Advertisement
ಸುದ್ದಿಗಳು

#PriceHike | ಏರಿದ ಟೊಮೆಟೋ ಬೆಲೆ | ಕೇಳಿ ಈ ಟೊಮೆಟಾಯಣ ಕಥೆ…!

Share

ಟೊಮೆಟೋ ಬೆಲೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈ ಟೊಮೆಟೋ ರೇಟು ಏರಿಕೆ ಕಥೆಯಲ್ಲಿ ದಿನಕ್ಕೊಂದು ರಾಮಾಯಣ. ಟೊಮೆಟೋ ಕಾಪಾಡುವುದೇ ದೊಡ್ಡ ಸವಾಲಾಗಿದೆ, ಹಾಗೇ ಕೊಳ್ಳುವುದು ಭಾರಿ ತ್ರಾಸ ಆಗಿದೆ. ಟೊಮೆಟೋ ದರ ಏರಿಕೆ ಏಕೆ ಎನ್ನುವುದಕ್ಕಿಂತಲೂ ಟೊಮೊಟೋ ಉಳಿಸುವುದು  ಹೇಗೆ ಎನ್ನುವುದು ಈಗ ಪ್ರಶ್ನೆ.

ಸೇಬಿಗಿಂತ ಟೊಮೆಟೊ ರೇಟೇ ಜಾಸ್ತಿ..! : ಕೆಲವೊಮ್ಮೆ ಬೆಲೆ ಇಲ್ಲದೆ ಕೆಜಿಗೆ 1 ರೂ. ಬೆಲೆ ಕಾರಣಕ್ಕೆ ಟೊಮೆಟೊವನ್ನು ರಸ್ತೆಗೆ ಸುರಿದು ರೈತರು ಕಣ್ಣೀರು ಹಾಕಿದ್ದ ಸಂದರ್ಭವೂ ಇತ್ತು.  ಅಂತಹದ್ದರಲ್ಲಿ ಹಿಮಾಚಲ ಪ್ರದೇಶದ ಮಾರುಕಟ್ಟೆಯಲ್ಲಿ ಸೇಬಿಗಿಂತ ಟೊಮೆಟೊ ಬೆಲೆಯೇ ಜಾಸ್ತಿಯಾಗಿದೆ. ಸಾಮಾನ್ಯವಾಗಿ ಟೊಮೆಟೊಗಿಂತ ಸೇಬು ಹಣ್ಣು ಹೆಚ್ಚಿನ ಬೆಲೆ ಮಾರಾಟವಾಗುತ್ತದೆ. ಆದರೆ ಈಗ ಪರಿಸ್ಥಿತಿ ಉಲ್ಟಾ ಆಗಿದೆ. ಮಾರುಕಟ್ಟೆಯಲ್ಲಿ ಸೇಬಿಗಿಂತ  ಟೊಮೆಟೊ ದುಬಾರಿಯಾಗಿದೆ. ಹಿಮಾಚಲ ಪ್ರದೇಶದಲ್ಲಿ ಟೊಮೆಟೊ ಕೆಜಿಗೆ 90 ರಿಂದ 95 ರೂ.ಗೆ ಮಾರಾಟವಾಗುತ್ತಿದ್ದು, ಸೇಬು ಕೆಜಿಗೆ 70 ರಿಂದ 80 ರೂ.ಗೆ ಮಾರಾಟವಾಗುತ್ತಿದೆ.

ದೆಹಲಿಯಲ್ಲಿ ಕೆ.ಜಿ ಟೊಮೆಟೋಗೆ 129 ರೂ., ಯುಪಿಯಲ್ಲಿ 150 ರೂ.! : ದೆಹಲಿಯ ಹಾಗೂ ಉತ್ತರಪ್ರದೇಶದಲ್ಲಿ ಟೊಮೆಟೋ ಬೆಲೆ ಗಗನಕ್ಕೇರಿದೆ. ಕಡಿಮೆ ದರದಲ್ಲಿ ಸಿಗುತ್ತಿದ್ದ ಟೊಮೆಟೋ ಕಳೆದ ಕೆಲ ದಿನಗಳಿಂದ 100ರ ಗಡಿ ದಾಟುತ್ತಿದೆ. ದೆಹಲಿಯಲ್ಲಿ ಕೆ.ಜಿ ಟೊಮೆಟೋ 129 ರೂ.ಗೆ ಮಾರಾಟವಾದರೆ, ಉತ್ತರಪ್ರದೇಶದಲ್ಲಿ 150 ರೂ.ಗೆ ಮಾರಾಟವಾಗುತ್ತಿದೆ. ಬೆಲೆ ಏರಿಕೆಯಿಂದ ಗ್ರಾಹಕರು ತಬ್ಬಿಬ್ಬಾಗಿದ್ದಾರೆ.

