Advertisement
ಸುದ್ದಿಗಳು

#PriceHike| ಗಗನಕ್ಕೇರಿದ ಟೊಮೆಟೋ ಬೆಲೆ | 2 ಟನ್ ಟೊಮೆಟೊವಿದ್ದ ವಾಹನವನ್ನೇ ಎಗರಿಸಿದ ಖದೀಮರು…! |

Share

ಟೊಮೆಟೋ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಕೊಂಚವೂ ಇಳಿಯುವ ಲಕ್ಷಣ ಗೋಚರಿಸುತ್ತಿಲ್ಲ. ಈ ಮಧ್ಯೆ ಟೊಮೇಟೋವನ್ನು ಕಳ್ಳಕಾಕರರಿಂದ ಕಾಪಾಡುವುದೇ ದೊಡ್ಡ ಸವಾಲಾಗಿದೆ. ಇತ್ತ ಜನಸಾಮಾನ್ಯರು  ಟೊಮೆಟೊ #Tomato ಖರೀದಿ ಮಾಡೋದೇ ಅಸಾಧ್ಯವಾಗಿದೆ. ಅಧಿಕ ಧಾರಣೆ ಇರುವ  ವೇಳೆ 2 ಟನ್ ಟೊಮೆಟೊ ಹೊತ್ತಿದ್ದ ಬುಲೆರೋ ವಾಹನವನ್ನೇ ಖದೀಮರು ಎಗರಿಸಿರುವ ಘಟನೆ ನಡೆದಿದೆ.

ಬೆಂಗಳೂರಿನ #Bengaluru ಆರ್‌ಎಂಸಿ ಯಾರ್ಡ್‌ನಲ್ಲಿ ಈ ಘಟನೆ ನಡೆದಿದೆ. ರೈತರು ಚಿತ್ರದುರ್ಗದಿಂದ ಆರ್‌ಎಂಸಿ ಯಾರ್ಡ್‌ಗೆ ಟೊಮೆಟೊ ಲೋಡ್ ಅನ್ನು ತಂದಿದ್ದರು. ರೈತರು ಯಾವಾಗ ವಾಹನವನ್ನು ನಿಲ್ಲಿಸಿ, ಟೀ ಕುಡಿಯಲು ಹೋಗಿದ್ದರೋ ಆಗ ಬಂದ ಕಳ್ಳರು ವಾಹನ ಸಮೇತವಾಗಿ 2 ಟನ್ ಟೊಮೆಟೊ ಹೊತ್ತೊಯ್ದಿದ್ದಾರೆ.

250 ಕ್ಕೂ ಹೆಚ್ಚು ಟೊಮೆಟೊ ಟ್ರೇ ಇದ್ದ ಬುಲೆರೋ ವಾಹನವನ್ನು ಕಾರಿನಲ್ಲಿ ಬಂದಿದ್ದ ಮೂವರು ಹೈಜಾಕ್ ಮಾಡಿದ್ದಾರೆ. ಟೊಮೆಟೊ ತುಂಬಿದ್ದ ಗಾಡಿ ಫಾಲೋ ಮಾಡಿ ಬಂದ ಆರೋಪಿಗಳು, ಆರ್‌ಎಂಸಿ ಯಾರ್ಡ್ ಬಳಿ ಅಡ್ಡ ಹಾಕಿ ರೈತನಿಗೆ ಅವಾಜ್ ಹಾಕಿದ್ದಾರೆ. ಗಾಡಿ ಟಚ್ ಆಗಿದೆ ಎಂದು ನಾಟಕ ಮಾಡಿ ಡ್ರೈವರ್‌ಗೆ ಥಳಿಸಿದ್ದು, ನಂತರ ರೈತನ ಮೇಲೂ ಹಲ್ಲೆ ಮಾಡಿ ಹಣ ಕೊಡು ಎಂದು ಅವಾಜ್ ಹಾಕಿದ್ದಾರೆ.

ಹಣ ಇಲ್ಲ ಎಂದಾಗ ಮೊಬೈಲ್‌ನಲ್ಲಿದ್ದ ಹಣ ಟ್ರಾನ್ಸ್ಫರ್ ಮಾಡಿಕೊಂಡು ಟೊಮೆಟೊ ಗಾಡಿಯಲ್ಲಿ ರೈತನನ್ನು ಕೂರಿಸಿಕೊಂಡು ಹೈಜಾಕ್ ಮಾಡಿದ್ದಾರೆ. ಚಿಕ್ಕಜಾಲ ಬಳಿ ಡ್ರೈವರ್‌ನ ಬಿಟ್ಟು ಟೊಮೆಟೊ ತುಂಬಿದ್ದ ವಾಹನ ಸಮೇತ ಎಸ್ಕೇಪ್ ಆಗಿದ್ದಾರೆ. ಸದ್ಯ ಘಟನೆ ಸಂಬಂಧ ಆರ್‌ಎಂಸಿ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

1 minute ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

10 hours ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

11 hours ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

15 hours ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

16 hours ago

ಆರೋಪದ ಆಚೆ ನಿಂತು ಒಮ್ಮೆ ಯೋಚಿಸಿದ್ದೀರಾ..?

ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…

19 hours ago