ಸುದ್ದಿಗಳು

#PriceHike| ಗಗನಕ್ಕೇರಿದ ಟೊಮೆಟೋ ಬೆಲೆ | 2 ಟನ್ ಟೊಮೆಟೊವಿದ್ದ ವಾಹನವನ್ನೇ ಎಗರಿಸಿದ ಖದೀಮರು…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಟೊಮೆಟೋ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಕೊಂಚವೂ ಇಳಿಯುವ ಲಕ್ಷಣ ಗೋಚರಿಸುತ್ತಿಲ್ಲ. ಈ ಮಧ್ಯೆ ಟೊಮೇಟೋವನ್ನು ಕಳ್ಳಕಾಕರರಿಂದ ಕಾಪಾಡುವುದೇ ದೊಡ್ಡ ಸವಾಲಾಗಿದೆ. ಇತ್ತ ಜನಸಾಮಾನ್ಯರು  ಟೊಮೆಟೊ #Tomato ಖರೀದಿ ಮಾಡೋದೇ ಅಸಾಧ್ಯವಾಗಿದೆ. ಅಧಿಕ ಧಾರಣೆ ಇರುವ  ವೇಳೆ 2 ಟನ್ ಟೊಮೆಟೊ ಹೊತ್ತಿದ್ದ ಬುಲೆರೋ ವಾಹನವನ್ನೇ ಖದೀಮರು ಎಗರಿಸಿರುವ ಘಟನೆ ನಡೆದಿದೆ.

Advertisement
Advertisement
ಬೆಂಗಳೂರಿನ #Bengaluru ಆರ್‌ಎಂಸಿ ಯಾರ್ಡ್‌ನಲ್ಲಿ ಈ ಘಟನೆ ನಡೆದಿದೆ. ರೈತರು ಚಿತ್ರದುರ್ಗದಿಂದ ಆರ್‌ಎಂಸಿ ಯಾರ್ಡ್‌ಗೆ ಟೊಮೆಟೊ ಲೋಡ್ ಅನ್ನು ತಂದಿದ್ದರು. ರೈತರು ಯಾವಾಗ ವಾಹನವನ್ನು ನಿಲ್ಲಿಸಿ, ಟೀ ಕುಡಿಯಲು ಹೋಗಿದ್ದರೋ ಆಗ ಬಂದ ಕಳ್ಳರು ವಾಹನ ಸಮೇತವಾಗಿ 2 ಟನ್ ಟೊಮೆಟೊ ಹೊತ್ತೊಯ್ದಿದ್ದಾರೆ.

250 ಕ್ಕೂ ಹೆಚ್ಚು ಟೊಮೆಟೊ ಟ್ರೇ ಇದ್ದ ಬುಲೆರೋ ವಾಹನವನ್ನು ಕಾರಿನಲ್ಲಿ ಬಂದಿದ್ದ ಮೂವರು ಹೈಜಾಕ್ ಮಾಡಿದ್ದಾರೆ. ಟೊಮೆಟೊ ತುಂಬಿದ್ದ ಗಾಡಿ ಫಾಲೋ ಮಾಡಿ ಬಂದ ಆರೋಪಿಗಳು, ಆರ್‌ಎಂಸಿ ಯಾರ್ಡ್ ಬಳಿ ಅಡ್ಡ ಹಾಕಿ ರೈತನಿಗೆ ಅವಾಜ್ ಹಾಕಿದ್ದಾರೆ. ಗಾಡಿ ಟಚ್ ಆಗಿದೆ ಎಂದು ನಾಟಕ ಮಾಡಿ ಡ್ರೈವರ್‌ಗೆ ಥಳಿಸಿದ್ದು, ನಂತರ ರೈತನ ಮೇಲೂ ಹಲ್ಲೆ ಮಾಡಿ ಹಣ ಕೊಡು ಎಂದು ಅವಾಜ್ ಹಾಕಿದ್ದಾರೆ.

ಹಣ ಇಲ್ಲ ಎಂದಾಗ ಮೊಬೈಲ್‌ನಲ್ಲಿದ್ದ ಹಣ ಟ್ರಾನ್ಸ್ಫರ್ ಮಾಡಿಕೊಂಡು ಟೊಮೆಟೊ ಗಾಡಿಯಲ್ಲಿ ರೈತನನ್ನು ಕೂರಿಸಿಕೊಂಡು ಹೈಜಾಕ್ ಮಾಡಿದ್ದಾರೆ. ಚಿಕ್ಕಜಾಲ ಬಳಿ ಡ್ರೈವರ್‌ನ ಬಿಟ್ಟು ಟೊಮೆಟೊ ತುಂಬಿದ್ದ ವಾಹನ ಸಮೇತ ಎಸ್ಕೇಪ್ ಆಗಿದ್ದಾರೆ. ಸದ್ಯ ಘಟನೆ ಸಂಬಂಧ ಆರ್‌ಎಂಸಿ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

8 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

9 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

9 hours ago

ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…

9 hours ago

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…

10 hours ago

ವಿದ್ಯುತ್ ಮೇಲಿನ ಬಡ್ಡಿ ಮನ್ನಾ ಮಾಡಲು ನಿರ್ಧಾರ | ಸಂಪುಟ ಅನುಮೋದನೆ

ವಿದ್ಯುತ್ ಸರಬರಾಜು ಕಂಪನಿಗಳಿಗೆ  ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಪಾವತಿಸಬೇಕಾಗಿದ್ದ …

10 hours ago