ಉತ್ತರ ಪ್ರದೇಶ ಮತ್ತು ಹರಿಯಾಣದಂತಹ ನೆರೆಯ ರಾಜ್ಯಗಳಿಂದ ಪೂರೈಕೆ ಕಡಿಮೆಯಾದ ಕಾರಣ ದೆಹಲಿಯಲ್ಲಿ ಕೆಲ ದಿನಗಳಿಂದ ಟೊಮೆಟೋ ಬೆಲೆ ದ್ವಿಗುಣಗೊಂಡಿದೆ ಎಂದು ಹೇಳಲಾಗುತ್ತಿದೆ. ಉತ್ತರಪ್ರದೇಶದಲ್ಲಿಯೂ  ಟೊಮೆಟೋ ದರದಲ್ಲಿ ಏರಿಕೆಯಾಗಿದ್ದು, ಕೆ.ಜಿಗೆ 150 ರೂ. ಆಗಿದೆ. ಇದರಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ.
ಹಾಸನಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಮೌಲ್ಯದ ಟೊಮೆಟೋ ಕಳ್ಳತನ:  ದೇಶದೆಲ್ಲೆಡೆ ಟೊಮೆಟೋ ಬೆಲೆ ಗಗನಕ್ಕೇರಿದೆ. ಈ ನಡುವೆ ಹಾಸನದಲ್ಲಿ ಲಕ್ಷಾಂತರ ರೂ. ಮೌಲ್ಯದ ಟೊಮೆಟೋ ಕಳ್ಳತನ ಮಾಡಿರುವ ಪ್ರಸಂಗ ನಡೆದಿದೆ.
ಬೇಲೂರು ತಾಲೂಕಿನ ಗೋಣಿ ಸೋಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ಮೌಲ್ಯದ ಟೊಮೆಟೋವನ್ನು ಚೋರರು ಎಗರಿಸಿದ್ದಾರೆ. ಗ್ರಾಮದ ಧರಣಿ ಎಂಬವರು ತಮ್ಮ ಜಮೀನಿನಲ್ಲಿ ಟೊಮೆಟೋ ಬೆಳೆದಿದ್ದರು. ಟೊಮೆಟೋ ಬೆಳೆಯಿಂದ ಉತ್ತಮ ಇಳುವರಿ ಬಂದಿದ್ದ ಹಿನ್ನೆಲೆ ಕಳೆದ ಮೂರು ದಿನದಿಂದ ಟೊಮೆಟೊ ಕೊಯ್ದು ಮಾರಾಟ ಮಾಡುತ್ತಿದ್ದರು. ಕಳೆದ ರಾತ್ರಿ ಜಮೀನಿಗೆ ನುಗ್ಗಿರುವ ಕಳ್ಳರು 50ರಿಂದ 60 ಬ್ಯಾಗ್‌ನಷ್ಟು ಟೊಮೆಟೋ ಕೊಯ್ದಿದ್ದು, ಅಂದಾಜು ಒಂದೂವರೆ ಲಕ್ಷಕ್ಕೂ ಹೆಚ್ಚು ಮೌಲ್ಯದ ಟೊಮೆಟೋ ಕಳ್ಳತನ ಮಾಡಿ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಕಳ್ಳತನದ ಕುರಿತು ಧರಣಿ ಹಳೇಬೀಡು ಪೊಲೀಸರಿಗೆ ದೂರು ನೀಡಿದ್ದಾರೆ. ಲಕ್ಷಾಂತರ ಮೌಲ್ಯದ ಟೊಮೆಟೋ ಕಳೆದುಕೊಂಡ ಧರಣಿ ಕಂಗಾಲಾಗಿದ್ದಾರೆ.

ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಟೊಮೆಟೊ ಮಾರಾಟ : ಇತ್ತ ಹಾವೇರಿ ಜಿಲ್ಲೆಯಲ್ಲಿ ಟೊಮೆಟೊ ಬೆಲೆ ದುಬಾರಿಯಾದ ಹಿನ್ನೆಲೆ ಕಳ್ಳತನವಾಗದಂತೆ ವ್ಯಾಪಾರಿಯೊಬ್ಬರು ಸಿಸಿಟಿವಿ ಕಣ್ಗಾವಲಿನಲ್ಲಿ ವ್ಯಾಪಾರ ನಡೆಸುತ್ತಿದ್ದಾರೆ.ಹಾನಗಲ್  ತಾಲೂಕಿನ ಅಕ್ಕಿಆಲೂರಿನಲ್ಲಿ ನಡೆದ ಸಂತೆಯಲ್ಲಿ, ಕೃಷ್ಣಪ್ಪ ಎಂಬವರು ಟೊಮೆಟೊ ಕಳ್ಳತನ ಆಗದಂತೆ ಎಚ್ಚರಿಕೆ ವಹಿಸಿ ಸಿಸಿಟಿವಿ ಕಾವಲಿನಲ್ಲಿ ವ್ಯಾಪಾರ ಮಾಡುತ್ತಿದ್ದಾರೆ. ಖರೀದಿ ಮಾಡುವ ನೆಪದಲ್ಲಿ ಜನ ಟೊಮೆಟೊ ಕದಿಯಬಾರದು ಎಂಬ ಕಾರಣಕ್ಕೆ ಸಿಸಿ ಕ್ಯಾಮೆರಾ ಹಾಕಿ ವ್ಯಾಪಾರ ನಡೆಸುತ್ತಿದ್ದಾರೆ.

ಕಳೆದ ಒಂದು ವಾರದಿಂದ ಟೊಮೆಟೊ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಂದು ಎರಡು ಟೊಮೆಟೊ ಕದ್ದರೂ ನಮಗೇ ನಷ್ಟ. ಸಾವಿರಾರು ರೂಪಾಯಿ ಕೊಟ್ಟು ಟೊಮೆಟೊ ಖರೀದಿಸಿದ್ದೇನೆ. ಹೀಗಾಗಿ ಸಿಸಿ ಕ್ಯಾಮೆರಾ ಹಾಕಿ ಟೊಮೆಟೊ ವ್ಯಾಪಾರ ಮಾಡುವ ಪರಿಸ್ಥಿತಿ ಬಂದಿದೆ ಎಂದು ವ್ಯಾಪಾರಸ್ಥ ಕೃಷ್ಣಪ್ಪ ಅವರು ಹೇಳಿದ್ದಾರೆ. ಇವರ ಸಿಸಿಟಿವಿ ಟೊಮೆಟೊ ವ್ಯಾಪಾರದಿಂದಾಗಿ ಟೊಮೆಟೊ ಖರೀದಿಗೆಂದು ಬಂದ ಗ್ರಾಹಕರು ಸಹ ಸಿಸಿ ಕ್ಯಾಮೆರಾ ನೋಡಿ ಶಾಕ್ ಆಗಿದ್ದಾರೆ.
ಇಡೀ ದೇಶದಲ್ಲಿ ಟೊಮೊಟೋ ಬೆಲೆ ಏರಿಕೆಗೆ ಕಾರಣ ಏನು ಎಂದು ಈಗ ಕೇಳುವುದಕ್ಕಿಂತಲೂ ಟೊಮೆಟೋ ಉಳಿಸಿಕೊಳ್ಳುವುದು  ಹೇಗೆ ಎಂಬುದೇ ಈಗ ತಲೆನೋವಾಗಿದೆ. ಸಕಾಲಕ್ಕೆ ಬಾರದ ಮಳೆ ಹಾಗೂ ಟೊಮೊಟೋ ಇಳುವರಿ ಕಡಿಮೆಯಾಗಿದ್ದೇ ಇಡೀ ದೇಶದಲ್ಲಿ ಟೊಮೊಟೋ ದರ ಏರಿಕೆಗೆ ಕಾರಣವಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

6 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

23 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago