಳನ್ನು ಕೈಗೊಂಡಿದೆ.  ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಕಿಸಾನ್ ಮನ್ಧನ್ ಯೋಜನೆ  ಸೇರಿದಂತೆ ಹಲವು ಕಾರ್ಯಕ್ರಮಗಳು ಆರ್ಥಿಕ ಭದ್ರತೆ, ಕೃಷಿ ಹಾನಿಯ ಪರಿಣಾಮ ತಗ್ಗಿಸುವಿಕೆಯ ಗುರಿಯನ್ನು ಹೊಂದಿವೆ.

ಭಾರತದ ಕೃಷಿ ಕ್ಷೇತ್ರವು ರಾಷ್ಟ್ರದ ಜನಸಂಖ್ಯೆಯ ಅರ್ಧದಷ್ಟು ಜನರಿಗೆ ಉದ್ಯೋಗ ನೀಡುತ್ತಿದೆ. ಇದು ದೇಶದ ಆರ್ಥಿಕತೆಯ ಮೂಲಾಧಾರವಾಗಿದೆ ಮತ್ತು ರಾಷ್ಟ್ರ ನಿರ್ಮಾಣದ ಪ್ರಮುಖ ಶಕ್ತಿಯಾಗಿದೆ. ದೇಶದ 328.7 ಮಿಲಿಯನ್ ಹೆಕ್ಟೇರ್‌ಗಳಲ್ಲಿ ಸರಿಸುಮಾರು 54.8% ರಷ್ಟು ಕೃಷಿ ಭೂಮಿ ಎಂದು ವರ್ಗೀಕರಿಸಲಾಗಿದೆ. ಹೀಗಾಗಿ ರೈತರು ಈ ದೇಶದ ಅಗತ್ಯ ವಲಯದ ತಳಹದಿಯಾಗಿದ್ದಾರೆ. ಅವರ ಪಾತ್ರವು ಕೇವಲ ಕೃಷಿಯಷ್ಟೇ ಅಲ್ಲ, ಅದರಿಂದ ಆಚೆಗೂ ಕೃಷಿಕರ ಪಾತ್ರ ಇದೆ. ಗ್ರಾಮೀಣ ಅಭಿವೃದ್ಧಿ ಮತ್ತು ರಾಷ್ಟ್ರನಿರ್ಮಾಣದಲ್ಲೂ ರೈತರ ಪಾಲು ದೊಡ್ಡದು. ಏಕೆಂದರೆ ಆಹಾರ ಭದ್ರತೆಯನ್ನು ಒದಗಿಸುವುದು ಹಾಗೂ ಲಕ್ಷಾಂತರ ಜನರ ಜೀವನೋಪಾಯವನ್ನೂ ಕೃಷಿ ಕಲ್ಪಿಸಿಕೊಡುತ್ತದೆ.

2023-24 ರಲ್ಲಿ, ದೇಶವು 332.2 ಮಿಲಿಯನ್ ಟನ್‌ಗಳ  ಒಟ್ಟು ಆಹಾರ ಧಾನ್ಯ ಉತ್ಪಾದನೆಯನ್ನು ಸಾಧಿಸಿದೆ. ಹಿಂದಿನ ವರ್ಷ  329.7 ಮಿಲಿಯನ್ ಟನ್‌ ಉತ್ಪಾದನೆಯಾಗಿತ್ತು. ಈ ಗಮನಾರ್ಹ ಬೆಳವಣಿಗೆಯು ರಾಷ್ಟ್ರಕ್ಕೆ ಆಹಾರ ಭದ್ರತೆಯನ್ನು ನೀಡುತ್ತಿದೆ.  ಹೀಗಾಗಿ ಕೃಷಿಕರ  ಪ್ರಯತ್ನಗಳು ಕೇವಲ ಬೆಳೆ-ಕೃಷಿಯ ಮಾತ್ರವಲ್ಲ ಎನ್ನುವುದು ಮತ್ತೆ ಖಚಿತಪಡಿಸುತ್ತವೆ. ಇದಕ್ಕಾಗಿಯೇ ಕೃಷಿ ಎನ್ನುವುದು ಈ ದೇಶದ ಮೊದಲ ಆದ್ಯತೆಯ ಉದ್ಯೋಗ, ಸೇವೆ ಹಾಗೂ ದೇಶದ ಕೆಲಸ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಹಲಸಿನ ಹಣ್ಣಿನ ಗುಳಿ ಅಪ್ಪ

ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 2.1/2…

12 hours ago

ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಪ್ರಾದೇಶಿಕ ಒಪ್ಪಂದಕ್ಕೆ ಬಲಿಯಾಯಿತೇ ಕಾಳು ಮೆಣಸು..?

ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…

14 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

20 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

20 hours ago