Advertisement
MIRROR FOCUS

ಮತ್ತೆ ಗಗನಕ್ಕೇರುವತ್ತ ಟೊಮ್ಯಾಟೋ ಬೆಲೆ |

Share

ಕಳೆದ ವರ್ಷ ಟೊಮೇಟೊ ಬೆಲೆ(Tomato price) ಸಾಕಷ್ಟು ಏರಿಕೆಯಾಗಿ ಟೊಮೆಟೊ ರೈತರು ಉತ್ತಮ ಆದಾಯ ಗಳಿಸಿದ್ದರು, ಕೆಲ ರೈತರಂತು ಲಕ್ಷಾಧಿಪತಿಗಳಾಗಿದ್ದರು. ಆ ವೇಳೆ ಟೊಮೇಟೊ ಕಳ್ಳತನದ ಘಟನೆಗಳೂ ನಡೆದಿದ್ದವು. ಸದ್ಯಕ್ಕೆ ಮತ್ತೆ ಅಂತಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಏಕೆಂದರೆ ಟೊಮೆಟೊ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ.

ಕೋಲಾರ ಎಪಿಎಂಸಿ ಟೊಮೆಟೊ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ ಒಂದು ವಾರದ ಹಿಂದೆ 15 ಕೆಜಿ ತೂಕದ ಒಂದು ಬಾಕ್ಸ್ ಟೊಮೆಟೊ ಬೆಲೆ 1000 ಗಡಿ ದಾಟಿತ್ತು. ಆದರೆ ಮೊನ್ನೆಯಿಂದ 15 ಕೆಜಿ ತೂಕದ ಒಂದು ಬಾಕ್ಸ್ ಬೆಲೆ 500 ರೂಪಾಯಿಗೆ ಕುಸಿತಗೊಂಡಿದ್ದು ರೈತರಿಗೆ ಭಾರೀ‌ ನಿರಾಸೆ ಉಂಟಾಗಿತ್ತು. ಇದೀಗ ಟೊಮೊಟೊ ಬೆಲೆಯಲ್ಲಿ ಮತ್ತೆ ಚೇತರಿಕೆ ಕಂಡಿದ್ದು, ಗರಿಷ್ಠ 600 ರೂಪಾಯಿ ವರೆಗೆ ಟೊಮೆಟೊ ಮಾರಾಟವಾಗುತ್ತಿದೆ. ಇನ್ನು ಒಂದು ವಾರದ ಕಾಲ ಇದೇ ಬೆಲೆ ಮುಂದುವರೆಯಲಿದ್ದು ಮತ್ತೆ ಬೆಲೆ ಏರಿಕೆ ಆಗುವ ಸಾಧ್ಯತೆಗಳಿದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಮಳೆಯ ಕಾರಣದಿಂದ  ತರಕಾರಿ ಬೆಳೆಯ ಮೇಲೆ ಹೊಡೆತ ಬಿದ್ದಿದೆ, ಹೀಗಾಗಿ ಟೊಮೇಟೊ ಹೊರತಾಗಿ ಎಲ್ಲ ಬಗೆಯ ತರಕಾರಿಗಳ ಬೆಲೆಯೂ ಏರಿಕೆಯಾಗಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್ ಗಢ, ದೆಹಲಿ, ಜಾರ್ಖಂಡ್ ಮತ್ತಿತರ ರಾಜ್ಯಗಳಿಗೆ ಟೊಮೇಟೊ ರಫ್ತು ಮಾಡಲಾಗುತ್ತಿದೆ. ರಫ್ತು ಮಾಡುವ ರಾಜ್ಯಗಳಲ್ಲಿ ಟೊಮೇಟೊ ಇಳುವರಿ ಕಡಿಮೆಯಾದ್ದರಿಂದ ಇಲ್ಲಿ ಟೊಮೇಟೊಗೆ ಬೇಡಿಕೆ ಬಂದಿದೆ ಎಂದು ತಜ್ಞರು ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

22 hours ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

22 hours ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

1 day ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

2 days ago