Advertisement
ಮಾಹಿತಿ

ನಮ್ಮಪರಿಸರ | ಇಂದು ವಿಶ್ವ ಪ್ಯಾಂಗೋಲಿಯನ್ ದಿನ | ಅಳಿವಿನಂಚಿನಲ್ಲಿವೆ ಚಿಪ್ಪು ಹಂದಿ ಸಂತತಿ |

Share

ವಿಶ್ವ ಪ್ಯಾಂಗೋಲಿನ್ ದಿನವನ್ನು  ಪ್ರತಿವರ್ಷ ಫೆಬ್ರವರಿ ಮೂರನೇ ಶನಿವಾರ ಆಚರಿಸಲಾಗುತ್ತದೆ. ವಿಶ್ವದಲ್ಲಿ ಅತೀ ಹೆಚ್ಚು ಕಳ್ಳಸಾಗಣೆಗೆ ಬಲಿಯಾಗಿ ವಿನಾಶವಾಗುವ ಹಂತ ತಲುಪಿದ ಪ್ಯಾಂಗೋಲಿನ್ಗಳ ಬಗೆಗೆ ಅರಿವು ಹಾಗು ನಿಸರ್ಗದಲ್ಲಿ ಅವುಗಳ ಪಾತ್ರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ 2012 ರಿಂದ ವಿಶ್ವ ಪ್ಯಾಂಗೋಲಿನ್ ದಿನವನ್ನು ಆಚರಿಸಲಾಗುತ್ತದೆ.

ಪ್ಯಾಂಗೋಲಿನ್ ಅಥವಾ ಚಿಪ್ಪುಹಂದಿ ಬಗೆಗೆ ಕೆಲವು ಕುತೂಹಲಕರ ಮಾಹಿತಿ ಇಲ್ಲಿವೆ:  ಚಿಪ್ಪು ಹಂದಿಗಳು ಆಫ್ರಿಕಾ ಹಾಗು ಏಷಿಯಾ ಈ ಎರಡು ಖಂಡಗಳಿಗೆ ಸೀಮಿತವಾಗಿದ್ದು ಇವುಗಳಲ್ಲಿ ಒಂದೇ ಕುಟುಂಬಕ್ಕೆ ಸೇರಿದ ಎಂಟು ಜಾತಿಗಳಿದ್ದು ನಾಲ್ಕು ಆಫ್ರಿಕಾದಲ್ಲಿದ್ದರೆ ಉಳಿದ ನಾಲ್ಕು ಏಷಿಯಾದಲ್ಲಿವೆ. ಇವು ವಿಕಾಸದಲ್ಲಿ ಅಷ್ಟಾಗಿ ಮುಂದುವರಿಯದ ಹಳೆ ಜಗತ್ತಿನ ಪ್ರಾಣಿಗಳು, ಇವುಗಳ ಬಾಯಲ್ಲಿ ಹಲ್ಲುಗಳಿಲ್ಲ, ಕಿವಿಗಳು ವಿಶೇಷವಾಗಿ ಬೆಳೆದಿಲ್ಲ ಹಾಗು ಚಿಕ್ಕ ಕಣ್ಣುಗಳಿವೆ, ನಾಲಿಗೆ ದೇಹಕ್ಕಿಂತ ಉದ್ದವಾಗಿದೆ.

ಚಿಪ್ಪುಗಳ ಹೊದಿಕೆ ಇರುವ ಪ್ರಪಂಚದ ಏಕಮಾತ್ರ ಸಸ್ತನಿಗಳು ಇವು, ಏಷಿಯಾದ ಪ್ಯಾಂಗೋಲಿನ್ಗಳ ಮೈಮೇಲೆ ವಿರಳ ಕೂದಲುಗಳು ಇವೆ, ಕೂದಲುಗಳ ಇರುವಿಕೆ ಸಸ್ತನಿಗಳ ಮುಖ್ಯ ಲಕ್ಷಣಗಳಾಗಿವೆ. ಭಾರತದಲ್ಲಿ ಚೈನೀಸ್ ಪ್ಯಾಂಗೋಲಿನ್ ಹಾಗು ಇಂಡಿಯನ್ ಪ್ಯಾಂಗೋಲಿನ್ ಈ ಎರಡು ಜಾತಿಗಳಿವೆ.  ಪ್ಯಾಂಗೋಲಿನ್ ಗಳಿಗೆ ಮಲಯ ಭಾಷೆಯಲ್ಲಿ ಗುಂಡಾಗಿ ಉರುಳು ಎಂಬ ಅರ್ಥವಿದೆ.

