Advertisement
ಸುದ್ದಿಗಳು

#PriceHike| ಗಗನಕ್ಕೇರಿದ ಟೊಮೆಟೋ ಬೆಲೆ | 2 ಟನ್ ಟೊಮೆಟೊವಿದ್ದ ವಾಹನವನ್ನೇ ಎಗರಿಸಿದ ಖದೀಮರು…! |

Share

ಟೊಮೆಟೋ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಕೊಂಚವೂ ಇಳಿಯುವ ಲಕ್ಷಣ ಗೋಚರಿಸುತ್ತಿಲ್ಲ. ಈ ಮಧ್ಯೆ ಟೊಮೇಟೋವನ್ನು ಕಳ್ಳಕಾಕರರಿಂದ ಕಾಪಾಡುವುದೇ ದೊಡ್ಡ ಸವಾಲಾಗಿದೆ. ಇತ್ತ ಜನಸಾಮಾನ್ಯರು  ಟೊಮೆಟೊ #Tomato ಖರೀದಿ ಮಾಡೋದೇ ಅಸಾಧ್ಯವಾಗಿದೆ. ಅಧಿಕ ಧಾರಣೆ ಇರುವ  ವೇಳೆ 2 ಟನ್ ಟೊಮೆಟೊ ಹೊತ್ತಿದ್ದ ಬುಲೆರೋ ವಾಹನವನ್ನೇ ಖದೀಮರು ಎಗರಿಸಿರುವ ಘಟನೆ ನಡೆದಿದೆ.

ಬೆಂಗಳೂರಿನ #Bengaluru ಆರ್‌ಎಂಸಿ ಯಾರ್ಡ್‌ನಲ್ಲಿ ಈ ಘಟನೆ ನಡೆದಿದೆ. ರೈತರು ಚಿತ್ರದುರ್ಗದಿಂದ ಆರ್‌ಎಂಸಿ ಯಾರ್ಡ್‌ಗೆ ಟೊಮೆಟೊ ಲೋಡ್ ಅನ್ನು ತಂದಿದ್ದರು. ರೈತರು ಯಾವಾಗ ವಾಹನವನ್ನು ನಿಲ್ಲಿಸಿ, ಟೀ ಕುಡಿಯಲು ಹೋಗಿದ್ದರೋ ಆಗ ಬಂದ ಕಳ್ಳರು ವಾಹನ ಸಮೇತವಾಗಿ 2 ಟನ್ ಟೊಮೆಟೊ ಹೊತ್ತೊಯ್ದಿದ್ದಾರೆ.

250 ಕ್ಕೂ ಹೆಚ್ಚು ಟೊಮೆಟೊ ಟ್ರೇ ಇದ್ದ ಬುಲೆರೋ ವಾಹನವನ್ನು ಕಾರಿನಲ್ಲಿ ಬಂದಿದ್ದ ಮೂವರು ಹೈಜಾಕ್ ಮಾಡಿದ್ದಾರೆ. ಟೊಮೆಟೊ ತುಂಬಿದ್ದ ಗಾಡಿ ಫಾಲೋ ಮಾಡಿ ಬಂದ ಆರೋಪಿಗಳು, ಆರ್‌ಎಂಸಿ ಯಾರ್ಡ್ ಬಳಿ ಅಡ್ಡ ಹಾಕಿ ರೈತನಿಗೆ ಅವಾಜ್ ಹಾಕಿದ್ದಾರೆ. ಗಾಡಿ ಟಚ್ ಆಗಿದೆ ಎಂದು ನಾಟಕ ಮಾಡಿ ಡ್ರೈವರ್‌ಗೆ ಥಳಿಸಿದ್ದು, ನಂತರ ರೈತನ ಮೇಲೂ ಹಲ್ಲೆ ಮಾಡಿ ಹಣ ಕೊಡು ಎಂದು ಅವಾಜ್ ಹಾಕಿದ್ದಾರೆ.

ಹಣ ಇಲ್ಲ ಎಂದಾಗ ಮೊಬೈಲ್‌ನಲ್ಲಿದ್ದ ಹಣ ಟ್ರಾನ್ಸ್ಫರ್ ಮಾಡಿಕೊಂಡು ಟೊಮೆಟೊ ಗಾಡಿಯಲ್ಲಿ ರೈತನನ್ನು ಕೂರಿಸಿಕೊಂಡು ಹೈಜಾಕ್ ಮಾಡಿದ್ದಾರೆ. ಚಿಕ್ಕಜಾಲ ಬಳಿ ಡ್ರೈವರ್‌ನ ಬಿಟ್ಟು ಟೊಮೆಟೊ ತುಂಬಿದ್ದ ವಾಹನ ಸಮೇತ ಎಸ್ಕೇಪ್ ಆಗಿದ್ದಾರೆ. ಸದ್ಯ ಘಟನೆ ಸಂಬಂಧ ಆರ್‌ಎಂಸಿ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ದುರ್ಬಲ – ದೇಶದಲ್ಲಿ 40% ಮಳೆ ಕೊರತೆ, ಕರಾವಳಿ ಕರ್ನಾಟಕಕ್ಕೆ ಜೂನ್ 25ರ ಬಳಿಕ ಮಳೆ ನಿರೀಕ್ಷೆ

ದೇಶದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದು, ಜೂನ್ 18ರವರೆಗೆ ಮಳೆ ಕೊರತೆ ಶೇ.40ಕ್ಕೆ ಏರಿಕೆಯಾಗಿದೆ.…

59 minutes ago

ಇ-ವೇ ಬಿಲ್ ಹಾಗೂ ಸಾರಿಗೆ ದಾಖಲೆಗಳ ಕೊರತೆ – 33.6 ಟನ್ ಅಡಿಕೆ ಜಪ್ತಿ ಕ್ರಮವನ್ನು ಎತ್ತಿಹಿಡಿದ ನ್ಯಾಯಾಲಯ

ಇ-ವೇ ಬಿಲ್ ಮತ್ತು ಸಾರಿಗೆ ದಾಖಲೆಗಳ ಕೊರತೆಯಿಂದ ₹2.22 ಕೋಟಿ ಮೌಲ್ಯದ 33.6…

1 hour ago

PM-KISAN 23ನೇ ಕಂತು ಬಿಡುಗಡೆಗೆ ಸಿದ್ಧತೆ – ಕರ್ನಾಟಕದ 41.54 ಲಕ್ಷ ರೈತರಿಗೆ ₹830.83 ಕೋಟಿ ಜಮೆ

PM-KISAN ಯೋಜನೆಯ 23ನೇ ಕಂತಿನ ಹಣವನ್ನು ಜೂನ್ 20ರಂದು ರೈತರ ಖಾತೆಗಳಿಗೆ ಜಮೆ…

2 hours ago

ನಾಳೆ ನೀಟ್ ಪರೀಕ್ಷೆ- ದ.ಕ. ಜಿಲ್ಲೆಯಲ್ಲಿ 5570 ಅಭ್ಯರ್ಥಿಗಳು – ದ.ಕ. ಜಿಲ್ಲೆಯಲ್ಲಿ ಬಿಗು ಭದ್ರತೆ, 12 ಕೇಂದ್ರಗಳಲ್ಲಿ ಪರೀಕ್ಷೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5,570 ಅಭ್ಯರ್ಥಿಗಳು ನೀಟ್ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಮಂಗಳೂರಿನ 12…

2 hours ago

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…

12 hours ago

ಕೇರಳದಲ್ಲಿ ಕೊಬ್ಬರಿ ಬೆಲೆ MSP ಗಿಂತಲೂ ಕಡಿಮೆ – ₹130 ಕನಿಷ್ಠ ಬೆಂಬಲ ಬೆಲೆಗೆ ರೈತರ ಆಗ್ರಹ

ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…

13 hours ago