Advertisement
The Rural Mirror ಫಾಲೋಅಪ್

#TomatoPrice | ದಿಢೀರ್ ಕುಸಿದ ಟೊಮೆಟೋ ರೇಟ್ : ಕೆ.ಜಿಗೆ 40 ರೂಪಾಯಿಗೆ ಕುಸಿತ : ರೈತರಿಗೆ ಬೇಸರ-ಗ್ರಾಹಕನಿಗೆ ಖುಷಿ

Share

ನಾವು ದಿನನಿತ್ಯ ಕೊಂಡುಕೊಳ್ಳುವ ವಸ್ತುಗಳ ಬೆಲೆ ಹಾಗೇನೆ. ಒಂದಿನ ಜಾಸ್ತಿಯಾದ್ರೆ, ಇನ್ನೊಂದು ದಿನ ಇಳಿಕೆಯಾಗುತ್ತದೆ. ಅದರಲ್ಲೂ ತರಕಾರಿ ಬೆಲೆ ಅಂತೂ ಇವತ್ತಿದ್ದ ಬೆಲೆ ನಾಳೆ ಇರೋದಿಲ್ಲ. ಬೆಲೆ ಜಾಸ್ತಿಯಾದ್ರೆ ರೈತನಿಗೆ ಖಷಿ. ಅದೇ ಬೆಲೆ ಕಮ್ಮಿಯಾದ್ರೆ ಗ್ರಾಹಕನಿಗೆ ಲಾಭ. ಈಗ ಟೊಮೆಟೋ ಕಥೆನೂ ಅದೇ.  ಕೆಲವು ದಿನಗಳಿಂದ ಚಿನ್ನದಂತಾಗಿದ್ದ ಟೊಮೆಟೋ ಬೆಲೆ ಇದೀಗ ದಿಢೀರ್ ಇಳಿಕೆ ಕಂಡಿದೆ.

200 ರೂ. ಗಡಿ ದಾಟಿ ಗ್ರಾಹಕರ ಆತಂಕಕ್ಕೆ ಕಾರಣವಾಗಿದ್ದ ಟೊಮೆಟೋ ಬೆಲೆ ಈಗ ಏಕಾಏಕಿ ಕುಸಿದಿದೆ. ಸದ್ಯ ಕೆ.ಜಿ ಟೊಮೆಟೋ ಬೆಲೆ 30-40ರೂ.ಗೆ ಕುಸಿತ ಕಂಡಿದೆ. ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ಟೊಮೆಟೋ ದರ ಭಾರೀ ಇಳಿಕೆಯಾಗಿದೆ. 15 ಕೆಜಿ ಬಾಕ್ಸ್ 2,000-2,500 ರೂಪಾಯಿ ಕಂಡಿದ್ದ ಟೊಮೆಟೋ ಬೆಲೆ ಈಗ 450 ರೂಪಾಯಿಗೆ ಇಳಿದಿದೆ. ಕಳೆದ ನಾಲ್ಕೈದು ದಿನದ ಹಿಂದೆ ಟೊಮ್ಯಾಟೊ ದರ 150 ರಿಂದ 169 ರೂಪಾಯಿ ಇತ್ತು. ಒಂದು ಕ್ರೇಟ್ ಗೆ 2,000 ಇತ್ತು. ಇಂದು ಒಂದು ಕ್ರೇಟ್ ಗೆ 1,500 ರೂಪಾಯಿ ಆಗಿದೆ.

ಮಳೆ ಇದ್ದ ಕಾರಣದಿಂದ ರೈತರಿಂದ ಮಾರುಕಟ್ಟೆಗೆ ಟೊಮೆಟೋ ಸರಬರಾಜು ಆಗದ ಕಾರಣ ದರ ಜಾಸ್ತಿ ಆಗಿತ್ತು. ಮಳೆ ನಿಂತ ಕಾರಣ ಇದೀಗ ಟೊಮೆಟೋ ಸರಬರಾಜು ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಂಪು ಸುಂದರಿಯ ಬೆಲೆ ಕಡಿಮೆ ಆಗಿದೆ. ಬೆಲೆ ಕಡಿಮೆ ಆದ ಮೇಲೆ ಗ್ರಾಹಕರು ಬರುತ್ತಿಲ್ಲ ಎಂದು ವ್ಯಾಪಾರಸ್ಥರು ಹೇಳುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

7 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

8 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

16 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

18 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

1 day ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

1 day ago