ಟೊಮೆಟೋ….! ಇದೊಂದು ಅತ್ತ ಹಣ್ಣು ಅಲ್ಲ.. ಇತ್ತ ತರಕಾರಿಯೂ ಅಲ್ಲ. ಕೇವಲ ಹುಣಸೇ ಹಣ್ಣಿಗೆ ಪರಿಯಾಯವಾಗಿ ಸೃಷ್ಟಿಸಲಾಗಿದೆ. ಅಡುಗೆಯಲ್ಲಿ ನೈಸರ್ಗಿಕವಾಗಿ ರುಚಿ ಬೇಕೆಂದರೆ ಹುಣಸೆ ಹಣ್ಣನ್ನು ಮಾತ್ರ ಬಳಸಿ, ಟೊಮೆಟೋ ಕೇವಲ ರುಚಿ ನೀಡಬಲ್ಲದೇ ಹೊರತು ಆರೋಗ್ಯವನ್ನಲ್ಲ.. ಹೀಗಂತ ಹೇಳಿದವರು ಆಹಾರ ತಜ್ಞರೊಬ್ಬರು. ಆದರೆ ಈ ಟೊಮೆಟೋಗಾಗಿ ಕೊಲೆಯೇ ನಡೆದು ಹೋಯ್ತು….!
ಈಗ ಮಾತ್ರ ಟೊಮೆಟೊಗೆ ಕಾಲ ಬಂದಿದೆ ಅಷ್ಟೆ…! ಬೆಲೆ ಏರಿಕೆಯಾಗಿ ಜನ ಕಂಗಾಲಾದ್ರೆ, ಟೊಮೆಟೋ ಕಾಪಾಡಿಕೊಳ್ಳಲು ವ್ಯಾಪಾರಸ್ಥರು, ರೈತರು ಪರದಾಡುತ್ತಿದ್ದಾರೆ. ಕೆಲವೆಡೆ ಟೊಮೆಟೋ ಕಳ್ಳತನ ತಡೆಯಲು ಅಂಗಡಿಗೆ ಸಿಸಿಟಿವಿ ಹಾಕಿಸಿದ್ದು, ಇನ್ನೊಂದು ಕಡೆ ಕಾವಲುಗಾರರನ್ನು ನೇಮಿಸಿದ್ದು ಸುದ್ದಿಯಾಗಿತ್ತು. ಈ ಮಧ್ಯೆ ಕೊಯ್ಲಿಗೆ ಬಂದಿದ್ದ ಟನ್ಗಟ್ಟಲೆ ಟೊಮೆಟೋವನ್ನು ಗದ್ದೆಗೆ ನುಗ್ಗಿ ಕಳ್ಳರು ರಾತ್ರೋ ರಾತ್ರಿ ಕದ್ದು ಬೆಳಗಾರರ ಕುಟುಂಬ ಕಣ್ಣೀರು ಹಾಕುವಂತೆ ಮಾಡಿದ್ದರು. ಇದೀಗ ಮತ್ತೊಂದು ಘಟನೆ ನಡೆದಿದ್ದು, ಟೊಮೆಟೋ ಮಾರಾಟ ಮಾಡಿ 30 ಲಕ್ಷ ರೂ. ಗಳಿಸಿದ್ದ ರೈತನನ್ನು ದರೋಡೆಕೋರರು ಕೊಲೆ ಮಾಡಿದ ಘಟನೆ ನಡೆದಿದೆ.
ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ರೈತನನ್ನು ಅಡ್ಡಗಟ್ಟಿದ ದರೋಡೆಕೋರರು ಕೃತ್ಯ ಎಸಗಿದ್ದಾರೆ. ಮೃತ ವ್ಯಕ್ತಿಯನ್ನು ಮದನಪಲ್ಲಿಯ ರಾಜಶೇಖರ್ ರೆಡ್ಡಿ (62) ಎಂದು ಗುರುತಿಸಲಾಗಿದ್ದು, ಇವರು ಟೊಮೆಟೋ ಬೆಳೆದು ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ವಾಪಸ್ ಆಗುತ್ತಿದ್ದರು.
ಜುಲೈ ಮೊದಲ ವಾರದಲ್ಲಿ ಬೆಲೆ ಏರಿಕೆಯಾಗುತ್ತಿದ್ದಾಗ ಸುಮಾರು 70 ಬಾಕ್ಸ್ ಟೊಮೆಟೋ ಮಾರಾಟ ಮಾಡಿ 30 ಲಕ್ಷ ರೂ. ಗಳಿಸಿದ್ದರು ಎಂದು ತಿಳಿದು ಬಂದಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಕೊಲೆಯಲ್ಲಿ ದರೋಡೆಕೋರರ ಜೊತೆಗೆ ಕೆಲವು ಉದ್ಯಮಿಗಳು ಭಾಗಿಯಾಗಿದ್ದಾರೆ ಎಂದು ಕುಟುಂಬ ಸದಸ್ಯರು ಶಂಕಿಸಿದ್ದಾರೆ.
(Source : net)
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…