Advertisement
The Rural Mirror ವಾರದ ವಿಶೇಷ

ಇಂದು ರಾಷ್ಟ್ರೀಯ ರೈತ ದಿನ | ರಾಷ್ಟ್ರ ನಿರ್ಮಾಣದಲ್ಲಿ ರೈತರ ಪಾತ್ರವೇ ದೊಡ್ಡದು |

Share

ಇಂದು ರಾಷ್ಟ್ರೀಯ ರೈತ ದಿನ. ರೈತರಿಗಾಗಿ ಒಂದು ದಿನ. ಆದರೆ ವಾಸ್ತವದಲ್ಲಿ ರೈತರಿಗೆ ಒಂದು ದಿನವಲ್ಲ, ವರ್ಷವಿಡೀ ರೈತರದ್ದೇ ದಿನ. ರೈತ ಈ ನಾಡಿನಲ್ಲಿ ನೆಮ್ಮದಿಯಾಗಿದ್ದರೆ ದೇಶವೂ ನೆಮ್ಮದಿಯಾಗಿರಲು ಸಾಧ್ಯವಾದೀತು. ಇಂದಿನ ಹವಾಮಾನ ಬದಲಾವಣೆಯ ಕಾರಣದಿಂದ ರೈತ ಅಸ್ಥಿರವಾಗುತ್ತಿದ್ದಾನೆ, ಈ ಕಾರಣದಿಂದ ದೇಶದ ಹಲವು ವ್ಯವಸ್ಥೆಗಳೂ ಅಸ್ಥಿರವಾಗುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ರೈತರಿಗಾಗಿ ವಿವಿಧ ಯೋಜನೆ ರೂಪಿಸಿ ರೈತರನ್ನು ಸಶಕ್ತರನ್ನಾಗಿಸುವ ಕೆಲಸ ನಡೆಸುತ್ತಿದೆ.…..ಮುಂದೆ ಓದಿ….

ರೈತರು, ಈ  ದೇಶದ ಜೀವನಾಡಿ ಮತ್ತು ಅನ್ನದಾತರು ಎಂದು ಪೂಜಿಸಲ್ಪಡುತ್ತಾರೆ. ಅವರು ಭಾರತದ ಸಮೃದ್ಧಿಯ ಅಡಿಪಾಯ. ಅವರ ನಿರಂತರ ಶ್ರಮವು ರಾಷ್ಟ್ರವನ್ನು ಪೋಷಿಸುತ್ತದೆ, ಗ್ರಾಮೀಣ ಆರ್ಥಿಕತೆಯನ್ನು ಉಳಿಸಿಕೊಳ್ಳುತ್ತದೆ ಹಾಗೂ ಬೆಳೆಸುತ್ತದೆ. ರಾಷ್ಟ್ರೀಯ ರೈತರ ದಿನವನ್ನು ಡಿಸೆಂಬರ್ 23 ರಂದು ಆಚರಿಸಲಾಗುತ್ತದೆ, ಅದೇ ದಿನ ಭಾರತದ ಐದನೇ ಪ್ರಧಾನ ಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನವಾಗಿಯೂ ಗುರುತಿಸಿಕೊಂಡಿದೆ.

ದೇಶದಲ್ಲಿ ರೈತರ  ಪಾತ್ರವನ್ನು ಗುರುತಿಸಿ, ಭಾರತ ಸರ್ಕಾರವು ರೈತರ ಸಾಮಾಜಿಕ-ಆರ್ಥಿಕ ಉನ್ನತಿಯನ್ನು ಬೆಂಬಲಿಸಲು ಮತ್ತು ಸುಸ್ಥಿರ ಕೃಷಿ ಬೆಳವಣಿಗೆಗಾಗಿ ಹಲವು ಕ್ರಮಗಳನ್ನು ಕೈಗೊಂಡಿದೆ.  ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಕಿಸಾನ್ ಮನ್ಧನ್ ಯೋಜನೆ  ಸೇರಿದಂತೆ ಹಲವು ಕಾರ್ಯಕ್ರಮಗಳು ಆರ್ಥಿಕ ಭದ್ರತೆ, ಕೃಷಿ ಹಾನಿಯ ಪರಿಣಾಮ ತಗ್ಗಿಸುವಿಕೆಯ ಗುರಿಯನ್ನು ಹೊಂದಿವೆ.

