ಭಾರತದ ದಕ್ಷಿಣ ರಾಜ್ಯಗಳಾದ ಮಹಾರಾಷ್ಟ್ರ, ಕರ್ನಾಟಕ, ಕೇರಳದಲ್ಲಿ ಮಳೆಯ ಅಬ್ಬರಕ್ಕೆ ಜನ ಜೀವನ ಹೈರಾಣಾಗಿದೆ. ಆದರೆ ಅತ್ತ ಕಾಶ್ಮೀರ ಕಣಿವೆಯ ಜನತೆ ಬಿಸಿಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದೆದಾರೆ. ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಕಳೆದ ರಾತ್ರಿ ಗರಿಷ್ಠ 24.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಮಕ್ಕಳು, ಮಹಿಳೆಯರು, ವಯೋವೃದ್ಧರು ಬಿಸಿಲು ಮತ್ತು ಬಿಸಿ ಗಾಳಿಯಿಂದ ತತ್ತರಿಸಿದ್ದಾರೆ. ಬಿಸಿಲಿನ ಹೊಡೆತದಿಂದ ಹೊರಬರಲು ಫ್ಯಾನ್, ಏರ್ ಕೂಲರ್, ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಎರಡು ದಿನಗಳ ಕಾಲ ಶಾಲೆಗಳಿಗೂ ಕೂಡ ರಜೆ ಘೋಷಿಸಲಾಗಿದೆ.
ತಾಪಮಾನ ಇಳಿಕೆ ಮುನ್ಸೂಚನೆ: ಸೋಮವಾರದಿಂದ ಜಮ್ಮು ಮತ್ತು ಕಾಶ್ಮೀರದಾದ್ಯಂತ ತಾಪಮಾನದಲ್ಲಿ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದಲ್ಲಿ ಭಾನುವಾರದಂದು ಅತಿ ಹೆಚ್ಚು ಮತ್ತು ಮೂರನೇ ಸಾರ್ವಕಾಲಿಕ ಗರಿಷ್ಠ 36.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ಜುಲೈ 10, 1946 ರಂದು ಶ್ರೀನಗರದಲ್ಲಿ ಸಾರ್ವಕಾಲಿಕ ಗರಿಷ್ಠ 38.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ಜುಲೈ 9, 1999 ರಂದು 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಅಧಿಕಾರಿಗಳು ತಿಳಿಸಿದ್ದಾರೆ.
– ಅಂತರ್ಜಾಲ ಮಾಹಿತಿ
ಕಳೆದ ಕೆಲವು ದಿನಗಳಿಂದ ಅಡಿಕೆ ಬೆಳೆಗಾರರಿಗೆ ನಿರೀಕ್ಷೆಯ ಮೇಲೆ ನಿರೀಕ್ಷೆ.ಚಾಲಿ ಅಡಿಕೆ ಧಾರಣೆ…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್…
ಕುಶಾಲಿ ಗೌಡ, ಗ್ರೆಡ್ -3, ಜ್ಞಾನ ಅಕಾಡೆಮಿ, ತರಬನ ಹಳ್ಳಿ ಬೆಂಗಳೂರು |…
ಅನ್ವಿತಾ ಸಿ, 9 ನೇ ತರಗತಿ, ಸರ್ಕಾರಿ ಪ್ರೌಢಶಾಲೆ , ಪಂಜ |…
ಜಮ್ಮು ಮತ್ತು ಕಾಶ್ಮೀರ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯ ಹಲವೆಡೆ ಮುಂದಿನ…
ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ…