Advertisement
MIRROR FOCUS

ಮತ್ತೆ ಗಗನಕ್ಕೇರುವತ್ತ ಟೊಮ್ಯಾಟೋ ಬೆಲೆ |

Share

ಕಳೆದ ವರ್ಷ ಟೊಮೇಟೊ ಬೆಲೆ(Tomato price) ಸಾಕಷ್ಟು ಏರಿಕೆಯಾಗಿ ಟೊಮೆಟೊ ರೈತರು ಉತ್ತಮ ಆದಾಯ ಗಳಿಸಿದ್ದರು, ಕೆಲ ರೈತರಂತು ಲಕ್ಷಾಧಿಪತಿಗಳಾಗಿದ್ದರು. ಆ ವೇಳೆ ಟೊಮೇಟೊ ಕಳ್ಳತನದ ಘಟನೆಗಳೂ ನಡೆದಿದ್ದವು. ಸದ್ಯಕ್ಕೆ ಮತ್ತೆ ಅಂತಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಏಕೆಂದರೆ ಟೊಮೆಟೊ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ.

ಕೋಲಾರ ಎಪಿಎಂಸಿ ಟೊಮೆಟೊ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ ಒಂದು ವಾರದ ಹಿಂದೆ 15 ಕೆಜಿ ತೂಕದ ಒಂದು ಬಾಕ್ಸ್ ಟೊಮೆಟೊ ಬೆಲೆ 1000 ಗಡಿ ದಾಟಿತ್ತು. ಆದರೆ ಮೊನ್ನೆಯಿಂದ 15 ಕೆಜಿ ತೂಕದ ಒಂದು ಬಾಕ್ಸ್ ಬೆಲೆ 500 ರೂಪಾಯಿಗೆ ಕುಸಿತಗೊಂಡಿದ್ದು ರೈತರಿಗೆ ಭಾರೀ‌ ನಿರಾಸೆ ಉಂಟಾಗಿತ್ತು. ಇದೀಗ ಟೊಮೊಟೊ ಬೆಲೆಯಲ್ಲಿ ಮತ್ತೆ ಚೇತರಿಕೆ ಕಂಡಿದ್ದು, ಗರಿಷ್ಠ 600 ರೂಪಾಯಿ ವರೆಗೆ ಟೊಮೆಟೊ ಮಾರಾಟವಾಗುತ್ತಿದೆ. ಇನ್ನು ಒಂದು ವಾರದ ಕಾಲ ಇದೇ ಬೆಲೆ ಮುಂದುವರೆಯಲಿದ್ದು ಮತ್ತೆ ಬೆಲೆ ಏರಿಕೆ ಆಗುವ ಸಾಧ್ಯತೆಗಳಿದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಮಳೆಯ ಕಾರಣದಿಂದ  ತರಕಾರಿ ಬೆಳೆಯ ಮೇಲೆ ಹೊಡೆತ ಬಿದ್ದಿದೆ, ಹೀಗಾಗಿ ಟೊಮೇಟೊ ಹೊರತಾಗಿ ಎಲ್ಲ ಬಗೆಯ ತರಕಾರಿಗಳ ಬೆಲೆಯೂ ಏರಿಕೆಯಾಗಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್ ಗಢ, ದೆಹಲಿ, ಜಾರ್ಖಂಡ್ ಮತ್ತಿತರ ರಾಜ್ಯಗಳಿಗೆ ಟೊಮೇಟೊ ರಫ್ತು ಮಾಡಲಾಗುತ್ತಿದೆ. ರಫ್ತು ಮಾಡುವ ರಾಜ್ಯಗಳಲ್ಲಿ ಟೊಮೇಟೊ ಇಳುವರಿ ಕಡಿಮೆಯಾದ್ದರಿಂದ ಇಲ್ಲಿ ಟೊಮೇಟೊಗೆ ಬೇಡಿಕೆ ಬಂದಿದೆ ಎಂದು ತಜ್ಞರು ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

2 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

2 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

10 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

15 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

16 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago