MIRROR FOCUS

ಮತ್ತೆ ಗಗನಕ್ಕೇರುವತ್ತ ಟೊಮ್ಯಾಟೋ ಬೆಲೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ವರ್ಷ ಟೊಮೇಟೊ ಬೆಲೆ(Tomato price) ಸಾಕಷ್ಟು ಏರಿಕೆಯಾಗಿ ಟೊಮೆಟೊ ರೈತರು ಉತ್ತಮ ಆದಾಯ ಗಳಿಸಿದ್ದರು, ಕೆಲ ರೈತರಂತು ಲಕ್ಷಾಧಿಪತಿಗಳಾಗಿದ್ದರು. ಆ ವೇಳೆ ಟೊಮೇಟೊ ಕಳ್ಳತನದ ಘಟನೆಗಳೂ ನಡೆದಿದ್ದವು. ಸದ್ಯಕ್ಕೆ ಮತ್ತೆ ಅಂತಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಏಕೆಂದರೆ ಟೊಮೆಟೊ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ.

Advertisement
Advertisement

ಕೋಲಾರ ಎಪಿಎಂಸಿ ಟೊಮೆಟೊ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ ಒಂದು ವಾರದ ಹಿಂದೆ 15 ಕೆಜಿ ತೂಕದ ಒಂದು ಬಾಕ್ಸ್ ಟೊಮೆಟೊ ಬೆಲೆ 1000 ಗಡಿ ದಾಟಿತ್ತು. ಆದರೆ ಮೊನ್ನೆಯಿಂದ 15 ಕೆಜಿ ತೂಕದ ಒಂದು ಬಾಕ್ಸ್ ಬೆಲೆ 500 ರೂಪಾಯಿಗೆ ಕುಸಿತಗೊಂಡಿದ್ದು ರೈತರಿಗೆ ಭಾರೀ‌ ನಿರಾಸೆ ಉಂಟಾಗಿತ್ತು. ಇದೀಗ ಟೊಮೊಟೊ ಬೆಲೆಯಲ್ಲಿ ಮತ್ತೆ ಚೇತರಿಕೆ ಕಂಡಿದ್ದು, ಗರಿಷ್ಠ 600 ರೂಪಾಯಿ ವರೆಗೆ ಟೊಮೆಟೊ ಮಾರಾಟವಾಗುತ್ತಿದೆ. ಇನ್ನು ಒಂದು ವಾರದ ಕಾಲ ಇದೇ ಬೆಲೆ ಮುಂದುವರೆಯಲಿದ್ದು ಮತ್ತೆ ಬೆಲೆ ಏರಿಕೆ ಆಗುವ ಸಾಧ್ಯತೆಗಳಿದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಮಳೆಯ ಕಾರಣದಿಂದ  ತರಕಾರಿ ಬೆಳೆಯ ಮೇಲೆ ಹೊಡೆತ ಬಿದ್ದಿದೆ, ಹೀಗಾಗಿ ಟೊಮೇಟೊ ಹೊರತಾಗಿ ಎಲ್ಲ ಬಗೆಯ ತರಕಾರಿಗಳ ಬೆಲೆಯೂ ಏರಿಕೆಯಾಗಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್ ಗಢ, ದೆಹಲಿ, ಜಾರ್ಖಂಡ್ ಮತ್ತಿತರ ರಾಜ್ಯಗಳಿಗೆ ಟೊಮೇಟೊ ರಫ್ತು ಮಾಡಲಾಗುತ್ತಿದೆ. ರಫ್ತು ಮಾಡುವ ರಾಜ್ಯಗಳಲ್ಲಿ ಟೊಮೇಟೊ ಇಳುವರಿ ಕಡಿಮೆಯಾದ್ದರಿಂದ ಇಲ್ಲಿ ಟೊಮೇಟೊಗೆ ಬೇಡಿಕೆ ಬಂದಿದೆ ಎಂದು ತಜ್ಞರು ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

2 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

3 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

3 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

3 hours ago

ಇದೆಲ್ಲಾ ಹೇಗಾಗ್ತದೆ? ಇದು ನಮ್ಗೆಲ್ಲಿ ಗೊತ್ತಾಗ್ತದೆ!?

ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…

3 hours ago