Advertisement
ಸುದ್ದಿಗಳು

#PriceHike| ಗಗನಕ್ಕೇರಿದ ಟೊಮೆಟೋ ಬೆಲೆ | 2 ಟನ್ ಟೊಮೆಟೊವಿದ್ದ ವಾಹನವನ್ನೇ ಎಗರಿಸಿದ ಖದೀಮರು…! |

Share

ಟೊಮೆಟೋ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಕೊಂಚವೂ ಇಳಿಯುವ ಲಕ್ಷಣ ಗೋಚರಿಸುತ್ತಿಲ್ಲ. ಈ ಮಧ್ಯೆ ಟೊಮೇಟೋವನ್ನು ಕಳ್ಳಕಾಕರರಿಂದ ಕಾಪಾಡುವುದೇ ದೊಡ್ಡ ಸವಾಲಾಗಿದೆ. ಇತ್ತ ಜನಸಾಮಾನ್ಯರು  ಟೊಮೆಟೊ #Tomato ಖರೀದಿ ಮಾಡೋದೇ ಅಸಾಧ್ಯವಾಗಿದೆ. ಅಧಿಕ ಧಾರಣೆ ಇರುವ  ವೇಳೆ 2 ಟನ್ ಟೊಮೆಟೊ ಹೊತ್ತಿದ್ದ ಬುಲೆರೋ ವಾಹನವನ್ನೇ ಖದೀಮರು ಎಗರಿಸಿರುವ ಘಟನೆ ನಡೆದಿದೆ.

Advertisement
Advertisement
ಬೆಂಗಳೂರಿನ #Bengaluru ಆರ್‌ಎಂಸಿ ಯಾರ್ಡ್‌ನಲ್ಲಿ ಈ ಘಟನೆ ನಡೆದಿದೆ. ರೈತರು ಚಿತ್ರದುರ್ಗದಿಂದ ಆರ್‌ಎಂಸಿ ಯಾರ್ಡ್‌ಗೆ ಟೊಮೆಟೊ ಲೋಡ್ ಅನ್ನು ತಂದಿದ್ದರು. ರೈತರು ಯಾವಾಗ ವಾಹನವನ್ನು ನಿಲ್ಲಿಸಿ, ಟೀ ಕುಡಿಯಲು ಹೋಗಿದ್ದರೋ ಆಗ ಬಂದ ಕಳ್ಳರು ವಾಹನ ಸಮೇತವಾಗಿ 2 ಟನ್ ಟೊಮೆಟೊ ಹೊತ್ತೊಯ್ದಿದ್ದಾರೆ.

250 ಕ್ಕೂ ಹೆಚ್ಚು ಟೊಮೆಟೊ ಟ್ರೇ ಇದ್ದ ಬುಲೆರೋ ವಾಹನವನ್ನು ಕಾರಿನಲ್ಲಿ ಬಂದಿದ್ದ ಮೂವರು ಹೈಜಾಕ್ ಮಾಡಿದ್ದಾರೆ. ಟೊಮೆಟೊ ತುಂಬಿದ್ದ ಗಾಡಿ ಫಾಲೋ ಮಾಡಿ ಬಂದ ಆರೋಪಿಗಳು, ಆರ್‌ಎಂಸಿ ಯಾರ್ಡ್ ಬಳಿ ಅಡ್ಡ ಹಾಕಿ ರೈತನಿಗೆ ಅವಾಜ್ ಹಾಕಿದ್ದಾರೆ. ಗಾಡಿ ಟಚ್ ಆಗಿದೆ ಎಂದು ನಾಟಕ ಮಾಡಿ ಡ್ರೈವರ್‌ಗೆ ಥಳಿಸಿದ್ದು, ನಂತರ ರೈತನ ಮೇಲೂ ಹಲ್ಲೆ ಮಾಡಿ ಹಣ ಕೊಡು ಎಂದು ಅವಾಜ್ ಹಾಕಿದ್ದಾರೆ.

Advertisement
ಹಣ ಇಲ್ಲ ಎಂದಾಗ ಮೊಬೈಲ್‌ನಲ್ಲಿದ್ದ ಹಣ ಟ್ರಾನ್ಸ್ಫರ್ ಮಾಡಿಕೊಂಡು ಟೊಮೆಟೊ ಗಾಡಿಯಲ್ಲಿ ರೈತನನ್ನು ಕೂರಿಸಿಕೊಂಡು ಹೈಜಾಕ್ ಮಾಡಿದ್ದಾರೆ. ಚಿಕ್ಕಜಾಲ ಬಳಿ ಡ್ರೈವರ್‌ನ ಬಿಟ್ಟು ಟೊಮೆಟೊ ತುಂಬಿದ್ದ ವಾಹನ ಸಮೇತ ಎಸ್ಕೇಪ್ ಆಗಿದ್ದಾರೆ. ಸದ್ಯ ಘಟನೆ ಸಂಬಂಧ ಆರ್‌ಎಂಸಿ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

13 hours ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

14 hours ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

21 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

22 hours ago