ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ವಿಜಯಪುರ ಜಿಲ್ಲೆಯಲ್ಲಿ ನೊಂದಾಯಿಸಿಕೊಂಡ 45,843 ರೈತರ ಪೈಕಿ 39,537 ರೈತರಿಂದ ಅತಿ ಹೆಚ್ಚು ಪ್ರಮಾಣದ 6.56 ಲಕ್ಷ ಕ್ವಿಂಟಾಲ್ ತೊಗರಿಯನ್ನು ಖರೀದಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ. ರಾಜ್ಯದಲ್ಲಿಯೇ ಅತಿ ಹೆಚ್ಚು ಪ್ರಮಾಣದ ತೊಗರಿಯನ್ನು ವಿಜಯಪುರ ಜಿಲ್ಲೆಯಲ್ಲಿ ಖರೀದಿಸಲಾಗಿದ್ದು, ಕಲಬುರಗಿ ದ್ವೀತಿಯ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ 10 ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, 45843 ರೈತರು ನೊಂದಣಿ ಮಾಡಿಕೊಂಡಿದ್ದಾರೆ. ಪ್ರತಿ ಕ್ವಿಂಟಾಲ್ ತೊಗರಿಗೆ 7 550 ರಂತೆ ನಾಫೆಡ್ ಸಂಸ್ಥೆಯಿಂದ 22 ಸಾವಿರದ 30 ರೈತರಿಗೆ 270 ಕೋಟಿ ರೂಪಾಯಿಗಳನ್ನು ಹಾಗೂ 450 ರೂಪಾಯಿಯಂತೆ ರಾಜ್ಯ ಪ್ರೊತ್ಸಾಹ ಧನ ನೀಡಿದೆ. 10 ಕೋಟಿ.44 ಲಕ್ಷ ರೂಪಾಯಿಗಳನ್ನು 14 613 ರೈತರಿಗೆ ಡಿಬಿಟಿ ಮೂಲಕ ಜಮೆ ಮಾಡಲಾಗಿದ್ದು, ಬಾಕಿ ಉಳಿದ ರೈತರಿಗೆ ಹಂತ ಹಂತವಾಗಿ ಜಮೆ ಮಾಡಲಾಗುವದು ಎಂದು ಮಾಹಿತಿ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel