ಭಾರತದ ದಕ್ಷಿಣ ರಾಜ್ಯಗಳಾದ ಮಹಾರಾಷ್ಟ್ರ, ಕರ್ನಾಟಕ, ಕೇರಳದಲ್ಲಿ ಮಳೆಯ ಅಬ್ಬರಕ್ಕೆ ಜನ ಜೀವನ ಹೈರಾಣಾಗಿದೆ. ಆದರೆ ಅತ್ತ ಕಾಶ್ಮೀರ ಕಣಿವೆಯ ಜನತೆ ಬಿಸಿಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದೆದಾರೆ. ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಕಳೆದ ರಾತ್ರಿ ಗರಿಷ್ಠ 24.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಮಕ್ಕಳು, ಮಹಿಳೆಯರು, ವಯೋವೃದ್ಧರು ಬಿಸಿಲು ಮತ್ತು ಬಿಸಿ ಗಾಳಿಯಿಂದ ತತ್ತರಿಸಿದ್ದಾರೆ. ಬಿಸಿಲಿನ ಹೊಡೆತದಿಂದ ಹೊರಬರಲು ಫ್ಯಾನ್, ಏರ್ ಕೂಲರ್, ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಎರಡು ದಿನಗಳ ಕಾಲ ಶಾಲೆಗಳಿಗೂ ಕೂಡ ರಜೆ ಘೋಷಿಸಲಾಗಿದೆ.
ತಾಪಮಾನ ಇಳಿಕೆ ಮುನ್ಸೂಚನೆ: ಸೋಮವಾರದಿಂದ ಜಮ್ಮು ಮತ್ತು ಕಾಶ್ಮೀರದಾದ್ಯಂತ ತಾಪಮಾನದಲ್ಲಿ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದಲ್ಲಿ ಭಾನುವಾರದಂದು ಅತಿ ಹೆಚ್ಚು ಮತ್ತು ಮೂರನೇ ಸಾರ್ವಕಾಲಿಕ ಗರಿಷ್ಠ 36.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ಜುಲೈ 10, 1946 ರಂದು ಶ್ರೀನಗರದಲ್ಲಿ ಸಾರ್ವಕಾಲಿಕ ಗರಿಷ್ಠ 38.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ಜುಲೈ 9, 1999 ರಂದು 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಅಧಿಕಾರಿಗಳು ತಿಳಿಸಿದ್ದಾರೆ.
– ಅಂತರ್ಜಾಲ ಮಾಹಿತಿ
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…