ಭಾರತದ ದಕ್ಷಿಣ ರಾಜ್ಯಗಳಾದ ಮಹಾರಾಷ್ಟ್ರ, ಕರ್ನಾಟಕ, ಕೇರಳದಲ್ಲಿ ಮಳೆಯ ಅಬ್ಬರಕ್ಕೆ ಜನ ಜೀವನ ಹೈರಾಣಾಗಿದೆ. ಆದರೆ ಅತ್ತ ಕಾಶ್ಮೀರ ಕಣಿವೆಯ ಜನತೆ ಬಿಸಿಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದೆದಾರೆ. ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಕಳೆದ ರಾತ್ರಿ ಗರಿಷ್ಠ 24.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಮಕ್ಕಳು, ಮಹಿಳೆಯರು, ವಯೋವೃದ್ಧರು ಬಿಸಿಲು ಮತ್ತು ಬಿಸಿ ಗಾಳಿಯಿಂದ ತತ್ತರಿಸಿದ್ದಾರೆ. ಬಿಸಿಲಿನ ಹೊಡೆತದಿಂದ ಹೊರಬರಲು ಫ್ಯಾನ್, ಏರ್ ಕೂಲರ್, ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಎರಡು ದಿನಗಳ ಕಾಲ ಶಾಲೆಗಳಿಗೂ ಕೂಡ ರಜೆ ಘೋಷಿಸಲಾಗಿದೆ.
ತಾಪಮಾನ ಇಳಿಕೆ ಮುನ್ಸೂಚನೆ: ಸೋಮವಾರದಿಂದ ಜಮ್ಮು ಮತ್ತು ಕಾಶ್ಮೀರದಾದ್ಯಂತ ತಾಪಮಾನದಲ್ಲಿ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದಲ್ಲಿ ಭಾನುವಾರದಂದು ಅತಿ ಹೆಚ್ಚು ಮತ್ತು ಮೂರನೇ ಸಾರ್ವಕಾಲಿಕ ಗರಿಷ್ಠ 36.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ಜುಲೈ 10, 1946 ರಂದು ಶ್ರೀನಗರದಲ್ಲಿ ಸಾರ್ವಕಾಲಿಕ ಗರಿಷ್ಠ 38.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ಜುಲೈ 9, 1999 ರಂದು 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಅಧಿಕಾರಿಗಳು ತಿಳಿಸಿದ್ದಾರೆ.
– ಅಂತರ್ಜಾಲ ಮಾಹಿತಿ
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…