ಭಾರತದ ಕೃಷಿ ಕ್ಷೇತ್ರವು ರಾಷ್ಟ್ರದ ಜನಸಂಖ್ಯೆಯ ಅರ್ಧದಷ್ಟು ಜನರಿಗೆ ಉದ್ಯೋಗ ನೀಡುತ್ತಿದೆ. ಇದು ದೇಶದ ಆರ್ಥಿಕತೆಯ ಮೂಲಾಧಾರವಾಗಿದೆ ಮತ್ತು ರಾಷ್ಟ್ರ ನಿರ್ಮಾಣದ ಪ್ರಮುಖ ಶಕ್ತಿಯಾಗಿದೆ. ದೇಶದ 328.7 ಮಿಲಿಯನ್ ಹೆಕ್ಟೇರ್‌ಗಳಲ್ಲಿ ಸರಿಸುಮಾರು 54.8% ರಷ್ಟು ಕೃಷಿ ಭೂಮಿ ಎಂದು ವರ್ಗೀಕರಿಸಲಾಗಿದೆ. ಹೀಗಾಗಿ ರೈತರು ಈ ದೇಶದ ಅಗತ್ಯ ವಲಯದ ತಳಹದಿಯಾಗಿದ್ದಾರೆ. ಅವರ ಪಾತ್ರವು ಕೇವಲ ಕೃಷಿಯಷ್ಟೇ ಅಲ್ಲ, ಅದರಿಂದ ಆಚೆಗೂ ಕೃಷಿಕರ ಪಾತ್ರ ಇದೆ. ಗ್ರಾಮೀಣ ಅಭಿವೃದ್ಧಿ ಮತ್ತು ರಾಷ್ಟ್ರನಿರ್ಮಾಣದಲ್ಲೂ ರೈತರ ಪಾಲು ದೊಡ್ಡದು. ಏಕೆಂದರೆ ಆಹಾರ ಭದ್ರತೆಯನ್ನು ಒದಗಿಸುವುದು ಹಾಗೂ ಲಕ್ಷಾಂತರ ಜನರ ಜೀವನೋಪಾಯವನ್ನೂ ಕೃಷಿ ಕಲ್ಪಿಸಿಕೊಡುತ್ತದೆ.

2023-24 ರಲ್ಲಿ, ದೇಶವು 332.2 ಮಿಲಿಯನ್ ಟನ್‌ಗಳ  ಒಟ್ಟು ಆಹಾರ ಧಾನ್ಯ ಉತ್ಪಾದನೆಯನ್ನು ಸಾಧಿಸಿದೆ. ಹಿಂದಿನ ವರ್ಷ  329.7 ಮಿಲಿಯನ್ ಟನ್‌ ಉತ್ಪಾದನೆಯಾಗಿತ್ತು. ಈ ಗಮನಾರ್ಹ ಬೆಳವಣಿಗೆಯು ರಾಷ್ಟ್ರಕ್ಕೆ ಆಹಾರ ಭದ್ರತೆಯನ್ನು ನೀಡುತ್ತಿದೆ.  ಹೀಗಾಗಿ ಕೃಷಿಕರ  ಪ್ರಯತ್ನಗಳು ಕೇವಲ ಬೆಳೆ-ಕೃಷಿಯ ಮಾತ್ರವಲ್ಲ ಎನ್ನುವುದು ಮತ್ತೆ ಖಚಿತಪಡಿಸುತ್ತವೆ. ಇದಕ್ಕಾಗಿಯೇ ಕೃಷಿ ಎನ್ನುವುದು ಈ ದೇಶದ ಮೊದಲ ಆದ್ಯತೆಯ ಉದ್ಯೋಗ, ಸೇವೆ ಹಾಗೂ ದೇಶದ ಕೆಲಸ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

3 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

4 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago