MIRROR FOCUS

ಮತ್ತೆ ಗಗನಕ್ಕೇರುವತ್ತ ಟೊಮ್ಯಾಟೋ ಬೆಲೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ವರ್ಷ ಟೊಮೇಟೊ ಬೆಲೆ(Tomato price) ಸಾಕಷ್ಟು ಏರಿಕೆಯಾಗಿ ಟೊಮೆಟೊ ರೈತರು ಉತ್ತಮ ಆದಾಯ ಗಳಿಸಿದ್ದರು, ಕೆಲ ರೈತರಂತು ಲಕ್ಷಾಧಿಪತಿಗಳಾಗಿದ್ದರು. ಆ ವೇಳೆ ಟೊಮೇಟೊ ಕಳ್ಳತನದ ಘಟನೆಗಳೂ ನಡೆದಿದ್ದವು. ಸದ್ಯಕ್ಕೆ ಮತ್ತೆ ಅಂತಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಏಕೆಂದರೆ ಟೊಮೆಟೊ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ.

Advertisement

ಕೋಲಾರ ಎಪಿಎಂಸಿ ಟೊಮೆಟೊ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ ಒಂದು ವಾರದ ಹಿಂದೆ 15 ಕೆಜಿ ತೂಕದ ಒಂದು ಬಾಕ್ಸ್ ಟೊಮೆಟೊ ಬೆಲೆ 1000 ಗಡಿ ದಾಟಿತ್ತು. ಆದರೆ ಮೊನ್ನೆಯಿಂದ 15 ಕೆಜಿ ತೂಕದ ಒಂದು ಬಾಕ್ಸ್ ಬೆಲೆ 500 ರೂಪಾಯಿಗೆ ಕುಸಿತಗೊಂಡಿದ್ದು ರೈತರಿಗೆ ಭಾರೀ‌ ನಿರಾಸೆ ಉಂಟಾಗಿತ್ತು. ಇದೀಗ ಟೊಮೊಟೊ ಬೆಲೆಯಲ್ಲಿ ಮತ್ತೆ ಚೇತರಿಕೆ ಕಂಡಿದ್ದು, ಗರಿಷ್ಠ 600 ರೂಪಾಯಿ ವರೆಗೆ ಟೊಮೆಟೊ ಮಾರಾಟವಾಗುತ್ತಿದೆ. ಇನ್ನು ಒಂದು ವಾರದ ಕಾಲ ಇದೇ ಬೆಲೆ ಮುಂದುವರೆಯಲಿದ್ದು ಮತ್ತೆ ಬೆಲೆ ಏರಿಕೆ ಆಗುವ ಸಾಧ್ಯತೆಗಳಿದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಮಳೆಯ ಕಾರಣದಿಂದ  ತರಕಾರಿ ಬೆಳೆಯ ಮೇಲೆ ಹೊಡೆತ ಬಿದ್ದಿದೆ, ಹೀಗಾಗಿ ಟೊಮೇಟೊ ಹೊರತಾಗಿ ಎಲ್ಲ ಬಗೆಯ ತರಕಾರಿಗಳ ಬೆಲೆಯೂ ಏರಿಕೆಯಾಗಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್ ಗಢ, ದೆಹಲಿ, ಜಾರ್ಖಂಡ್ ಮತ್ತಿತರ ರಾಜ್ಯಗಳಿಗೆ ಟೊಮೇಟೊ ರಫ್ತು ಮಾಡಲಾಗುತ್ತಿದೆ. ರಫ್ತು ಮಾಡುವ ರಾಜ್ಯಗಳಲ್ಲಿ ಟೊಮೇಟೊ ಇಳುವರಿ ಕಡಿಮೆಯಾದ್ದರಿಂದ ಇಲ್ಲಿ ಟೊಮೇಟೊಗೆ ಬೇಡಿಕೆ ಬಂದಿದೆ ಎಂದು ತಜ್ಞರು ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

ಹವಾಮಾನ ಬದಲಾವಣೆಯಿಂದ  ಹಾಗೂ ತಾಪಮಾನದ ದಿಢೀರ್‌ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…

3 hours ago

ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ

ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…

3 hours ago

ಹೊಸರುಚಿ | ಹಲಸಿನ ಬೀಜದ ಪರೋಟ

ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

4 hours ago

ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!

ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…

4 hours ago

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

1 day ago