Advertisement
MIRROR FOCUS

ಮತ್ತೆ ಗಗನಕ್ಕೇರುವತ್ತ ಟೊಮ್ಯಾಟೋ ಬೆಲೆ |

Share

ಕಳೆದ ವರ್ಷ ಟೊಮೇಟೊ ಬೆಲೆ(Tomato price) ಸಾಕಷ್ಟು ಏರಿಕೆಯಾಗಿ ಟೊಮೆಟೊ ರೈತರು ಉತ್ತಮ ಆದಾಯ ಗಳಿಸಿದ್ದರು, ಕೆಲ ರೈತರಂತು ಲಕ್ಷಾಧಿಪತಿಗಳಾಗಿದ್ದರು. ಆ ವೇಳೆ ಟೊಮೇಟೊ ಕಳ್ಳತನದ ಘಟನೆಗಳೂ ನಡೆದಿದ್ದವು. ಸದ್ಯಕ್ಕೆ ಮತ್ತೆ ಅಂತಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಏಕೆಂದರೆ ಟೊಮೆಟೊ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ.

ಕೋಲಾರ ಎಪಿಎಂಸಿ ಟೊಮೆಟೊ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ ಒಂದು ವಾರದ ಹಿಂದೆ 15 ಕೆಜಿ ತೂಕದ ಒಂದು ಬಾಕ್ಸ್ ಟೊಮೆಟೊ ಬೆಲೆ 1000 ಗಡಿ ದಾಟಿತ್ತು. ಆದರೆ ಮೊನ್ನೆಯಿಂದ 15 ಕೆಜಿ ತೂಕದ ಒಂದು ಬಾಕ್ಸ್ ಬೆಲೆ 500 ರೂಪಾಯಿಗೆ ಕುಸಿತಗೊಂಡಿದ್ದು ರೈತರಿಗೆ ಭಾರೀ‌ ನಿರಾಸೆ ಉಂಟಾಗಿತ್ತು. ಇದೀಗ ಟೊಮೊಟೊ ಬೆಲೆಯಲ್ಲಿ ಮತ್ತೆ ಚೇತರಿಕೆ ಕಂಡಿದ್ದು, ಗರಿಷ್ಠ 600 ರೂಪಾಯಿ ವರೆಗೆ ಟೊಮೆಟೊ ಮಾರಾಟವಾಗುತ್ತಿದೆ. ಇನ್ನು ಒಂದು ವಾರದ ಕಾಲ ಇದೇ ಬೆಲೆ ಮುಂದುವರೆಯಲಿದ್ದು ಮತ್ತೆ ಬೆಲೆ ಏರಿಕೆ ಆಗುವ ಸಾಧ್ಯತೆಗಳಿದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಮಳೆಯ ಕಾರಣದಿಂದ  ತರಕಾರಿ ಬೆಳೆಯ ಮೇಲೆ ಹೊಡೆತ ಬಿದ್ದಿದೆ, ಹೀಗಾಗಿ ಟೊಮೇಟೊ ಹೊರತಾಗಿ ಎಲ್ಲ ಬಗೆಯ ತರಕಾರಿಗಳ ಬೆಲೆಯೂ ಏರಿಕೆಯಾಗಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್ ಗಢ, ದೆಹಲಿ, ಜಾರ್ಖಂಡ್ ಮತ್ತಿತರ ರಾಜ್ಯಗಳಿಗೆ ಟೊಮೇಟೊ ರಫ್ತು ಮಾಡಲಾಗುತ್ತಿದೆ. ರಫ್ತು ಮಾಡುವ ರಾಜ್ಯಗಳಲ್ಲಿ ಟೊಮೇಟೊ ಇಳುವರಿ ಕಡಿಮೆಯಾದ್ದರಿಂದ ಇಲ್ಲಿ ಟೊಮೇಟೊಗೆ ಬೇಡಿಕೆ ಬಂದಿದೆ ಎಂದು ತಜ್ಞರು ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

2 hours ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

2 hours ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

3 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

7 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

7 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

18 hours ago