ಪ್ರಮುಖ

#TomatoPrice | ಅಂದು ಬಂಗಾರದ ಬೆಲೆ : ಇಂದು ಟೊಮ್ಯಾಟೋ ಯಾರಿಗೂ ಬೇಡ…! | ಟೊಮೆಟೋ ಕೆಜಿಗೆ 4 ರೂ.ಗೆ ದರ ಇಳಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ಮೂರು ತಿಂಗಳ ಹಿಂದೆ ಟೊಮೆಟೋಗೆ (Tomato) ಬಂಗಾರದ ಬೆಲೆ ಬಂದಿತ್ತು. ಟೊಮೆಟೋ ಬೆಳೆದ ರೈತನಿಗೆ ಬಂಪರ್‌ ಹೊಡೆದಿತ್ತು. ಆದರೆ ತರಕಾರಿ ಬೆಲೆ ಶಾಶ್ವತ ಅಲ್ಲ. ಇದೀಗ ಟೊಮೆಟೋ ಬೆಳೆದ ರೈತನೇ ದುರಾದೃಷ್ಟವಂತ ಎನ್ನುವಂತ ಸ್ಥಿತಿಗೆ ಬಂದು ನಿಂತಿದೆ. ಟೊಮೆಟೋಗೆ ಬೆಲೆ ಬಂದರೆ ಬಂಪರ್, ಇಲ್ಲವಾದರೆ ಬೆಳೆ ಬೆಳೆದ ರೈತರ ಪಾಪರ್ ಎನ್ನುವಂತಾಗಿದೆ. ಸದ್ಯ ಒಂದು ತಿಂಗಳು ಕಳೆದರೂ ಕೂಡ ಟೊಮೆಟೋ ಬೆಲೆ ಮಾತ್ರ ಚೇತರಿಕೆ ಕಂಡಿಲ್ಲ.

Advertisement
Advertisement

ಒಂದೆಡೆ ಕೋಲಾರದಲ್ಲಿ ಮಳೆ ಇಲ್ಲದೆ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೆ ಇನ್ನೊಂದೆಡೆ ಕಷ್ಟಪಟ್ಟು ಬೋರ್‌ವೆಲ್‌ ನೀರು ತೆಗೆದು ಬೆಳೆದ ತೋಟಗಾರಿಕಾ ಬೆಳೆ ಕೂಡ ಬೆಲೆ ಇಲ್ಲದೆ ಕೈಕೊಟ್ಟಿದೆ. ಇದರಿಂದ ಕೋಲಾರ ಜಿಲ್ಲೆಯ ರೈತರ ಪರಿಸ್ಥಿತಿ ಮಾತ್ರ ಹೇಳತೀರದಾಗಿದೆ. ಒಂದು ಎಕರೆ ಟೊಮೆಟೋ ಬೆಳೆಯಲು ಸುಮಾರು ಒಂದೂವರೆ ಲಕ್ಷ ರೂಪಾಯಿ ರೈತರಿಗೆ ಖರ್ಚು ಬರುತ್ತದೆ. ಆದರೆ ಸದ್ಯ ಮಾರುಕಟ್ಟೆಯಲ್ಲಿರುವ ಬೆಲೆ ನೋಡಿದರೆ ರೈತರು ಮಾಡಿದ ಖರ್ಚಿನ ಅರ್ಧದಷ್ಟು ಹಣವೂ ರೈತರಿಗೆ ಸಿಗುತ್ತಿಲ್ಲ. ಹಾಗಾಗಿ ಬೆಳೆದ ಟೊಮೆಟೋವನ್ನು ಹೊಲದಲ್ಲೇ ಬಿಟ್ಟರೆ ರೈತ ನಷ್ಟದಿಂದ ತಪ್ಪಿಸಿಕೊಳ್ಳಬಹುದು ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಸರ್ಕಾರ ರೈತರ ನೆರವಿಗೆ ಬರಬೇಕು ಅನ್ನೋದು ರೈತರ ಮನವಿ.

ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಅತಿಹೆಚ್ಚು ಟೊಮೆಟೋ ಬೆಳೆಯುತ್ತಾರೆ. ಇಲ್ಲಿ ಬೆಳೆಯುವ ಟೊಮೆಟೋವನ್ನು ದೇಶದ ಬಹುತೇಕ ಎಲ್ಲಾ ರಾಜ್ಯಗಳಿಗೆ ಹಾಗೂ ಬಾಂಗ್ಲಾ, ಪಾಕಿಸ್ತಾನ, ದುಬೈ, ಸೇರಿ ಹೊರ ದೇಶಗಳಿಗೂ ರಫ್ತು ಮಾಡುತ್ತಿದ್ದರು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ನೋಡೋದಾದ್ರೆ ಈಗ ಎಲ್ಲಿಂದಲೂ ಕೂಡಾ ಟೊಮೆಟೋಗೆ ಡಿಮ್ಯಾಂಡ್ ಇಲ್ಲ. ಆದರೆ ರೈತರು ಕಳೆದ ಮೂರು ತಿಂಗಳ ಹಿಂದೆ ಟೊಮೆಟೋಗೆ ಬಂಗಾರದ ಬೆಲೆ ಬಂದಿದ್ದ ಕಾರಣದಿಂದ ಒಳ್ಳೆಯ ಬೆಲೆಯ ನಿರೀಕ್ಷೆಯಲ್ಲಿ ಬಹುತೇಕ ರೈತರು ಟೊಮೆಟೋ ಬೆಳೆದಿದ್ದಾರೆ. ಪರಿಣಾಮ ಕೋಲಾರ ಎಪಿಎಂಸಿ ಮಾರುಕಟ್ಟೆಗೆ ಬೇಡಿಕೆಗಿಂತ ಅತಿ ಹೆಚ್ಚಿನ ಟೊಮೆಟೋ ಪೂರೈಕೆಯಾಗುತ್ತಿದೆ. ಈ ಕಾರಣದಿಂದಲೇ ಟೊಮೆಟೋ ಇಂದು ಬೆಲೆ ಕಳೆದುಕೊಂಡಿದೆ. ಕೆಜಿ ಟೊಮೆಟೋ 3 ರಿಂದ 4 ರೂಪಾಯಿಗೆ ಬಿಕರಿಯಾಗುತ್ತಿದೆ. ಅಂದರೆ ಹದಿನೈದು ಕೆಜಿಯ ಒಂದು ಬಾಕ್ಸ್ ಟೊಮೆಟೋ ಸರಿ ಸುಮಾರು 50 ರಿಂದ 80 ರೂಪಾಯಿಗೆ ಮಾರಾಟವಾಗುತ್ತಿದೆ. ಇನ್ನು ಕೆಲವು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ವ್ಯಾಪಾರಸ್ಥರು ಹೇಳುತ್ತಾರೆ.

ಒಟ್ಟಿನಲ್ಲಿ ಟೊಮೆಟೋ ಬೆಳೆಯುವ ರೈತರ ಪರಿಸ್ಥಿತಿ ಹಾಗೂ ಟೊಮೆಟೋ ಬೆಲೆಯನ್ನು ನೋಡಿದ್ರೆ ಇದು ಟೊಮೆಟೋ ಹಾಗೂ ರೈತರ ನಡುವಿನ ಜೂಜಾಟದಂತೆ ಭಾಸವಾಗುತ್ತಿದೆ. ಟೊಮೆಟೋ ಬೆಳೆದ ರೈತರಿಗೆ ಯಾವಾಗಲೂ ಬೆಲೆ ಸಿಗೋದಿಲ್ಲ. ರೈತರಿಗೆ ಅದೃಷ್ಟ ಬಂದಾಗ ಮಾತ್ರವೇ ಅವರಿಗೆ ಬೆಲೆ ಸಿಗೋದು ಅನ್ನೋದು ಮಾತ್ರ ಖಚಿತ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

18 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

19 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

22 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

22 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

22 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

22 hours ago