ಇವುಗಳ ಮುಖ್ಯ ಆಹಾರ, ಗೆದ್ದಲು ಇರುವೆ ಹಾಗು ಕೆಲವು ಹುಳುಗಳು(Maggot) ದಿನಕ್ಕೆ ಹತ್ತರಿಂದ ಇಪ್ಪತ್ತು ಸಾವಿರ ಇರುವೆ ಗೆದ್ದಲನ್ನು ತಿನ್ನಬಲ್ಲವು.  ಮರಿಗಳನ್ನ ಬಾಲದ ಮೇಲೆ ಕೂರಿಸಿಕೊಂಡು ಸವಾರಿ ಮಾಡುತ್ತವೆ.  ಕಾಂಕ್ರೀಟಿನಷ್ಟು ಗಟ್ಟಿಯಾದ ನೆಲವನ್ನು ಸುಲಭವಾಗಿ ಅಗೆಯುತ್ತವೆ, ಕಾಡಿನಲ್ಲಿ ದೊಡ್ಡ ಹಾಗು ಆಳವಾದ ಬಿಲಗಳನ್ನು ಕೊರೆವ ಶಕ್ತಿ ಚಿಪ್ಪು ಹಂದಿಗಳಿಗೆ ಮಾತ್ರ ಇದೆ, ಈ ಬಿಲಗಳಲ್ಲಿ ಮುಳ್ಳುಹಂದಿಗಳು ಹೆಬ್ಬಾವು ವಾಸಿಸುತ್ತವೆ.

ನಮ್ಮ ರಾಜ್ಯದಲ್ಲಿ ಇಂಡಿಯನ್ ಪ್ಯಾಂಗೋಲಿನ್ ಮಾತ್ರ ಕಾಣಿಸುತ್ತದೆ.  ರಾತ್ರಿ ಸಂಚಾರಿಗಳು ಹಾಗು ನಿಧಾನವಾಗಿ ಚಲಿಸುತ್ತವೆ. ಚಿಪ್ಪುಗಳು ನಮ್ಮ ಬೆರಳಿನ ಉಗುರುಗಳಂತೆ ಕೆರಾಟಿನ್ ಎಂಬ ಪದಾರ್ಥರಿಂದ ರಚನೆಯಾಗಿದ್ದು  ಇವು ಯಾವುದೇ ಔಷಧಿಯ ಗುಣ ಹೊಂದಿಲ್ಲ.

ಮಾಂಸಕ್ಕಾಗಿ ಮಾತ್ರ ಬೇಟೆ ನಡೆಯುತ್ತಿದ್ದಾಗ ಇವುಗಳ ಸಂಖ್ಯೆ ಸ್ವಲ್ಪ ಸಮಾಧಾನಕರವಾಗಿತ್ತು, ಯಾವಾಗ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇವುಗಳ ಚಿಪ್ಪು, ಮಾಂಸಕ್ಕೆ ಬೇಡಿಕೆ ಹೆಚ್ಚಾಯಿತೋ ಅಂದಿನಿಂದ ಇವುಗಳ ಬೇಟೆ ಹಾಗು ಜೀವಂತ ಸೆರೆ ಹಿಡಿಯುವಿಕೆ ಹೆಚ್ಚತೊಡಗಿತು. ಹಾರೆ ಗುದ್ದಲಿಯೊಂದಿಗೆ ಕಾಡಿಗೆ ನುಗ್ಗಿ ಚಿಪ್ಪುಹಂದಿಗಳ ಬಿಲಗಳನ್ನು ಅಗೆದು ಹಿಡಿಯತೊಡಗಿದರು.

ಕಳೆದೊಂದು ದಶಕದಲ್ಲಿ  ಸುಮಾರು 10 ಲಕ್ಷಕ್ಕೂ ಅಧಿಕ ಪ್ಯಾಂಗೋಲಿನ್ ಗಳ ಮಾರಣ ಹೋಮ ಮಾಡಲಾಗಿದೆ. ಚೀನಾ ಹಾಗು ವಿಯೆಟ್ನಾಂ ದೇಶಗಳಲ್ಲಿ ಚಿಪ್ಪುಹಂದಿ ಅಂಗಾಂಗಳಿಂದ  ಸಾಂಪ್ರದಾಯಕ ಔಷಧಿ ತಯಾರಿಸುತ್ತಾರೆ ವೇಗವಾಗಿ ಅಳಿಯುತ್ತಿರುವ ಇವುಗಳನ್ನು ಸಂರಕ್ಷಣೆ ಮಾಡದ್ದಿದ್ದರೆ ಮುಂದಿನ ದಿನಗಳಲ್ಲಿ ಇವುಗಳನ್ನು ಚಿತ್ರಗಳಲ್ಲಿ ಮಾತ್ರ ನೋಡಲು ಸಾಧ್ಯವಿದೆ.1972 ರ ವನ್ಯಜೀವಿ ಕಾಯ್ದೆಯ ಶೆಡ್ಯೂಲ್ 1 ರಲ್ಲಿ ಸಂರಕ್ಷಣೆಗೊಳಪಟ್ಟಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago