ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ವಿಜಯಪುರ ಜಿಲ್ಲೆಯಲ್ಲಿ ನೊಂದಾಯಿಸಿಕೊಂಡ 45,843 ರೈತರ ಪೈಕಿ 39,537 ರೈತರಿಂದ ಅತಿ ಹೆಚ್ಚು ಪ್ರಮಾಣದ 6.56 ಲಕ್ಷ ಕ್ವಿಂಟಾಲ್ ತೊಗರಿಯನ್ನು ಖರೀದಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ. ರಾಜ್ಯದಲ್ಲಿಯೇ ಅತಿ ಹೆಚ್ಚು ಪ್ರಮಾಣದ ತೊಗರಿಯನ್ನು ವಿಜಯಪುರ ಜಿಲ್ಲೆಯಲ್ಲಿ ಖರೀದಿಸಲಾಗಿದ್ದು, ಕಲಬುರಗಿ ದ್ವೀತಿಯ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ 10 ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, 45843 ರೈತರು ನೊಂದಣಿ ಮಾಡಿಕೊಂಡಿದ್ದಾರೆ. ಪ್ರತಿ ಕ್ವಿಂಟಾಲ್ ತೊಗರಿಗೆ 7 550 ರಂತೆ ನಾಫೆಡ್ ಸಂಸ್ಥೆಯಿಂದ 22 ಸಾವಿರದ 30 ರೈತರಿಗೆ 270 ಕೋಟಿ ರೂಪಾಯಿಗಳನ್ನು ಹಾಗೂ 450 ರೂಪಾಯಿಯಂತೆ ರಾಜ್ಯ ಪ್ರೊತ್ಸಾಹ ಧನ ನೀಡಿದೆ. 10 ಕೋಟಿ.44 ಲಕ್ಷ ರೂಪಾಯಿಗಳನ್ನು 14 613 ರೈತರಿಗೆ ಡಿಬಿಟಿ ಮೂಲಕ ಜಮೆ ಮಾಡಲಾಗಿದ್ದು, ಬಾಕಿ ಉಳಿದ ರೈತರಿಗೆ ಹಂತ ಹಂತವಾಗಿ ಜಮೆ ಮಾಡಲಾಗುವದು ಎಂದು ಮಾಹಿತಿ ನೀಡಿದ್ದಾರೆ.
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…
ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…
ಸುಮಾರು ಒಂದು ದಶಕದ ಬಳಿಕ NCDEX ಕಾಳುಮೆಣಸು ಫ್ಯೂಚರ್ಸ್ ವಹಿವಾಟನ್ನು ಜೂನ್ ಅಂತ್ಯದೊಳಗೆ…
ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…