Advertisement
MIRROR FOCUS

ಮತ್ತೆ ಗಗನಕ್ಕೇರುವತ್ತ ಟೊಮ್ಯಾಟೋ ಬೆಲೆ |

Share

ಕಳೆದ ವರ್ಷ ಟೊಮೇಟೊ ಬೆಲೆ(Tomato price) ಸಾಕಷ್ಟು ಏರಿಕೆಯಾಗಿ ಟೊಮೆಟೊ ರೈತರು ಉತ್ತಮ ಆದಾಯ ಗಳಿಸಿದ್ದರು, ಕೆಲ ರೈತರಂತು ಲಕ್ಷಾಧಿಪತಿಗಳಾಗಿದ್ದರು. ಆ ವೇಳೆ ಟೊಮೇಟೊ ಕಳ್ಳತನದ ಘಟನೆಗಳೂ ನಡೆದಿದ್ದವು. ಸದ್ಯಕ್ಕೆ ಮತ್ತೆ ಅಂತಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಏಕೆಂದರೆ ಟೊಮೆಟೊ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ.

ಕೋಲಾರ ಎಪಿಎಂಸಿ ಟೊಮೆಟೊ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ ಒಂದು ವಾರದ ಹಿಂದೆ 15 ಕೆಜಿ ತೂಕದ ಒಂದು ಬಾಕ್ಸ್ ಟೊಮೆಟೊ ಬೆಲೆ 1000 ಗಡಿ ದಾಟಿತ್ತು. ಆದರೆ ಮೊನ್ನೆಯಿಂದ 15 ಕೆಜಿ ತೂಕದ ಒಂದು ಬಾಕ್ಸ್ ಬೆಲೆ 500 ರೂಪಾಯಿಗೆ ಕುಸಿತಗೊಂಡಿದ್ದು ರೈತರಿಗೆ ಭಾರೀ‌ ನಿರಾಸೆ ಉಂಟಾಗಿತ್ತು. ಇದೀಗ ಟೊಮೊಟೊ ಬೆಲೆಯಲ್ಲಿ ಮತ್ತೆ ಚೇತರಿಕೆ ಕಂಡಿದ್ದು, ಗರಿಷ್ಠ 600 ರೂಪಾಯಿ ವರೆಗೆ ಟೊಮೆಟೊ ಮಾರಾಟವಾಗುತ್ತಿದೆ. ಇನ್ನು ಒಂದು ವಾರದ ಕಾಲ ಇದೇ ಬೆಲೆ ಮುಂದುವರೆಯಲಿದ್ದು ಮತ್ತೆ ಬೆಲೆ ಏರಿಕೆ ಆಗುವ ಸಾಧ್ಯತೆಗಳಿದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಮಳೆಯ ಕಾರಣದಿಂದ  ತರಕಾರಿ ಬೆಳೆಯ ಮೇಲೆ ಹೊಡೆತ ಬಿದ್ದಿದೆ, ಹೀಗಾಗಿ ಟೊಮೇಟೊ ಹೊರತಾಗಿ ಎಲ್ಲ ಬಗೆಯ ತರಕಾರಿಗಳ ಬೆಲೆಯೂ ಏರಿಕೆಯಾಗಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್ ಗಢ, ದೆಹಲಿ, ಜಾರ್ಖಂಡ್ ಮತ್ತಿತರ ರಾಜ್ಯಗಳಿಗೆ ಟೊಮೇಟೊ ರಫ್ತು ಮಾಡಲಾಗುತ್ತಿದೆ. ರಫ್ತು ಮಾಡುವ ರಾಜ್ಯಗಳಲ್ಲಿ ಟೊಮೇಟೊ ಇಳುವರಿ ಕಡಿಮೆಯಾದ್ದರಿಂದ ಇಲ್ಲಿ ಟೊಮೇಟೊಗೆ ಬೇಡಿಕೆ ಬಂದಿದೆ ಎಂದು ತಜ್ಞರು ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

2 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

4 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

4 hours ago

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago